ವಿಜಯಪುರ | ಸಮಾಜದಲ್ಲಿ ಸಮಾನತೆ, ಭಾತೃತ್ವ ಮೂಡಿಸುವುದು ಪ್ರತಿಯೊಬ್ಬ ಮಹಿಳೆಯ ಕರ್ತವ್ಯ: ಮೈತ್ರೇಯಿ ಕೆ

Date:

ಸಮಾಜದಲ್ಲಿ ಸಮಾನತೆ ಮತ್ತು ಭಾತೃತ್ವವನ್ನು ಮೂಡಿಸುವುದು ಪ್ರತಿಯೊಬ್ಬ ಮಹಿಳೆಯ ಪಾತ್ರವಾಗಿದೆ ಎಂದು ಹೈಕೋರ್ಟ್ ನ್ಯಾಯವಾದಿ ಮತ್ತು ಮಾನವ ಹಕ್ಕು ಹೋರಾಟಗಾರ್ತಿ ಮೈತ್ರೇಯಿ ಕೆ. ಹೇಳಿದರು.

ವಿಜಾಪುರ ನಗರ ಸ್ಲಂ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟ (ರಿ), ಅನೌಪಚಾರಿಕ ಶಿಕ್ಷಣ ಸಂಸ್ಥೆ, ಇವರ ಸಹಯೋಗದಲ್ಲಿ ʼಪ್ರಗತಿಯ ವೇಗವರ್ಧನೆಗೆ ಮಹಿಳೆಯರ ಮೇಲೆ ಹೂಡಿಕೆʼ ಎಂಬ ಘೋಷ ವಾಕ್ಯದೊಂದಿಗೆ ಮಾ.6ರಂದು ವಿಜಯಪುರ ನಗರದ ಲೊಯೋಲಾ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಹೈಕೋಟ್ ನ್ಯಾಯವಾದಿಗಳು, ಮಾನವ ಹಕ್ಕು ಹೋರಾಟಗಾರ್ತಿ ಮೈತ್ರೇಯಿ ಕೆ. ಮಾತನಾಡುತ್ತಾ, ಇಲ್ಲಿ ನೆರೆದಿರುವ ಮಹಿಳೆಯರನ್ನು ನೋಡಿದಾಗ ಮಹಿಳೆಯರ ಶಕ್ತಿಯ ಏನು ಎಂಬುದು ಅರ್ಥವಾಗುತ್ತದೆ. ದಿನನಿತ್ಯದ ದುಡಿಮೆಯ ಜೊತೆಗೆ ತಾವು ಮಾಡುವ ಸಮಾಜಮುಖಿ ಕಾರ್ಯಗಳು ನಿಜವಾಗಿಯೂ ಎಲ್ಲರಿಗೂ ಪ್ರೇರಣೆಯಾಗಿವೆ. ಮಹಿಳಯರು ಎಲ್ಲರಂಗದಲ್ಲಿಯೂ ಇವತ್ತು ಸಮಾನತೆಯನ್ನು ಸಾಧಿಸಿದ್ದಾಳೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೂ, ಸಹ ಅವಳ ಮೇಲೆ ಆಗುವ ದೌರ್ಜನ್ಯಗಳ ಸಂಖ್ಯೆ ಹೆಚ್ಚುತ್ತಲೆ ಇದೆ. ಇದನ್ನು ಕಡಿಮೆ ಮಾಡಬೇಕಾದರೆ ನಾವೆಲ್ಲರು ಒಂದಾಗಬೇಕು. ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಬೇಕು.  ಸಂವಿಧಾನ ನಮಗೆ ನೀಡಿರುವ ಹಕ್ಕುಗಳನ್ನು ಪಡೆದುಕೊಳ್ಳಲು ನಾವೆಲ್ಲರು ಬದ್ಧರಾಗೋಣ. ಸಮಾನತೆಯ, ಭಾತೃತ್ವ ಸಂದೇಶ ಸಾರೋಣ, ನಮ್ಮೆಲಾಗುವ ದೌರ್ಜನ್ಯಗಳ ವಿರುದ್ಧ ಪ್ರತಿಭಟಿಸೋಣ ಈ ಮೂಲಕ ಪ್ರತಿ ಹೆಣ್ಣಿನ ಧ್ವನಿಯಾಗೋಣವೆಂದು ಕರೆ ನೀಡಿದರು.

