ವಿಜಯಪುರ | ಅಭಿವೃದ್ಧಿ ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್‌ಗೆ ಮತ ನೀಡಿ: ಶಾಸಕ ಯಶವಂತರಾಯಗೌಡ ಪಾಟೀಲ

Date:

ಆಗಿರುವ ಮತ್ತು ಆಗಬೇಕಿರುವ ಅಭಿವೃದ್ಧಿ ಕೆಲಸಗಳನ್ನು ಗಮನದಲ್ಲಿರಿಸಿ ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾದಲ್ಲಿ ನಡೆದ ಜಿಪಂ ವ್ಯಾಪ್ತಿಯ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರ ಪರವಾಗಿ ಮತಯಾಚಿಸಿ ಅವರು ಮಾತನಾಡಿದರು.

ಆಲಗೂರರು ಮಾದರಿಯ ಸಂಸದರಾಗುವ ಎಲ್ಲ ಲಕ್ಷಣಗಳಿವೆ. ಅವರು ವಿದ್ಯಾವಂತರಾಗಿದ್ದು, ನಿಮ್ಮ ಸಮಸ್ಯೆಗಳನ್ನು ಸಂಸತ್ತಿನಲ್ಲಿ ದನಿ ಎತ್ತಲಿದ್ದಾರೆ. ಅನೇಕ ಸಂಸದರು ಕಾಂಗ್ರೆಸ್‌ನಿಂದ ಕೆಲಸ ಮಾಡಿ ಹೋಗಿದ್ದಾರೆ. ಗುಡದಿನ್ನಿ, ಧುಬೆಯಂತಹವರನ್ನು ಈಗಲೂ ನಾವೆಲ್ಲ ನೆನಪಿಸುತ್ತಿದ್ದೇವೆ. ದಶಕಗಳಿಂದ ಕಾಂಗ್ರೆಸ್ ಗೆದ್ದಿಲ್ಲ. ಈ ಬಾರಿ ಬದಲಾವಣೆ ನಿಶ್ಚಿತ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಜರಾತ್ ಮಾಡೆಲ್ ಹೆಸರು ಹೇಳಿ ಬಂದವರು ದೇಶವನ್ನು ಮಾರಲು ನಿಂತಿದ್ದಾರೆ. ಕ್ಯಾಪಿಟಲಿಸ್ಟ್‌ಗಳ ಕೈಗೆ ದೇಶವನ್ನು ನೀಡಿದ್ದು, ಮೋದಿ ಹಾಗೂ ಅಮಿತ್ ಶಾ ದೇಶ ಮಾರುತ್ತಿದ್ದರೆ ಇನ್ನಿಬ್ಬರಾದ ಅಂಬಾನಿ, ಆದಾನಿಗಳು ತೆಗೆದುಕೊಳ್ಳುತ್ತಿದ್ದಾರೆ. ಭಾವನೆಗಳನ್ನು ಕೆರಳಿಸಿ ಮತ ಕೇಳುವುದಷ್ಟೇ ಮೋದಿಯವರ ಕೆಲಸವಾಗಿದೆ. ಇವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಹೇಳಿದರು.

ಕಾಂಗ್ರೆಸ್ ಈ ದೇಶವನ್ನು ಕಟ್ಟಿದೆ. ಸಂವಿಧಾನ ಉಳಿಸಲು ಅದು ಯಾವತ್ತೂ ಶ್ರಮಿಸುತ್ತಿದೆ. ಬಡವ, ನಿರ್ಗತಿಕರ ಬದುಕನ್ನು ನಾವು ಕಟ್ಟಿದ್ದೇವೆ. ಮೋದಿಯವರು ಆಯತಪ್ಪಿ ಮಾತನಾಡುತ್ತಿದ್ದಾರೆ. ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಹೇಳದೇ ಏನೇನೊ ಮಾತನಾಡುತ್ತಿದ್ದಾರೆ ಎಂದರು.

ಶಾಸ್ತ್ರೀ, ನೆಹರೂ, ಇಂದಿರಾಗಾಂಧಿ, ರಾಜೀವ್‌ ಗಾಂಧಿ ಅವರಂತಹ ಧೀಮಂತರು ದೇಶವನ್ನು ಮುನ್ನೆಲೆಗೆ ತಂದಿದ್ದಾರೆ. ಕಾಂಗ್ರೆಸ್ ಒಂದೇ ಭರವಸೆ ಎಂದು ಹೇಳಿದರು.

