ವಿಜಯಪುರ | ಕೃಷ್ಣಾನದಿಯ ಒಳಹರಿವು ಹೆಚ್ಚಳ: ಆಲಮಟ್ಟಿ ಜಲಾಶಯದ ಹೊರಹರಿವೂ ಹೆಚ್ಚಾಗುವ ಸಾಧ್ಯತೆ

Date:

ಕೃಷ್ಣಾನದಿಯ ಒಳಹರಿವು ಹೆಚ್ಚಾಗಿರುವ ಕಾರಣ ಆಲಮಟ್ಟಿ ಜಲಾಶಯದ ಹೊರಹರಿವನ್ನು 1.75 ಲಕ್ಷ ಕ್ಯೂಸೆಕ್‌ನಿಂದ 2 ಲಕ್ಷ ಕ್ಯೂಸೆಕ್‌ಗೆ ಹೆಚ್ಚಿಸಲಾಗಿದೆ.

ಮುಂದಿನ 48 ಗಂಟೆಗಳಲ್ಲಿ ಭಾರಿ ಪ್ರಮಾಣದ ನೀರು ಆಲಮಟ್ಟಿ ಜಲಾಶಯಕ್ಕೆ ಹರಿದು ಬರುವ ನಿರೀಕ್ಷೆಯಿದ್ದು, ಮುಂಜಾಗ್ರತೆ ಕ್ರಮವಾಗಿ ಜಲಾಶಯದ ಹೊರಹರಿವನ್ನು ಹಂತ ಹಂತವಾಗಿ ಹೆಚ್ಚಿಸಲಾಗುತ್ತಿದೆ.

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ಬರ ಹೆಚ್ಚಿದ್ದರಿಂದ ಒಳಹರಿವು ಹೆಚ್ಚುತ್ತಿದೆ. ಇದೇ ರೀತಿ ಮಳೆಯ ಅಬ್ಬರ ಮುಂದುವರೆದರೆ ಹೊರಹರಿವು ಮತ್ತಷ್ಟು ಹೆಚ್ಚಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾರಾಷ್ಟ್ರದ ನವಜಾದಲ್ಲಿ ಮಂಗಳವಾರ 31.6 ಸೆಂ.ಮೀ ದಾಖಲೆಯ ಮಳೆಯಾಗಿದೆ. ಘಟಪ್ರಭಾ ನದಿಯಿಂದಲೂ 50 ಸಾವಿರ ಕ್ಯೂಸೆಕ್‌ಗೂ ಅಧಿಕ ನೀರು ಹರಿದು ಬರುತ್ತಿದೆ. 2.5 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಬಿಟ್ಟಾಗ ಆಲಮಟ್ಟಿ ಜಲಾಶಯದ ಮುಂಭಾಗದ ಕೃಷ್ಣಾ ತೀರದ ಗ್ರಾಮಗಳ ಜಮೀನಿಗೆ ನೀರು ನುಗ್ಗುವ ಸಾಧ್ಯತೆಯಿದೆ. ಆಲಮಟ್ಟಿ ಜಲಾಶಯಕ್ಕೆ ಸಂಜೆ 6ಕ್ಕೆ 1,11,306 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದಿಂದ 2 ಲಕ್ಷ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 519.60 ಮೀ ಎತ್ತರದ ಜಲಾಶಯದಲ್ಲಿ 518.92 ಮೀ.ವರೆಗೆ ನೀರು ಇದೆ.

ಪ್ರವಾಹಕ್ಕೊಳಗಾಗಬಹುದಾದ ಕೃಷ್ಣಾ ತೀರದ ಗ್ರಾಮಗಳಲ್ಲಿ ನಿಡಗುಂದಿ ತಾಲೂಕು ಆಡಳಿತ ಆಲಮಟ್ಟಿ ಜಲಾಶಯದ ನೀರು ಬಿಟ್ಟ ಬಗ್ಗೆ ನದಿ ತೀರಕ್ಕೂ ಜನ, ಜಾನುವಾರುಗಳು ತೆರಳದಂತೆ ಡಂಗೂರ ಸಾರಿ ಸೂಚಿಸಲಾಗುತ್ತಿದೆ.

ಆಲಮಟ್ಟಿ ಜಲಾಶಯಕ್ಕೆ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಅಪಾರ ಪ್ರಮಾಣದ ನೀರು ಹರಿದು ಬಂದರೂ ಕೆಬಿಜೆಎನ್‌ಎಲ್ ಸಮರ್ಥವಾಗಿ ನಿರ್ವಹಣೆ ಮಾಡಿದ ಪರಿಣಾಮ ನದಿ ತೀರದಲ್ಲಿ ಇದುವರೆಗೆ ಯಾವುದೇ ಪ್ರವಾಹ ಸ್ಥಿತಿ ಉಂಟಾಗಿಲ್ಲ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಸೇರಿದ ಕುಡಿಯುವ ನೀರಿನ ಬಾವಿ ಮುಚ್ಚಿಸಿದ ಸವರ್ಣೀಯರು

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಭಾರೀ ಪ್ರದೇಶದಲ್ಲಿ ಸುರಿಯುವ ಪ್ರಮಾಣದ ಮಳೆಯಿಂದಾಗಿ ಕೃಷ್ಣಾ ಹಾಗೂ ಅದರ ಉಪ ನದಿಗಳಿಗೆ ಅಬ್ಬರ ಉಂಟಾಗಿ ಆಲಮಟ್ಟಿ ಜಲಾಶಯಕ್ಕೆ ಅಪಾರ ನೀರು ಹರಿದು ಬರುತ್ತದೆ. ಹೀಗೆ ಹರಿದು ಬರುವ ನೀರನ್ನು ನದಿ ಮುಂಭಾಗಕ್ಕೆ ಬಿಟ್ಟಾಗ ತೀರದ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿಯಾಗುವುದು ಪ್ರತಿ ವರ್ಷ ಕಂಡುಬರುತ್ತಿತ್ತು. ಕೆಲ ಬಾರಿ ಜನವಸತಿಗೂ ನೀರು ನುಗ್ಗಿರುವುದೂ ಇದೆ. ಕಳೆದ ವರ್ಷವೂ ಕೂಡ ನದಿ ತೀರದ ಕೆಲ ಜಮೀನುಗಳಿಗೆ ಹಾನಿಯಾಗಿತ್ತು. ಆದರೆ ಈ ಬಾರಿ ಈ ಪ್ರವಾಹ ಉಂಟಾಗದಂತೆ ಕೆಬಿಜೆಎನ್‌ಎಲ್ ಅಭಿಯಂತರರು ನೀರು ನಿರ್ವಹಣೆ ಮಾಡಿದ್ದರಿಂದ ಪ್ರವಾಹ ಸ್ಥಿತಿ ಎದುರಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...