ವಿಜಯಪುರ | 15ನೇ ಹಣಕಾಸು ಅನುದಾನದಲ್ಲಿ ಅಕ್ರಮ; ಪಿಡಿಒ ವಿರುದ್ಧ ತನಿಖೆಗೆ ಆಗ್ರಹ

Date:

ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ದೇವರನೆಂಬರಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ತನಿಖೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ದೇವರನೆಂಬರಗಿ ಗ್ರಾಮ ಪಂಚಾಯಿತಿ ಸದಸ್ಯ ಜಾಕಿರ್ ಬಸಿರ್ ಸಾಬ್ ಮಣಿಯರ್ ಮಾತನಾಡಿ, “ಗ್ರಾಮ ಪಂಚಾಯತಿಯ 15ನೇ ಹಣಕಾಸಿನ ಅನುದಾನದಲ್ಲಿ 9 ಲಕ್ಷ ರೂ. ದರ್ಬಳಿಕೆಯಾಗಿದೆ. ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆ ಕರೆದು ಎಲ್ಲ ಸದಸ್ಯರ ಸಮ್ಮುಖದಲ್ಲಿ ಖರ್ಚು ವೆಚ್ಚದ ಮಾಹಿತಿ ನೀಡಿ ಸಭೆಯ ಅನುಮೋದನೆ ಪಡೆಯದೆ ಯಾವುದೇ ಹಣ ತೆಗೆಯಬೇಡಿ ಎಂದು ಹೇಳಿದಾಗ ಗ್ರಾಮ ಪಂಚಾಯಿತ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ ರಾಠೋಡ್ ಅವರು ನಮ್ಮ ಗ್ರಾಮ ಪಂಚಾಯಿತಿ ಸದಸ್ಯನ ವಿರುದ್ಧ ಜಾತಿ ನಿಂದನೆ ಹಾಗೂ ಮಾರಣಾಂತಿಕ ಹಲ್ಲೆಯ ದೂರು ದಾಖಲಿಸಿದ್ದಾರೆ” ಎಂದು ಹೇಳಿದರು.

“ಸದರಿ ಅಭಿವೃದ್ಧಿ ಅಧಿಕಾರಿ ಈ ಮೊದಲು ಯಾವ ಯಾವ ಗ್ರಾಮ ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸಿದ್ದರೋ ಅಲ್ಲಿಯೂ ಕೂಡ ಸಾಕಷ್ಟು ಹಗರಣಗಳನ್ನು ಮಾಡಿದ್ದಾರೆ. ಇಂಚಿಗೇರಿ ಗ್ರಾಮ ಪಂಚಾಯಿತಿ, ಚಟ್ನಳ್ಳಿ ಗ್ರಾಮ ಪಂಚಾಯಿತಿಗಳಲ್ಲಿಯೂ ಅಕ್ರಮ ನಡೆಸಿದ್ದಾರೆ. ಹಾಗಾಗಿ ಈ ವಿಷಯದಲ್ಲಿ ಸಮಗ್ರ ತನಿಖೆ ನಡೆಸಬೇಕು. ತನಿಖೆ ಮಾಡುವವರೆಗೂ ಅಭಿವೃದ್ಧಿ ಅಧಿಕಾರಿಯನ್ನು ಬೇರೆಡೆ ನಿಯೋಜಿಸಬೇಕು. ತನಿಖೆ ಸಂಪೂರ್ಣವಾದ ಬಳಿಕ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ನಮಗೆ ನ್ಯಾಯ ಒದಗಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ದೇವರ ಹೆಸರಲ್ಲಿ ಶಾಲೆ ಜಾಗ ಒತ್ತುವರಿ; ತೆರವಿಗೆ ಎಸ್ಎಫ್ಐ ಆಗ್ರಹ

ಒಕ್ಕೂಟದ ಮುಖಂಡರುಗಳಾದ ಎಂ ಎಚ್ ಪಠಾನ್, ಪ್ರದೀಪ್ ಪಾಟಿಲ್, ಆದಿಲ್ ಶಾಹಿ ವಾಲಿಕಾರ್, ಎಂ ಎಸ್ ಕಮತಗಿ, ಮಂಜುನಾಥ್ ಪಾಟಿಲ್, ಕರಿಯಪ್ಪ ಬಸ್ತಾಳ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...