ಅಭ್ಯರ್ಥಿ ಪ್ರೊ.ರಾಜು ಆಲಗೂರ ಮಾತನಾಡಿ, ನಮ್ಮ ರಾಜ್ಯ ಕೇಂದ್ರ ಸರ್ಕಾರಕ್ಕೆ ಅತಿ ಹೆಚ್ಚು ತೆರಿಗೆ ನೀಡುತ್ತಿದ್ದರೂ ಅದರ ಪಾಲನ್ನು ನಮಗೆ ಕೊಟ್ಟಿಲ್ಲ. ಸಮಯಕ್ಕೆ ಸರಿಯಾಗಿ ಬರ ಪರಿಹಾರವೂ ನೀಡಲಿಲ್ಲ. ಅದರ ಬದಲಾಗಿ ಉದ್ಯಮಿಗಳ ಲಕ್ಷ ಲಕ್ಷ ಕೋಟಿ ರೂ. ಸಾಲವನ್ನು ಮೋದಿಯವರು ಮನ್ನಾ ಮಾಡಿದರು ಎಂದು ಟೀಕಿಸಿದರು.

ರಾಜ್ಯ ಸರ್ಕಾರ ನುಡಿದಂತೆ ನಡೆದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಹೆಣ್ಣುಮಕ್ಕಳು, ಯುವಕರಿಗೆ ಶಕ್ತಿ ತುಂಬಲಾಗಿದೆ. ಈ ಭಾಗದಲ್ಲೂ ನಿರಂತರ ನೀರು, ನಿಂಬೆ ಅಭಿವೃದ್ಧಿ ಮಂಡಳಿ, ಕೆರೆ ತುಂಬುವುದು ಸೇರಿ ಅನೇಕ ಅಭಿವೃದ್ಧಿ ಕಾರ್ಯಗಳು ಇಂಡಿ ಮತಕ್ಷೇತ್ರದಲ್ಲಾಗಿವೆ. ಆದರೆ, ಮೂರು ಸಲ ಸಂಸದರಾದವರಿಂದ ಯಾವುದೇ ಕೆಲಸವಾಗಲಿಲ್ಲ ಎಂದರು.

ರೈಲು, ಪ್ರವಾಸೋದ್ಯಮ ಪ್ರಗತಿ ಮಾಡಲಿಲ್ಲ. ಒಂದೇ ಭಾರತ ರೈಲನ್ನು ವಿಜಯಪುರಕ್ಕೆ ಓಡಿಸಲಿಲ್ಲ. ರಾಜ್ಯದ ಪರ ಮಾತನಾಡಲಿಲ್ಲ. ಈ ಸಲ ಬದಲಾವಣೆ ತಂದು ತಮ್ಮನ್ನು ಆರಿಸಿದರೆ ಲೋಕಸಭೆ ಕ್ಷೇತ್ರದ ಸಂಪೂರ್ಣ ಚಿತ್ರಣ ಬದಲು ಮಾಡುತ್ತೇನೆ. ತಮ್ಮ ವಿಶ್ವಾಸಕ್ಕೆ ಧಕ್ಕೆಯಾಗದಂತೆ ದುಡಿಯುವೆ. ಇಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯ ಸ್ಥಾಪನೆ, ಆಲಮಟ್ಟಿ ಆಣೆಕಟ್ಟು ಎತ್ತರ ಹೆಚ್ಚಿಸಿ ನೀರು ಕೊಡುವುದು ಸೇರಿದಂತೆ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಹೇಳಿದರು.

ಮುಖಂಡರಾದ ತಮ್ಮಣ್ಣ ಪೂಜಾರಿ, ಬಾಬು ಸಾಹುಕಾರ ಮೇತ್ರಿ, ಎಂ‌.ಆರ್. ಪಾಟೀಲ ಮಾತನಾಡಿದರು. ಚಂದ್ರಶೇಖರ ರೂಗಿ, ಸೋಮು ಬ್ಯಾಳಿ, ಇಲಿಯಾಸ ಬೋರಾಮಣಿ, ಜಾವೇದ್ ಮೊಮಿನ್, ಅಪ್ಪಣ್ಣ ಕಲ್ಲೂರ, ಸಿ.ಎಲ್. ಬರಡೋಲ, ಆನಂದಪ್ಪ ಹುಣಸಗಿ, ಶ್ರೀಮಂತ ಲೋಣಿ, ಸೋಮಶೇಖರ ಬೆಳ್ಳಿ, ಧರ್ಮು ವಾಲೀಕಾರ, ಇಸ್ಮಾಯಿಲ್ ಕಲಬುರಗಿ, ಮೆಹಬೂಬ ಅರಬ್, ಪ್ರಶಾಂತ ಆಲಗೂರ, ಇಮ್ರಾನ್ ಮಕಾನದಾರ ಅನೇಕರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...