ವಿಜಯಪುರ | ರೈತರ ಮಕ್ಕಳು ಕೂಡ ಕೃಷಿಯಿಂದ ದೂರವಾಗುತ್ತಿರುವುದು ಕಳವಳಕಾರಿ: ಡಾ. ಮಧುಸೂದನ್

Date:

ರೈತ ಈ ದೇಶದ ಬೆನ್ನೆಲುಬು. ಕೃಷಿ ಪ್ರಧಾನವಾದ ನಮ್ಮ ದೇಶದ ರೈತರ ಮಕ್ಕಳು ನೌಕರಿಗಾಗಿ ಕೃಷಿಯಿಂದ ದೂರ ಸರಿಯುತ್ತಿರುವುದು ಕಳವಳಕಾರಿ ಅಂಶವಾಗಿದೆ ಎಂದು ಹೈದರಾಬಾದ ಅಖಿಲ ಭಾರತ ಜೋಳ ಸಂಶೋಧನಾ ಕೇಂದ್ರದ ಯೋಜನಾ ನಿರ್ದೇಶಕ ಡಾ. ಮಧುಸೂದನ ಆ‌ರ್.ಹೇಳಿದರು.

ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಉಣ್ಣೆಭಾವಿ ಗ್ರಾಮದಲ್ಲಿ ವಿಜಯಪುರ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದ ಅಖಿಲ ಭಾರತ ಜೋಳ ಅಬಿವೃದ್ಧಿಯೋಜನೆ, ನಿಡಗುಂದಿ ಶ್ರೀ ಹಾದಿಬಸವಣ್ಣಪ್ಪ ಆಯಿಲ್ ಸಿಡ್ಸ್ ಹಾಗೂ ಮಿಲೇಟ್ಸ್ ಪ್ರೋಡ್ಯೂಡರ್ ಕಂಪನಿ ವತಿಯಿಂದ ವಿಜಯಪುರ ಜಿಲ್ಲೆಯ ಪ್ರದೇಶಗಳಲ್ಲಿ ಸಿರಿಧಾನ್ಯ ತಂತ್ರಜ್ಞಾನಗಳ ಪ್ರಚಾರ ಹಾಗೂ ಅಳವಡಿಕೆ ತರಬೇತಿ ಕಾರ್ಯಕ್ರಮಕ್ಕೆ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ರೈತರು ಈ ಭಾಗದ ಪ್ರಮುಖ ಬೆಳೆ ಜೋಳವನ್ನು ನಿರ್ಲಕ್ಷಿಸುತ್ತಿದ್ದು, ಜನರು ಅಪೌಷ್ಠಿಕತೆ ಮುಂತಾದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಜೋಳ ತಿಂದವನು ತೋಳದಂತಾಗುತ್ತಾನೆಂಬ ಗಾದೆಯಿದೆ. ಅದಕ್ಕಾಗಿ ಜೋಳ ಹಾಗೂ ಸಿರಿಧಾನ್ಯಗಳನ್ನು ಹೆಚ್ಚಾಗಿ ಬೆಳೆಯಬೇಕೆಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಹ ವಿಸ್ತರಣಾ ನಿರ್ದೇಶಕ ಡಾ.ರವೀಂದ್ರಬೆಳ್ಳಿ ಮಾತನಾಡಿ, ಇಂದು ಮಾಜಿ ಪ್ರಧಾನಿ ಚೌಧರಿ ಚರಣಸಿಂಗ ಇವರ ಜನ್ಮದಿನವನ್ನು ರಾಷ್ಟ್ರೀಯ ರೈತ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಈ ಸಲದ ಘೋಷ್ಯವಾಕ್ಯ ಸುಸ್ಥಿರ ಕೃಷಿ ಪುನಶ್ಚತನಕ್ಕಾಗಿ ಡಿಜಿಟಲ್ ತಂತ್ರಜ್ಞಾನ ಅಳವಡಿಕೆ ಎಂಬುದಾಗಿದೆ. ಡಾ. ಚೌಧರಿ ಚರಣಸಿಂಗ್ ಅವರು ರೈತರ ಸಮಗ್ರ ಏಳೆಗಾಗಿ ಹಲವಾರು ಕ್ರಾಂತಿಕಾರಕ ಬದಲಾವಣೆಗಳನ್ನು, ಅನೇಕ ಕಾಯ್ದೆಗಳನ್ನು ಜಾರಿಗೆ ತಂದಿದ್ದಾರೆ. ಇದರಿಂದಾಗಿ ರೈತರು ಸಾವಲಂಬಿ ಬದಕು ಸಾಗಿಸಲು ಅನುಕೂಲವಾಗಬೇಕು ಎಂಬ ಮಹಾದಾಸೆ ಅವರಲ್ಲಿತ್ತು. ದೇಶಕ್ಕೆ ಅನ್ನ ನೀಡುವ ರೈತರನ್ನು ಕೃಷಿಯಲ್ಲಿ ಸಾಧನೆ ಮಾಡಿದ ರೈತರನ್ನು ನೆನೆಯುವ ಸಲುವಾಗಿ ಈ ದಿನವನ್ನು ರಾಷ್ಟ್ರೀಯ ರೈತರ ದಿನವನ್ನಾಗಿ ಅಚರಿಸಲಾಗುತ್ತಿದೆ ಎಂದರು.

ಇದನ್ನು ಓದಿದ್ದೀರಾ? ವಿಜಯಪುರ | ನಿತ್ಯವೂ ಮಾನವೀಯ ಮೌಲ್ಯಗಳನ್ನು ನಾವು ಮೈಗೂಡಿಸಿಕೊಳ್ಳಬೇಕು: ನಾಗರತ್ನ ಮನಗೂಳಿ

ಅತಿಥಿಗಳಾಗಿ ಸಂಗನಗೌಡ ಕೊನರಡ್ಡಿ,ಭೀಮನಗೌಡ ಕೊನರಡ್ಡಿ, ಶೇಖರ ಗೂಗಿಹಾಳ, ವೀರಣ್ಣ ಮನಗೊಂಡ, ಮಲ್ಲನಗೌಡ ನಾಡಗೌಡ, ಸತೀಶ ನರಸರಡ್ಡಿ, ಅಶೋಕ ಕೊನರಡ್ಡಿ, ಚನ್ನಪ್ಪ ಕಂಬಳಿ, ಶಂಕ್ರೆಪ್ಪ ಹೂಗಾರ, ಸಾಹೇಬಗೌಡ ಪಾಟೀಲ, ಮಹಾದೇವಪ್ಪ ಕೊನರಡ್ಡಿ, ತಿಮ್ಮನಗೌಡ ಪಾಟೀಲ,ಮಂಜುನಾಥ ಸವನೂರ, ರಾಧಾ ಚಲವಾದಿ, ಶ್ರೀಶೈಲ ಕೊನರಡ್ಡಿ,ವನಕೇರಪ್ಪಗೌಡ ನರಸರಡ್ಡಿಸೇರಿದಂತೆ ಉಣ್ಣಿಬಾವಿ, ಹಂಗರಗಿ, ವಂದಾಲ, ಹುಣಶ್ಯಾಳ ಪಿ.ಸಿ., ಬೀರಲದಿನ್ನಿ ಗ್ರಾಮಗಳ ರೈತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...