ದಲಿತರ ಬಹುದಿನಗಳ ಬೇಡಿಕೆಯಾಗಿದ್ದ ಒಳಮೀಸಲಾತಿ ಬೇಡಿಕೆಯನ್ನು ಯಾರಿಗೂ ಅನ್ಯಾಯ ಆಗದಂತೆ ಎಲ್ಲರಿಗೂ ಸಹಮತ ಬರುವಂತೆ ಕಾಂಗ್ರೆಸ್ ಪಕ್ಷದ ರಾಜ್ಯ ಸರ್ಕಾರ ಜಾರಿ ಮಾಡಿದೆ. ಆ ಮೂಲಕ ತಾನು ಯಾವತ್ತಿದ್ದರೂ ಅಹಿಂದ ವರ್ಗಗಳ ಹಿತ ಕಾಪಾಡುವಲ್ಲಿ ಮುಂಚೂಣಿಯಲ್ಲಿ ಇರುವುದಾಗಿ ನಿರೂಪಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ಎಲ್ಲ ಶೋಷಿತ ಹಾಗೂ ದಲಿತ ಸಮುದಾಯದವರು ಚಿರಋಣಿಯಾಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ವಿಜಯಪುರ ಜಿಲ್ಲಾ ಅಧ್ಯಕ್ಷ ರಮೇಶ ಗುಬ್ಬೆವಾಡ ತಿಳಿಸಿದರು.
ವಿಜಯಪುರ ನಗರದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳಮೀಸಲಾತಿಗಾಗಿ ಹೋರಾಡಿದ ಎಲ್ಲ ಹೋರಾಟಗಾರರು, ಸಂಘಟನೆಗಳು, ರಾಜಕೀಯ ಮುಖಂಡರುಗಳು, ದಲಿತ ಸಚಿವರುಗಳಾದ ಶ್ರೀ ಜಿ. ಪರಮೇಶ್ವರ, ಕೆ.ಹೆಚ್. ಮುನಿಯಪ್ಪ, ಎಚ್.ಸಿ. ಮಹಾದೇವಪ್ಪ, ಆರ್.ಬಿ. ತಿಮ್ಮಾಪೂರ, ಪ್ರಿಯಾಂಕ ಖರ್ಗೆ, ಶಿವರಾಜ ತಂಗಡಗಿ, ಉಪ ಸ್ಪೀಕರ್ ರುದ್ರಪ್ಪ ಲಮಾಣಿ ಹಾಗೂ ಎಲ್ಲ ದಲಿತ ಶಾಸಕರುಗಳಿಗೆ ಧನ್ಯವಾದ ಸಲ್ಲಿಸಿದರು.
ವಿಜಯಪುರ ಜಿಲ್ಲೆಯ ಒಳಮೀಸಲಾತಿ ಹೋರಾಟಗಾರ ಮತ್ತು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಭಾಷ್ ಕಾಲೇಬಾ ಮಾತನಾಡಿದ, ಬಹಳ ವರ್ಷಗಳಿಂದ ಒಳಮೀಸಲಾತಿ ಜಾರಿಗಾಗಿ ಹೋರಾಟ ಮಾಡುತ್ತಿದ್ದ ದಲಿತರ ಬೇಡಿಕೆಯನ್ನು ಮನಗಂಡು ಕಾಂಗ್ರೆಸ್ ಪಕ್ಷ ಕಳೆದ ಚುನಾವಣೆಯಲ್ಲಿ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿ ತಾನು ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ಜಾರಿ ಮಾಡುವುದಾಗಿ ದಲಿತರಿಗೆ ಆಶ್ವಾಸನೆ ನೀಡಿತ್ತು.ಈ ಕಾರಣಕ್ಕಾಗಿ ಇಡೀ ದಲಿತ ಸಮುದಾಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿತು. ಇದರ ಫಲವಾಗಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ 138 ಸೀಟುಗಳು ಗೆದ್ದುಕೊಂಡಿತು. ದಲಿತರ ಸಮುದಾಯಕ್ಕೆ ನೀಡಿದ ಭರವಸೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿಯನ್ನು ಜಾರಿಗೊಳಿಸಿ ನುಡಿದಂತೆ ನಡೆದಿದೆ ಎಂದರು.
