ವಿಜಯಪುರ | ಖಾಸಗಿ ಶಾಲಾ ಬಸ್ ಚಾಲಕರ ಲೈಸೆನ್ಸ್, ಅನುಭವ ಪರಿಶೀಲಿಸಲು ಕರವೇ ಒತ್ತಾಯ

Date:

ಖಾಸಗಿ ಶಾಲಾ ಬಸ್ಸುಗಳ ಚಾಲಕರ ಲೈಸೆನ್ಸ್ ಮತ್ತು ಅವರ ಅನುಭವವನ್ನು ಪರಿಶೀಲಿಸಿ ವಾಹನಗಳ ಚಾಲನೆಗೆ ಅವಕಾಶ ಮಾಡಿಕೊಡಬೇಕೆಂದು ವಿಜಯಪುರ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು ಒತ್ತಾಯಿಸಿದರು.

ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಖಾಸಗಿ ಶಾಲೆಯ ಮಕ್ಕಳ ಬಸ್ಸುಗಳ ಪರ್ಮಿಟ್ ಹಾಗೂ ಸದರಿ ಬಸ್ಸು, ವಾಹನಗಳ ಚಾಲಕರ ಲೈಸನ್ಸ್‌ ಹಾಗೂ ಅವರ ಅನುಭವವನ್ನು ಪರಶೀಲಿಸಿದ ನಂತರ ಬಸ್ಸು, ವಾಹನಗಳು ಚಾಲನೆಗೆ ಅನುಮತಿ ನೀಡಬೇಕು. ಜಿಲ್ಲೆಯ ಎಲ್ಲ ಸರಕಾರಿ ಶಾಲೆಗಳನ್ನು ಉನ್ನತ ದರ್ಜೆಗೆ ಏರಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನ ಬಣ) ವಿಜಯಪುರ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ಎಲ್ಲ ಸಮುದಾಯದ ಶಾಲಾ ಮಕ್ಕಳ ಪಾಲಕರ ಪರವಾಗಿ, ಸಂಘಟನೆಯ ರಾಜ್ಯಾಧ್ಯಕ್ಷ ಪಿ.ಕೃಷ್ಣಗೌಡ ಅವರ ಆದೇಶದ ಮೇರೆಗೆ, ಜಿಲ್ಲೆಯ ಎಲ್ಲ ನಾಗರಿಕರ ಪರವಾಗಿ ಜಿಲ್ಲಾ ಪಂಚಾಯತಿ ಸಿಇಒಗೆ ಮನವಿ ಮಾಡುತ್ತೇವೆ. ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಖಾಸಗಿ ಶಾಲೆಗಳ ಮಕ್ಕಳ ಬಸ್ಸುಗಳು, ಇನ್ನಿತರ ವಾಹನಗಳ ಪರ್ಮಿಟ್, ಇನ್ಸುರೆನ್ಸ್‌ ಪಡೆಯುವುದು, ಸದರಿ ಬಸ್‌ಗಳು ಹಾಗೂ ವಾಹನಗಳ ಚಾಲಕರ ಲೈಸನ್ಸ್‌ ಹಾಗೂ ಕಡಿಮೆ ಎಂದರೂ 5 ವರ್ಷದ ಚಾಲನಾ ಅನುಭವ ಸರ್ಟಿಫಿಕೇಟ್‌ಗಳನ್ನು ಪಡೆದ ಬಗ್ಗೆ ಸಮಗ್ರವಾಗಿ ಪರಿಶೀಲಿಸಿ ಚಾಲನೆಗೆ ಒಪ್ಪಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಖಾಸಗಿ ಹಾಗೂ ಸರ್ಕಾರಿ ಬಸ್ ಚಾಲಕರ ಬೇಜವಾಬ್ದಾರಿ ಮತ್ತು ಸರ್ಕಾರಿ ನಿಯಮಗಳನ್ನು ಪಾಲಿಸದೇ ಭಾರಿ ವೇಗವಾಗಿ ವಾಹನ ಚಲಾಯಿಸಿದ ಪರಿಣಾಮ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಹತ್ತಿರ ಲೋಯೋಲ ಶಾಲೆಯ ಖಾಸಗಿ ಶಾಲಾ ಮಕ್ಕಳ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸಿನ ಮಧ್ಯ ಗಂಭೀರ ಅಪಘಾತವಾಗಿತ್ತು. ಪರಿಣಾಮ 2 ಮಕ್ಕಳು ಸಾವನ್ನಪ್ಪಿ 17 ಮಕ್ಕಳು ಗಂಭೀರ ಗಾಯಕ್ಕೆ ಸಿಲುಕಿ, ಅದರಲ್ಲಿ ನಾಲ್ಕು ಮಕ್ಕಳ ಕೈ ಕಾಲುಗಳು ಕಟ್ ಆಗಿರುವ ಸ್ಥಿತಿ ನೋಡಿ ಎಲ್ಲ ಸಾರ್ವಜನಿಕರು ಚಿಂತಾಕ್ರಾಂತರಾಗಿದ್ದೇವೆ. ಮಕ್ಕಳ ಪೋಷಕರ ಪರಿಸ್ಥಿತಿ ಊಹಿಸಿಕೊಳ್ಳಲೂ ಸಾಧ್ಯವಿಲ್ಲ. ಅದಕ್ಕಾಗಿ, ತಕ್ಷಣ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ಒದಗಿಸಬೇಕು. ಮುಂದಿನ ದಿನಗಳಲ್ಲಿ ನಮ್ಮ ಜಿಲ್ಲೆಯಲ್ಲಿ ಕೂಡ ಇಂತಹ ಘೋರ ದುರಂತ ತಪ್ಪಿಸಲು ದಿಟ್ಟ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.

