ವಿಜಯಪುರ | ಕಾಶ್ಮೀರ ದಾಳಿ; ದಲಿತ ವಿದ್ಯಾರ್ಥಿ ಪರಿಷತ್‌ ಖಂಡನೆ

Date:

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ವಿರೋಧಿಸಿ ಮತ್ತು ಕೇಂದ್ರ ಸರ್ಕಾರದ ವೈಫಲ್ಯವನ್ನು ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಲಾಗಿದೆ.

ದವಿಪ ಮುಖಂಡ ಅಕ್ಷಯ ಕುಮಾರ ಅಜಮನಿ ಮಾತನಾಡಿ, “ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಸುಮಾರು 25ಕ್ಕಿಂತ ಹೆಚ್ಚು ಜನರು ಮೃತಪಟ್ಟಿದ್ದಾರೆ. ಹಾಡ ಹಗಲೇ ಭಯವಿಲ್ಲದೆ ಉಗ್ರರು ಗುಂಡು ಹಾರಿಸುತ್ತಾರೆ ಎಂದರೆ ಅದು ಹೇಗೆ ಸಾಧ್ಯ? ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆ, ಗೃಹ ಇಲಾಖೆ, ಗುಪ್ತಚರ ಇಲಾಖೆ ಮಾಡುತ್ತಿರುವುದೇನು? ಕೇಂದ್ರ ಸರ್ಕಾರದ ಕಾರ್ಯನಿರ್ವಹಣೆ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಇದಕ್ಕೆ ಉತ್ತರ ಕೊಡಲೇಬೇಕು” ಎಂದು ಆಗ್ರಹಿಸಿದರು.

ಈ ಹಿಂದೆಯೂ ಪುಲ್ವಾಮದಲ್ಲಿ 42 ಯೋಧರ ಮೇಲೆ ಬಾಂಬ್ ದಾಳಿ ನಡೆಯಿತು. ಅವರಿಗೂ ನ್ಯಾಯ ಕೊಡಿಸುವ ಕೆಲಸ ಈ ಸರ್ಕಾರದಿಂದ ಸಾಧ್ಯವಾಗಿಲ್ಲ. ಉಗ್ರರ ದಾಳಿಯಿಂದ ಮೃತಪಟ್ಟ ಜನರಿಗೆ ರಕ್ಷಣೆ ನೀಡಬೇಕು ಅದೇ ರೀತಿಯಾಗಿ ಭಯಭೀತರಾಗಿರುವ ದೇಶದ ಜನರಿಗೂ ಕೂಡ ಕಾನೂನು ಸುವ್ಯವಸ್ಥೆಯಿಂದ ಭದ್ರತೆ ನೀಡಬೇಕು. ಅನಾಹುತದ ವೈಫಲ್ಯಕ್ಕೆ ಕಾರಣವಾದ ಪ್ರಧಾನ ಮಂತ್ರಿ, ರಕ್ಷಣಾ ಸಚಿವರು ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು” ಒತ್ತಾಯಿಸುತ್ತೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಮಾದೇಶ್ ಚಲವಾದಿ, ಶಂಕರ್ ಬಸರಗಿ, ಪಂಡಿತ್ ಯಲಗೋಡ, ಯುವರಾಜ್ ಓಲೇಕಾರ್, ಪ್ರಶಾಂತ್ ದಾಂಡೇಕರ್, ನವೀನ್, ಸಂದೇಶ್, ದಾವುದ, ಅಪ್ಪಷ್ ಇದ್ದರು.

ಇದನ್ನೂ ಓದಿ: ವಿಜಯಪುರ | ಸಂವಿಧಾನ ವಿರೋಧಿ ಶಕ್ತಿಗಳ ವಿರುದ್ಧ ಧ್ವನಿಯೆತ್ತುವ ಕೆಲಸವಾಗಲಿ: ವಿರಾತಿಶಾನಂದ ಸ್ವಾಮೀಜಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...