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಶ್ರೀಮತಿ ಮೆಹಜಬೀನ್ ಅಬ್ದುಲ್ ರಜಾಕ್ ಹೊರ್ತಿ ಮಹಾಪೌರರು, ಮಹಾನಗರ ಪಾಲಿಕೆ ಇವರು ನೆರೆದಿರುವ ಮಹಿಳೆಯರನ್ನು ಉದ್ದೇಶಿಸಿ ಮಾತನಾಡುತ್ತಾ, ಮಹಿಳೆ ಇವತ್ತು ಎಲ್ಲ ಕೇತ್ಷದಲ್ಲಿಯು ಸಾಧನೆ ಮಾಡುತ್ತಾಳೆ ಎಂಬುದಕ್ಕೆ ನಾನೇ ಉದಾಹರಣೆಯಾಗಿದ್ದೇನೆ. ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಒಳ್ಳೆಯ ಸಂಸ್ಕಾರವನ್ನು ನೀಡುವ ಮೂಲಕ ಆಕೆಯನ್ನು ಸಮಾಜದಲ್ಲಿ ಗೌರಯುತವಾಗಿ ಬಾಳುವಂತೆ ಮಾಡಿಯೆಂದರು.

ಈ ಕಾರ್ಯಕ್ರಮ ಉದ್ಘಾಟಕರಾಗಿ ಮಹಾಪೌರರಾದ ಮೈಜಬಿನ ಅಬ್ದುಲರಜಾಕ ಹೊರ್ತಿ, ಜಿಲ್ಲಾ ಆರೋಗ್ಯ ಸರ್ವೇಕ್ಷಣಾ ಅಧಿಕಾರಿ ಡಾ.ಕವಿತಾ ದೊಡಮನಿ, ವಿಜಯಪುರ ನಗರ ಗೃಹ ಕಾರ್ಮಿಕರ ಯೂನಿಯನ್(ರಿ) ಅಧ್ಯಕ್ಷರು ಫರ್ಜಾನಾ ಜಮಾದಾರ, ವಯೋವೃದ್ಧರ ಸಂಘಗಳ ಒಕ್ಕೂಟ ಅಧ್ಯಕ್ಷರು ಸುಶೀಲಾ ದಳವಾಯಿ, ಅನೌಪವಾರಿಕ ಶಿಕ್ಷಣ ಸಂಸ್ಥೆ ಸಿಸ್ಟರ್ ಜಯಾ ಜಮಖಂಡಿ ಕಾರ್ಯಸಂಯೋಜಕರು, ದೇವದಾಸಿ ತಾಯಂದಿರ ಜಿಲ್ಲಾ ಒಕ್ಕೂಟದ ಅಧ್ಯಕ್ಷರು ರೇಣುಕಾ ಏಂಟಮಾನ, ವಿಜಯಪುರ ನಗರ ಯುವತಿಯರ ಒಕ್ಕೂಟದ ಕುಮಾರಿ ತೇಜಶ್ವಿನಿ ಬಂಡಿವಡ್ಡರ, ಅನೌಪಚಾರಿಕ ಶಿಕ್ಷಣ ಸಂಸ್ಥೆ ಸಿಬ್ಬಂದಿ ವರ್ಗದವರು, ಮಹಿಳಾ ಒಕ್ಕೂಟದ ಪದಾಧಿಕಾರಿಗಳು ಮತ್ತು ವಿಜಯಪುರ ನಗರದ ಸ್ಲಂ ಹಾಗೂ ಲಂಬಾಣಿ ತಾಂಡಾಗಳ ಮಹಿಳಾ ಸ್ವ-ಸಹಾಯ ಸಂಘಗಳಿಂದ ಕಾರ್ಯಕ್ರಮದಲ್ಲಿ 3,800 ಮಹಿಳೆಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಪ್ರಾರಂಭಿರಸಲಾಯಿತು. ನಂತರ ವೇದಿಕೆ ಮೇಲೆ ಉಪಸ್ಥಿತರಿರುವ ಗಣ್ಯರನ್ನು ಸ್ವಾಗತಿಸಲಾಯಿತು. ಏಕತೆ ಮತ್ತು ಸಮಾನತೆಯ ಸಂಕೇತವಾಗಿ ಸಂವಿಧಾನ ಪೀಠಿಕೆ ಓದಲಾಯಿತು. ನಂತರ ಗಣ್ಯರು ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಆಯೋಜನೆ ಮಾಡಲಾಗಿದ್ದ ಆಟೋಟಗಳ ಸ್ಟಾಲ್‍ಗಳನ್ನು ಮತ್ತು ಪುಡ್ ಸ್ಟಾಲ್‍ಗಳನ್ನು ಉದ್ಘಾಟನೆ ಮಾಡಿದರು.