ಜಿಲ್ಲೆಯ ಎಲ್ಲ ಸರಕಾರಿ ಶಾಲೆಗಳು ಉನ್ನತ ದರ್ಜೆಗೆ ಏರಿಸಲು, ಎಲ್ಲ ಶಾಲೆಯ ಕಟ್ಟಡಗಳ ಜೀರ್ಣೋದ್ದಾರಗೊಳಿಸಲು ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಎಲ್ಲ ಶಾಲೆಯ ಎಸ್.ಡಿ.ಎಮ್.ಸಿ ಸದಸ್ಯರು ಹಾಗೂ ಎಲ್ಲ ಶಾಲೆಯ ಮಾನ್ಯ ಮುಖ್ಯೋಪಾಧ್ಯಾಯರ ಸಭೆ ಆಯೋಜಿಸಿ, ಸರಕಾರವೇ ಎಲ್ಲವೂ ಮಾಡಲಿ ಎನ್ನುವ ಮನೋಭಾವ ಬಿಟ್ಟು, ಆಯಾ ಗ್ರಾಮಗಳ ಎಲ್ಲ ಸಮುದಾಯದ ಸಾರ್ವಜನಿಕರ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಎಲ್ಲರನ್ನು ಒಗ್ಗೂಡಿಸಿ ಹಾಗೂ ಆಯಾ ಶಾಲೆಯ ಎಲ್ಲ ಶಿಕ್ಷಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಬೆಳಗಾವಿ | ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರದಿಂದ ಮೀನಮೇಷ: ದಲಿತ ಸಂಘರ್ಷ ಸಮಿತಿ ಆಕ್ರೋಶ

ಪ್ರತಿಭಟನೆಯಲ್ಲಿ ಉತ್ತರ ಕರ್ನಾಟಕ ವಿಭಾಗದ ಅಧ್ಯಕ್ಷ ಲಕ್ಷ್ಮಣ್ ಕಾಂಬೋಗಿ, ವಿಜಯಪುರ ಜಿಲ್ಲಾ ಮುಖಂಡ ಜಯದೇವ ಸೂರ್ಯವಂಶಿ, ಗಿರೀಶ್ ಕಲಘಟಗಿ, ಲಿಂಗರಾಜ ಬಿದರಕುಂದಿ, ಸಂಕೇಶ್ ಪಟ್ಟಣದ, ಎಂ.ಆರ್.ಗಾರಿಕಾರ, ಮಲ್ಲಯ್ಯ ಹಿರೇಮಠ್ ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...