ವಿಜಯಪುರ | ತೊರವಿ ಭಾಗಕ್ಕೂ ಶೀಘ್ರದಲೇ ನೀರಾವರಿ ಕಲ್ಪಿಸಲಾಗುವುದು: ಎಂ ಬಿ ಪಾಟೀಲ್

Date:

ವಿಜಯಪುರ ಜಿಲ್ಲೆಯ ತೊರವಿ ಭಾಗಕ್ಕೂ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿದ್ದು, ತವರೂರಿನ ಋಣ ತೀರಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.‌

ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಬುಧವಾರ ರಾತ್ರಿ ತೊರವಿಯಲ್ಲಿ ಪ್ರಚಾರ ಕೈಗೊಂಡಿದ್ದ ವೇಳೆ ಮಾತನಾಡಿದರು.

“ರಾಜ್ಯ ಸರ್ಕಾರ ಪ್ರತಿಯೊಬ್ಬರ ಮನೆಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿದೆ. ಆದರೆ, ಕೇಂದ್ರ ಸರ್ಕಾರ ಜನರ ಜೀವನವನ್ನು ಬೆಲೆ ಏರಿಕೆಯಿಂದ ದು‌ರ್ಬರಗೊಳಿಸಿದೆ. ಪೆಟ್ರೋಲ್, ಅಡುಗೆ ಅನಿಲ ಬೆಲೆ ಹೆಚ್ಚಳವಾದಾಗ ಗದ್ದಲ ಉಂಟು ಮಾಡುತ್ತಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಂಥವರು ಈಗ ಮೌನ ವಹಿಸಿದ್ದಾರೆ. ಚುನಾವಣೆ ಬಾಂಡ್ ಇವರ ನಿಜವಾದ ಮುಖವಾಡವನ್ನು ಬಯಲು ಮಾಡಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಕೊಟ್ಟ ಭರವಸೆ ಈಡೇರಿಸಿ ಮತ ಕೇಳಲು ಬಂದಿದ್ದೇವೆ. ಸಬ್ ಕಾ ಸಾಥ್ ಎಂದವರು ಈಗ ದೇಶದಲ್ಲಿ ಬಿರುಕು ಮೂಡಿಸುತ್ತಿದ್ದಾರೆ. ಈ ಬಾರಿ ಅವರಿಗೆ ಪ್ರಸ್ತಾಪಿಸಲು ಯಾವುದೇ ವಿಷಯಗಳಿಲ್ಲ. ಯಾವ ಗಾಳಿಯೂ ಇಲ್ಲ. ಹಾಗಾಗಿ ನಿಮ್ಮೂರಿನ ಮಗ ರಾಜು ಆಲಗೂರ ಅವರಿಗೆ ಮತ ನೀಡಿ” ಎಂದು ಮನವಿ ಮಾಡಿದರು.

“ತೊರವಿ ಭಾಗಕ್ಕೂ ನೀರು ನೀಡುವ ಯೋಜನೆ ರೂಪಿಸುತ್ತಿದ್ದೇವೆ. ನಮ್ಮೂರಿನ ಋಣ ತೀರಿಸುವೆ. ಆಲಮಟ್ಟಿ ಅಣೆಕಟ್ಟು ಎತ್ತರಿಸಲು ಗೆಜೆಟ್ ನೋಟಿಫಿಕೇಷನ್ ಆದರೆ ಇಡೀ ಜಿಲ್ಲೆ ದೇಶದಲ್ಲಿಯೇ ಶ್ರೀಮಂತವಾಗಲಿದೆ. ಈ ಕೆಲಸ ಜಾರಿಯಾಗಬೇಕಾದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಬೇಕು” ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದರು.‌

ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಮಾತನಾಡಿ, “ಪಕ್ಷಾತೀತವಾಗಿ ಗ್ರಾಮದವರು ತಮಗೆ ಬೆಂಬಲಿಸಬೇಕು. ಲೋಕಸಭೆಯಲ್ಲಿ ನಿಮ್ಮ ಭರವಸೆಗೆ ತಕ್ಕಂತೆ ಧ್ವನಿಯಾಗಿ ಕೆಲಸ ಮಾಡುತ್ತೇನೆ. ಕಾಂಗ್ರೆಸ್‌ನ ಅಭಿವೃದ್ಧಿ ಕಾರ್ಯಗಳು ನಮ್ಮ ಬೆನ್ನಿಗಿವೆ. ಜಿಲ್ಲೆಯಲ್ಲಿ ಪಕ್ಷದ ಪರ ಅಲೆ ಇದೆ. ಕಳೆದ 25 ವರ್ಷಗಳ ನಂತರ ಈಗ ಬದಲಾವಣೆ ಗಾಳಿ ಬೀಸಿದೆ. ತೊರವಿ ಗ್ರಾಮಸ್ಥರು ಕಾಂಗ್ರೆಸ್‌ಗೆ ಸಂಪೂರ್ಣ ಬೆಂಬಲ ನೀಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ನಾಮಪತ್ರ ವಾಪಸ್‌ ಪಡೆದ ಬಿಎಸ್‌ಪಿ ಅಭ್ಯರ್ಥಿ; ಪಕ್ಷದಿಂದ ಉಚ್ಛಾಟನೆ

ಮುಖಂಡ ಎನ್ ಎಸ್ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿ, “ತೊರವಿ ಗ್ರಾಮಕ್ಕೆ ರಾಜಕೀಯ ಇತಿಹಾಸವಿದೆ. ಬಿ ಎಂ ಪಾಟೀಲ್ ಅವರಿಂದ ಹಿಡಿದು, ಎಂ ಬಿ ಪಾಟೀಲ್ ವರೆಗೆ ರಾಜಕಾರಣದ ಹಲವು ಮೈಲಿಗಲ್ಲು ದಾಖಲಾಗಿವೆ. ಈ ಬಾರಿ ಲೋಕಸಭಾ ಅಭ್ಯರ್ಥಿಯಾಗಿ ಇದೇ ಗ್ರಾಮದ ರಾಜು ಆಲಗೂರ ಅವರು ಸ್ಪರ್ಧಿಸಿರುವುದು ನಮಗೆಲ್ಲ ಹೆಮ್ಮೆಯ ವಿಷಯ. ನಾವೆಲ್ಲರೂ ಒಟ್ಟಾಗಿ ಅವರನ್ನು ಗೆಲ್ಲಿಸಬೇಕಾಗಿದೆ” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರುಗಳಾದ ಹಮೀದ್ ಮುಶ್ರೀಫ್, ನರಸಿಂಗ ಮಹಾರಾಜರು, ಭೀಮು ಮಹಾರಾಜರು, ಸುರೇಶಗೌಡ ಪಾಟೀಲ್‌ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...