ನಂತರ ವೇದಿಕೆ ಕಾರ್ಯಕ್ರಮದಲ್ಲಿ ಪ್ರಸ್ತಾವಿಕ ನುಡಿಗಳನ್ನು ಹೇಳಿದ ಅನೌಪಚಾರಿಕ ಶಿಕ್ಷಣ ಸಂಸ್ಥೆ ನಿರ್ದೇಶಕರಾದ ಫಾದರ ಟಿಯೋಲ ಮಚಾದೋ, ಮಹಿಳಾ ಒಕ್ಕೂಟವು ಮಹಿಳೆಯರ ಪರವಾಗಿ ಹಾಕಿಕೊಂಡ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮಾಹಿತಿ ನೀಡುವ ಮೂಲಕ ಮಹಿಳಾ ಒಕ್ಕೂಟ ಸ್ವತಂತ್ರವಾಗಿ ಬೆಳೆಯುತ್ತಿರುವ ಬಗ್ಗೆ ಹಮ್ಮೆ ವ್ಯಕ್ತಡಿಸಿದರು. ವಿಶೇಷವಾಗಿ ಮಹಿಳಾ ಒಕ್ಕೂಟವು ಮಹಿಳೆಯರ ಸ್ವ-ಉದ್ಯೋಗಕ್ಕೆ ಮತ್ತು ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನಹರಿಸಿರುವುದು ಹೆಮ್ಮಯ ವಿಷಯವಾಗಿದೆ. ಇದೇ ರೀತಿ ಮುಂದಿನ ದಿನಗಳಲ್ಲಿ ಸಮಾಜಮುಖಿ ಕಾರ್ಯಗಳತ್ತ ಮಹಿಳಾ ಒಕ್ಕೂಟವು ಬೆಳೆಯಲಿಯೆಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಸರ್ವೇಕ್ಷಣಾ ಅಧಿಕಾರಿಗಳು ಡಾ. ಕವಿತಾ ವನಿತಾ ದೊಡಮನಿ ಇವರನ್ನು ಸ್ಲಂ ಮಹಿಳೆಯರು ಮತ್ತು ವಿಜಯಪುರ ನಗರ ಸ್ಲಂ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟ ನೀಡುವ ʼವಿಜಯಪುರ ರತ್ನ ಪ್ರಶಸ್ತಿʼಯನ್ನು ನೀಡಿ ಗೌರವಿಸಲಾಯಿತು.

ಸ್ಲಂನ ಪ್ರತಿಭಾನ್ವಿತ ಮಕ್ಕಳು ಉನ್ನತ ದರ್ಜೆಯಲ್ಲಿ ಉತ್ತೀರ್ಣರಾದ 42 ಮಕ್ಕಳಿಗೆ ಮಹಿಳಾ ಒಕ್ಕೂಟದ ಪರವಾಗಿ ಶೈಕ್ಷಣಿಕ ಪ್ರೋತ್ಸಾಹ ಧನವನ್ನು ಮತ್ತು ನೆನಪಿನ ಕಾಣಿಕೆಯನ್ನು ವಿತರಿಸಲಾಯಿತು. ನಂತರ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...