ವಿಜಯಪುರ | ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ಸೂಕ್ತ ಕ್ರಮಕ್ಕೆ ಕರಾಸ ಆಗ್ರಹ

Date:

ಮೈಕ್ರೋ ಫೈನಾನ್ಸ್ ಬ್ಯಾಂಕುಗಳ ಕಿರುಕುಳ ಹೆಚ್ಚಾಗಿದ್ದು, ಅಮಾಯಕರು ಆತ್ಮಹತ್ಯೆ ದಾರಿಹಿಡಿಯುತ್ತಿದ್ದಾರೆ. ಹಾಗಾಗಿ ಫೈನಾನ್ಸ್ ಕಂಪನಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ವಿಜಯಪುರ ಜಿಲ್ಲಾಧಿಕಾರಿಳಿಗೆ ಮನವಿ ಸಲ್ಲಿಸಿತು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಬ್ಯಾಂಕುಗಳು ತೀವ್ರತರದಲ್ಲಿ ಬಡ್ಡಿ, ಚಕ್ರ ಬಡ್ಡಿಯನ್ನು ವಿಧಿಸುವುದರ ಮೂಲಕ ಸಾಲ ಪಡೆದ ಬಡ ಕೂಲಿ ಕಾರ್ಮಿಕರಿಗೆ, ವ್ಯಾಪಾರಸ್ಥರಿಗೆ ಗ್ರಾಮೀಣ ಭಾಗದ ಜನತೆಗೆ ಆರ್‌ಬಿಐ ನಿಯಮಾವಳಿಗಳನ್ನೂ ಮೀರಿ ಕಿರುಕುಳ ನೀಡುವುದರ ಮೂಲಕ ಜಿಲ್ಲೆಯ ಜನತೆ ಗುಳೆ ಹೋಗುವಂತೆ ಮಾಡುತ್ತಿದೆ. ಅದು ಅಲ್ಲದೆ ಮೈಕ್ರೋ ಫೈನಾನ್ಸ್ ವಸೂಲಿಗಾರರ ಕಿರುಕುಳದಿಂದಾಗಿ ಬಹುತೇಕ ಬಡ ಹೆಣ್ಣು ಮಕ್ಕಳು, ರೈತಾಪಿ ವರ್ಗ, ಕಾರ್ಮಿಕರು ಪ್ರಾಣ ಕಳೆದುಕೊಳ್ಳಲು ಮುಂದಾಗುತ್ತಿದ್ದಾರೆ” ಎಂದು ಕಳವಳ ವ್ಯಕ್ತಪಡಿಸಿದರು.

“ಮೈಕ್ರೋ ಫೈನಾನ್ಸ್ ಬ್ಯಾಂಕಿನ ಸಿಬ್ಬಂದಿಗಳು ಒಡ್ಡುವ ದಬ್ಬಾಳಿಕೆ, ಜೀವ ಬೆದರಿಕೆ, ಮನೆ ಜಪ್ತಿ ಮಾಡುವುದು, ಸಾರ್ವಜನಿಕವಾಗಿ ನಿಂದಿಸುವ ಮತ್ತು ಮಾನಹಾನಿ ಮಾಡಿ ಆತ್ಮಹತ್ಯೆಗೆ ಪ್ರಚೋದಿಸುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಆದ್ದರಿಂದಾಗಿ ಇಂತಹ ಫೈನಾನ್ಸ್ ಕಂಪನಿಗಳನ್ನು ಶಾಶ್ವತವಾಗಿ ಕಪ್ಪುಪಟ್ಟಿಗೆ ಸೇರಿಸಿ ರದ್ದುಗೊಳಿಸಿ ಜಿಲ್ಲೆಯ ಜನತೆಯ ರಕ್ಷಣೆಗೆ ಸೂಕ್ತ ಕಾನೂನು ಜಾರಿಗೊಳಿಸಬೇಕು” ಎಂದು ಮನವಿ ಮಾಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ಸಬಲಾ ಸಂಸ್ಥೆ

ಈ ವೇಳೆ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ವಿಕ್ರಮ ವಾಘಮೋರೆ ಸೀನು ಹಿಪ್ಪರಗಿ, ರಾಕೇಶ ಇಂಗಳಗಿ, ತಿಪ್ಪಣ್ಣ ಹೆಬ್ಬಾಳ, ಹಮಿದ ಇನಾಮದಾರ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...