ವಿಜಯಪುರ | ಕನ್ನಡ ನಮ್ಮೆಲ್ಲರ ಉಸಿರು: ಹಾಸಿಂ ಪೀರ್‌ ವಾಲಿಕಾರ

Date:

ಕನ್ನಡವೇ ಸತ್ಯ, ಕನ್ನಡವೇ ನಿತ್ಯ, ಹಸಿರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ ಎಂಬ ಜಯಘೋಷದೊಂದಿಗೆ ಸಂಭ್ರಮದಿಂದ ತಾಂಬಾ ಗ್ರಾಮಕ್ಕೆ ಸಾವಿರಾರು ವಿದ್ಯಾರ್ಥಿಗಳು ಮಕ್ಕಳು ಹಾಗೂ ಶಿಕ್ಷಕರು, ಗ್ರಾಮದ ಹಿರಿಯರು ಪಾಲ್ಗೊಂಡು ಕರ್ನಾಟಕ ಸುವರ್ಣ ಸಂಭ್ರಮ 50ರ ನಿಮಿತ್ಯ ಜನರಲ್ಲಿ ಕರ್ನಾಟಕದ ಅಭಿಮಾನ ಮೂಡಿಸುವ ಸಲುವಾಗಿ ಕರ್ನಾಟಕದ ಕನ್ನಡ ರಥವನ್ನು ವಿಜಯಪುರ ಜಿಲ್ಲೆ ತಾಂಬಾ ಗ್ರಾಮಕ್ಕೆ ಸ್ವಾಗತಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ್ ವಾಲಿಕಾರ ಮಾತನಾಡಿ‌, “ಕನ್ನಡ ನಮ್ಮೆಲ್ಲರ ಉಸಿರು, ಕನ್ನಡ ಸಾಹಿತ್ಯ ನಮ್ಮೆಲ್ಲರಿಗೂ ಅನ್ನ ನೀಡುವುದಾಗಿದೆ. ತಾಯಿ ಭಾಷೆ, ವ್ಯವಹಾರ ಭಾಷೆ, ಆಡಳಿತ ಭಾಷೆ, ಕನ್ನಡವಾಗಿರುವುದರಿಂದ ನಾವೆಲ್ಲರೂ ಕನ್ನಡವನ್ನು ಕಡ್ಡಾಯವಾಗಿ ಅರಿಯಬೇಕು. ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಸಾಲಿನಲ್ಲಿ ಕರ್ನಾಟಕ ಅಗ್ರಗಣ್ಯವಾಗಿದೆ. ನಾಡು, ನುಡಿ, ಸಾಹಿತ್ಯ, ಸಂಸ್ಕೃತಿ, ಪರಂಪರೆ ನಮ್ಮ ಸಂಪತ್ತಾಗಿವೆ. ಕನ್ನಡದ ಶಾಲೆಗಳು ಕನ್ನಡವನ್ನು ಉಳಿಸುವ ಮತ್ತು ಬೆಳೆಸುವ ಕಾರ್ಯವನ್ನು ಮಾಡುತ್ತಿರುವುದು ಶ್ಲಾಘನೀಯ. ಸರ್ಕಾರಿ ಶಾಲೆಗಳು ಅತ್ಯಂತ ಪ್ರತಿಭಾವಂತ ಶಿಕ್ಷಕರಿಂದ ಬೋಧನೆಯಾಗುತ್ತಿದೆ. ಅನೇಕ ಜನರು ಇಂಗ್ಲೀಷ್ ಶಾಲೆಗಳಿಗೆ ಕಳಿಸುವ ವ್ಯಾಮೋಹದಿಂದ ಹೊರಬರಬೇಕು” ಎಂದರು.‌

ಇಂಡಿ ತಾಲೂಕು ತಹಶೀಲ್ದಾರ್ ಬಿ‌ ಎಸ್ ಕಡಕಬಾವಿ ಅವರ ನೇತೃತ್ವದಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಯೋಗದಲ್ಲಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ತಾಂಬಾ ಗ್ರಾಮದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಅನೇಕ ಜನರು ಭುವನೇಶ್ವರಿಗೆ ಪೂಜೆ ಹಾಗೂ ಆರತಿ ಮತ್ತು ನೂರಾರು ವಿದ್ಯಾರ್ಥಿನಿಯರು ಕುಂಭಮೇಳ ಮಾಡಿ ನಾಡದೇವತೆಗೆ ವಿಜ್ರಂಭಣೆಯಿಂದ ಗೌರವ ಸಲ್ಲಿಸಿದರು. ರೈತರು ಹಾಗೂ ಶಿಕ್ಷಕರು ಎತ್ತಿನ ಗಾಡಿಯ ಮೇಲೆ ಸಂಗೊಳ್ಳಿ ರಾಯಣ್ಣ, ಕಿತ್ತೂರ ಚನ್ನಮ್ಮ, ಒನಕೆ ಓಬವ್ವ, ಮಹಾತ್ಮಾ ಗಾಂಧೀಜಿ, ಡಾ ಅಂಬೇಡ್ಕರ್, ಸಿದ್ದೇಶ್ವರ ಶ್ರೀ, ವೇಷಭೂಷಣದಲ್ಲಿ ಮಕ್ಕಳು ಪಾಲ್ಗೊಂಡಿದ್ದು‌, ರೋಮಾಂಚನವಾಗಿತ್ತು. ನೂರಾರು ಶಿಕ್ಷಕರು ಭಾಗಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಜಿಲ್ಲೆಗೆ 371ಜೆ ಸ್ಥಾನಮಾನ ನೀಡಬೇಕೆಂದು ಆಗ್ರಹ

ಇದೇ ಸಂದರ್ಭದಲ್ಲಿ ಇಂಡಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಠೋಡ ಅಪ್ಪಣ್ಣ ಕಲ್ಲೂರ, ರಜಾಕ ಚಿಕ್ಕಅಗಸಿ, ರಾಚಪ್ಪ ಗಳೆದ, ಪ್ರಕಾಶ ಮುಂಜಿ, ವಾಸಿಮ ವಾಲಿಕಾರ, ರಾಜು ಗಂಗನಳ್ಳಿ, ಪರಶುರಾಮ ಬಿಸನಾಳ, ಎಂ. ಎ. ವಾಲಿಕಾರ, ಎಸ್ ಆರ್ ನಡಗಡ್ಡಿ, ಅಡಿವೆಪ್ಪ ಸರಸಂಬಿ, ಶ್ರೀಧರ ಉಕ್ಕಲಿ, ಬಸವರಾಜ ಅವಟಿ, ಅಹ್ಮದ ವಾಲಿಕಾರ, ಬೌರಮ್ಮ ಡೊಣ್ಣಿ, ಸಾತಿರವ್ವ ಸಕ್ರಿ, ಬೌರಮ್ಮ ಯಳಮೇಲಿ, ಕನ್ಯಾಕುಮಾರಿ ಜುಮನಾಳ, ಆನಂದ ಕಂಬಾರ, ಶಾಂತಾ ಬೆಳ್ಳುಂಡಿ, ಶಶಿಕಲಾ ಪ್ಯಾಟಿ, ಅಮೋಘಸಿದ್ದ ಮಾಶ್ಯಾಳ, ವಸರಾಯ ದೊಡ್ಡಮನಿ, ಬಸವರಾಜ ಗುಂಡಳ್ಳಿ, ಗೂಳಪ್ಪ ಗೊಬ್ಬೂರ ಸೇರಿದಂತೆ ಮುಂತಾದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...