ವಿಜಯಪುರ | ಐತಿಹಾಸಿಕ ಸ್ಮಾರಕಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯ: ವಿಜಯ್ ಕುಮಾರ್

Date:

ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ವಿಜಯಪುರ ಅತಿ ಹೆಚ್ಚು ಸ್ಮಾರಕಗಳನ್ನು ಹೊಂದಿರುವ ಜಿಲ್ಲೆ. ಈ ಐತಿಹಾಸಿಕ ಸ್ಮಾರಕಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಭಾರತೀಯ ಪುರಾತತ್ವ ಇಲಾಖೆಯ ಸಮೀಕ್ಷೆ ಸಂರಕ್ಷಣಾ ಸಹಾಯಕ ವಿಜಯ್ ಕುಮಾರ್ ಹೇಳಿದರು.

ಬಿಎಲ್ ಈ ಸಂಸ್ಥೆಯ ಎಸ್‌ ಬಿ ಕಲಾ ಹಾಗೂ ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ಸಂಯುಕ್ತಾಶ್ರಯದಲ್ಲಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಇವರ ಸಹಯೋಗದಲ್ಲಿ ಕಲಾ ಹಾಗೂ ವಿಜ್ಞಾನ ವಿಭಾಗದ ಎನ್ಎಸ್ಎಸ್ ವಿದ್ಯಾರ್ಥಿಗಳೊಂದಿಗೆ ವಿಜಯಪುರ ನಗರದ ತರವಿ ದೇವಸ್ಥಾನದಿಂದ ಸಂಗೀತ್ ಮಹಲ್‌ವರೆಗೆ ಪಾರಂಪರಿಕ ನಡಿಗೆ ಸ್ಮಾರಕಗಳ ಸ್ವಚ್ಛತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

“ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ವಿಜಯಪುರ ಐತಿಹಾಸಿಕ ಸ್ಥಳಗಳಿಗೆ ಪ್ರಸಿದ್ಧ ತಾಣ. ವಿಜಯಪುರ ಜಿಲ್ಲೆಯಲ್ಲಿ ಅತಿಹೆಚ್ಚು ಸ್ಮಾರಕಗಳು ಐತಿಹಾಸಿಕ ಸ್ಥಳಗಳು ಇವೆ. ಈ ಎಲ್ಲ ಐತಿಹಾಸಿಕ ಸ್ಥಳಗಳ ಸ್ಮಾರಕಗಳ ರಕ್ಷಣೆ ನಮ್ಮೆಲ್ಲರ ಹೊಣೆ. ಪ್ರತಿಕಲ್ಲು ಒಂದೊಂದು ಕಥೆ ಹೇಳುತ್ತದೆ” ಎಂದು ವಿಜಯ್ ಕುಮಾರ್ ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಐತಿಹಾಸಿಕ ಸ್ಮಾರಕ 1

ಪುರಾತತ್ವ ಇಲಾಖೆ ವಾಸ್ತು ಸಂಗ್ರಹಾಲಯಗಳ ನಿರ್ದೇಶಕಿ ಸ್ಮಿತಾ ರೆಡ್ಡಿ ಅವರು ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ಐತಿಹಾಸಿಕ ಸ್ಮಾರಕಗಳ ರಕ್ಷಣೆಯ ಮಹತ್ವವನ್ನು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಯುವಪತ್ರಕರ್ತ ಸಂದೀಪ್ ಪೂಜಾರಿ ನಿಧನ

ಈ ಪಾರಂಪರಿಕ ನಡಿಗೆಯಲ್ಲಿ ವಿದ್ಯಾರ್ಥಿಗಳು “ಐತಿಹಾಸಿಕ ಸ್ಮಾರಕ ಉಳಿಸಿ ಸಂಸ್ಕೃತಿ ಬೆಳೆಸಿ” “ಪ್ರತಿ ಕಲ್ಲು ಒಂದೊಂದು ಕಥೆ ಹೇಳುತ್ತವೆ” ಎಂದು ಸ್ಲೋಗನ್‌ಗಳನ್ನು ಹೇಳಿದರು.

ಜಿಲ್ಲಾ ಪ್ರವಾಸೋದ್ಯಮ ಸಲಹೆಗಾರ ಅನಿಲ್ ಬಣಜಿಗೆ, ಮತ್ತು ಎಸ್ ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಆರ್ ಎಂ ಮಿರ್ದೆ, ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ಮುಖ್ಯಸ್ಥರಾದ ಡಾ. ತರುಣಮ್ ಜಬೀನ್ ಖಾನ್, ಮಿಲನ್ ರಾಠೋಡ್ ಹಾಗೂ ಎನ್ಎಸ್ಎಸ್ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...