ದಲಿತರಿಗೆ ಸಾಮಾಜಿಕ ನ್ಯಾಯವನ್ನು ಒದಗಿಸಿದೆ ರಾಜ್ಯದ ಪರಿಶಿಷ್ಟ ಜಾತಿಗಳಲ್ಲಿ ಅನೇಕ ಜಾತಿಗಳು ಮೀಸಲಾತಿಯಿಂದ ವಂಚಿವಾಗಿಸಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಆರ್ಥಿಕವಾಗಿ ಅತ್ಯಂತ ಕೆಳಮಟ್ಟದಲ್ಲಿ ಇದ್ದು ಮೀಸಲಾತಿಯಿಂದ ವಂಚಿವಾಗಿ ಶೋಷಣೆ ಅನುಭವಿಸುತ್ತಿರುವುದನ್ನು ಮನಗಂಡು ಸರ್ಕಾರ ಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳಲ್ಲಿ ಜನಸಂಖ್ಯೆ ಆಧಾರದ ಮೇಲೆ ಒಳಮೀಲಾತಿಯನ್ನು ಜಾರಿಗೊಳಿಸಬೇಕೆಂದು ನಿರ್ಧರಿಸಿದೆ. ಮೂರು ಭಾಗಗಳಲ್ಲಿ ಮೀಸಲಾತಿಯನ್ನು ವರ್ಗೀಕರಿಸಿ ಜಾರಿ ಮಾಡಲಾಗಿದೆ. ಇದರ ಮೂಲಕ ದಲಿತರಿಗೆ ಸಾಮಾಜಿಕ ನ್ಯಾಯವನ್ನು ನೀಡಲಾಗಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ದಲಿತರಿಗೆ ಒಳಮೀಸಲಾತಿ ಜಾರಿ ಮಾಡುವುದಾಗಿ ಬಗ್ಗೆ ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು ಈಗ ನುಡಿದಂತೆ ನಡೆದು ದಲಿತ ಜನಾಂಗಕ್ಕೆ ಐತಿಹಾಸಿಕ ಕೊಡುಗೆಯನ್ನು ನೀಡಲಾಗಿದೆ ಇದಕ್ಕೆ ಸಮಸ್ತ ಕಾರಣಕರ್ತರಾದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಲ್ಲ ದಲಿತ ಸಮಾಜದ ಸಚಿವರು ಮತ್ತು ಶಾಸಕರುಗಳಿಗೆ ದಲಿತ ಸಮಾಜದ ವತಿಯಿಂದ ಅಭಿಮಾನಿಗಳು ಎಂದು ಹೇಳಿದರು.
ಇದನ್ನು ಓದಿದ್ದೀರಾ? ಬಾಗಲಕೋಟೆ | ಸರ್ಕಾರದಿಂದ ಕುರಿಗಾಹಿಗಳ ಹಿತರಕ್ಷಣೆಗೆ ಕಾಯ್ದೆ: ಕುರುಬರ ಪದವೀಧರರ ಸಂಘ ಸ್ವಾಗತ
ಸುದ್ದಿಗೋಷ್ಠಿಯಲ್ಲಿ ಪರಶುರಾಮ ಹೊಸಮನಿ, ಬಾಬು ಗುಡಮಿ, ಕೃಷ್ಣಾ ಲಮಾಣಿ, ವಸಂತ ಹೊನಮೊಡೆ, ವಿಠ್ಠಲ ಸಂದಿಮನಿ, ಸಂತೋಷ್ ಬಾಲಗಾಂವಿ ಮುಂತಾದವರು ಇದ್ದರು.





