ವಿಜಯಪುರ | ಕಿತ್ತೂರು ರಾಣಿ ಚನ್ನಮ್ಮನ ವ್ಯಕ್ತಿತ್ವ ಸದಾ ಸ್ಪೂರ್ತಿದಾಯಕ: ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ

Date:

ವೀರರಾಣಿ ಕಿತ್ತೂರು ರಾಣಿ ಚನ್ನಮ್ಮನವರ ವ್ಯಕ್ತಿತ್ವ ಸದಾ ಸ್ಪೂರ್ತಿದಾಯಕ. ಏಕೆಂದರೆ ಪ್ರಬಲ ಆಂಗ್ಲರ ವಿರುದ್ಧ ಹೋರಾಟ ನಡೆಸಿ ಭಾರತದ ಸ್ವಾತಂತ್ರ‍್ಯ ಸಂಗ್ರಾಮಕ್ಕೆ ಮುನ್ನುಡಿ ಬರೆದ ಕೀರ್ತಿ ಅವರದು ಎಂದು ಅಕಾಡೆಮಿ ಸದಸ್ಯೆ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಅಭಿಪ್ರಾಯಪಟ್ಟರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ಯವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ಕಿತ್ತೂರು ರಾಣಿ ಚನ್ನಮ್ಮಾಜಿ ಜಯಂತಿ ಹಾಗೂ ವಿಜಯೋತ್ಸವದ ವಿಶೇಷ ಉಪನ್ಯಾಸ ಸಮಾರಂಭದಲ್ಲಿ ಮಾತನಾಡಿದರು.

“ಮಾನವ ಹಕ್ಕುಗಳನ್ನು ಪ್ರತಿಪಾದಿಸುವ ಮೂಲಕ ಮಾನವೀಯತೆಗೆ ಹೆಸರಾದ ರಾಣಿ ಚನ್ನಮ್ಮನ ವ್ಯಕ್ತಿತ್ವ ಸದಾ ಸ್ಪೂರ್ತಿದಾಯಕವಾಗಿದೆ. ಝಾನ್ಸಿಯ ರಾಣಿ ಲಕ್ಷ್ಮೀಬಾಯಿಯವರ ಹೋರಾಟಕ್ಕಿಂತ 33 ವರ್ಷ ಮೊದಲು ಕಿತ್ತೂರಿನ ರಾಣಿ ಚನ್ನಮ್ಮ ಅವರು ಬ್ರಿಟಿಷ್ ಅಧಿಕಾರಿಗಳಿಗೆ ಮೊದಲ ಸೋಲನ್ನು ನೀಡಿದರು. ಕಿತ್ತೂರಿನ ಸರದಾರ್ ಗುರುಸಿದ್ಧಪ್ಪ ಅಮಟೂರು, ಬಾಳಪ್ಪ ಬಿಚ್ಚುಗತ್ತಿ, ಚನ್ನಬಸಪ್ಪ, ಸಂಗೋಳ್ಳಿ ರಾಯಣ್ಣ, ವಡ್ಡರ ಯಲ್ಲಣ್ಣನಂತಹ ವೀರರ ಸಂಘಟಿತ ಹೋರಾಟ ಇಂದಿಗೂ ಭಾರತದ ಇತಿಹಾಸದಲ್ಲಿ ಅಜರಾಮರವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶಟ್ಟಿ ಮಾತನಾಡಿ, “ಮೌಲ್ಯಾಧಾರಿತ ಬದುಕಿನಿಂದ ವ್ಯಕ್ತಿತ್ವ ರೂಪಿಸಿಕೊಳ್ಳುವ ತುರ್ತು ಅಗತ್ಯ ನಮ್ಮ ಮುಂದೆ ಇದೆ. ಇಂದು ‘ರೀಲ್ಸ್ ಲೈಫ್’ಗಿಂತ ‘ರಿಯಲ್ ಲೈಫ್’ ಬಗ್ಗೆ ಎಚ್ಚರಿಕೆಯಿಂದ ಬದುಕುವುದು ಮುಖ್ಯ. ಕಿತ್ತೂರು ರಾಣಿ ಚನ್ನಮ್ಮನಂತಹ ಸಬಲೀಕೃತ ರಾಣಿಯ ಜೀವನಾದರ್ಶಗಳು ವಿದ್ಯಾರ್ಥಿನಿಯರಿಗೆ ಮಾದರಿಯಾಗಬೇಕು” ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, “ಕರ್ನಾಟಕ ಎಂದರೆ ಅದು ಕಿತ್ತೂರು ಚನ್ನಮ್ಮ ಅವರ ನೆನಪನ್ನು ಜೀವಂತವಾಗಿಟ್ಟಿದೆ. ಅವರ ಬದುಕು ನಮಗೆ ಚೈತನ್ಯ ತುಂಬುತ್ತದೆ” ಎಂದು ಅಭಿಪ್ರಾಯಪಟ್ಟರು. ಇದೇ ವೇಳೆ ಉಪನ್ಯಾಸಕ್ಕೆ ಸಂಬಂಧಿಸಿದಂತೆ ಹತ್ತು ಪ್ರಶ್ನೆಗಳನ್ನು ಕೇಳಿ ಸರಿಯಾದ ಉತ್ತರ ನೀಡಿದ ವಿದ್ಯಾರ್ಥಿನಿಯರಿಗೆ ಪುಸ್ತಕ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದ ಸಂಯೋಜಕ ಬಸವ ಅಧ್ಯಯನ ಪೀಠದ ಅಧ್ಯಕ್ಷ ಪ್ರೊ. ರಾಜಕುಮಾರ ಮಾಲಿಪಾಟೀಲ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ, “ಚನ್ನಮ್ಮ ಅವರ ಜೀವನ ಇತಿಹಾಸ ಹೆಣ್ಣುಮಕ್ಕಳಿಗೆ ಸ್ವಾಭಿಮಾನಿ ಬದುಕನ್ನು ರೂಪಿಸಿಕೊಳ್ಳಲು ಪ್ರೇರಣೆಯಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಎಡಿಸಿ ಸೈಯಿದಾ ಆಯಿಷಾ.

ಕಾರ್ಯಕ್ರಮದಲ್ಲಿ ಪ್ರೊ. ಬಿ ಎಲ್ ಲಕ್ಕಣ್ಣನವರ, ವಿವಿಧ ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಸ್ನಾತಕ ದೈಹಿಕ ಶಿಕ್ಷಣ ವಿಭಾಗದ ಅಶ್ವಿನಿ ಮತ್ತು ಅನ್ನಪೂರ್ಣ ಪ್ರಾರ್ಥನೆ ಸಲ್ಲಿಸಿದರು. ಸ್ನಾತಕೋತ್ತರ ದೈಹಿಕ ಶಿಕ್ಷಣ ವಿಭಾಗದ ರಾಜೇಶ್ವರಿ ನಿರೂಪಣೆ ಮಾಡಿ, ಅಶ್ವಿನಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...