ವಿಜಯಪುರ | ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಕೆಆರ್‌ಎಸ್ ಪಕ್ಷ ಆಗ್ರಹ

Date:

ಲೋಕಸಭಾ ಚುನಾವಣೆಗೆ ಹಾಸನದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸುಪ್ರಿಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆಯನ್ನು ಮಾಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ವಿಜಯಪುರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, “ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರ ಮೊಮ್ಮಗನಾಗಿರುವ ಕಾರಣಕ್ಕೆ ಕಳೆದ ಬಾರಿ ಲೋಕಸಭಾ ಅಭ್ಯರ್ಥಿಯಾಗಿ ಜನತೆ ಚುನಾಯಿಸಿ ಹಾಸನದಿಂದ ದೆಹಲಿಗೆ ಕಳುಹಿಸಿದ್ದರು. ಆದರೆ ಇಂದು ದೇಶ ಮಟ್ಟದಲ್ಲಿ ಕರ್ನಾಟಕದ ಮಾನ ಮರ್ಯಾದೆಯನ್ನು ಹರಾಜು ಹಾಕಿರುವ ಪ್ರಜ್ವಲ್ ರೇವಣ್ಣ‌ನ ಲೈಂಗಿಕ ಕಿರುಕುಳದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈತ ಕಾಮುಕ ಉಮೇಶ್ ರೆಡ್ಡಿಗಿಂತಲೂ ಅಪಾಯಕಾರಿಯಾದ ಮನೋಭಾವನೆ ಹೊಂದಿರುವ ಗೋಮುಖ ವ್ಯಾಘ್ರನಾಗಿದ್ದಾನೆ” ಎಂದು ಆರೋಪಿಸಿದರು.

“ಮೊನ್ನೆಯ ದಿನ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಎರಡು ಕಡೆ ಎಫ್ಐಆರ್ ದಾಖಲಿಸಿದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಈ ಪ್ರಕರಣವನ್ನು ಎಸ್ಐಟಿಗೆ ವಹಿಸಿದೆ. ಆರೋಪಿಯು ಪ್ರಭಾವಿ ರಾಜಕಾರಣಿಯಾಗಿರುವ ಕಾರಣಕ್ಕೆ ರಾಜ್ಯ ಸರ್ಕಾರ ಮತ್ತು ಅಧಿಕಾರಿ ವರ್ಗ ಆತ ಇಂದು ಬಂಧನಕ್ಕೆ ಒಳಗಾಗುವ ಮುಂಚೆ ಜರ್ಮನ್ ದೇಶಕ್ಕೆ ಹೋಗಿ, ಅವಿತುಕೊಳ್ಳಲು ಅವಕಾಶವನ್ನು ನೀಡಿರುವುದು ಕರುನಾಡಿನ ಸ್ತ್ರೀಕುಲಕ್ಕೆ ಮಾಡಿದ ಅವಮಾನವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ಎರಡ್ಮೂರು ದಿನಗಳಿಂದ ಇಷ್ಟೊಂದು ಪುರಾವೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದರೂ ಆತನು ತಪ್ಪಿಸಿಕೊಂಡು ಜರ್ಮನಿ ದೇಶಕ್ಕೆ ಹೋಗಲು ನಮ್ಮ ಆಡಳಿತ ವ್ಯವಸ್ಥೆ ಅನುಕೂಲ ಮಾಡಿಕೊಟ್ಟಿರುವುದು ಖೇದಕರ ಸಂಗತಿ. ಈ ವಿಷಯದ ಕುರಿತು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವೂ ಭಾನುವಾರ ಹೊಳೆನರಸೀಪುರ ಮತ್ತು ಹಾಸನ ಜಿಲ್ಲೆಯಲ್ಲಿ ಎಫ್‌ಐಆರ್‌ ದಾಖಲಿಸಿದೆ. ಎಫ್‌ಐಆರ್ ತೆಗೆದುಕೊಳ್ಳುವಾಗ ಪೊಲೀಸ್ ಇಲಾಖೆಯ ಅಧಿಕಾರಿಗಳು ನಡೆದುಕೊಂಡ ರೀತಿ‌ ನೋಡಿದರೆ ಹಲವು ಅನುಮಾನಗಳು ಮೂಡುತ್ತಿವೆ” ಎಂದರು.

“ನಿಷ್ಪಕ್ಷಪಾತ ತನಿಖೆಯನ್ನು ಕೈಗೊಳ್ಳಲು ಮತ್ತು ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಕೊಡಿಸಲು ಎಸ್‌ಐಟಿಯಿಂದ ಅದು ಸಾಧ್ಯವಾಗದು ಎಂದು ಅರಿತು ಈ ಪ್ರಕರಣವನ್ನು ರಾಜ್ಯ ಸರ್ಕಾರ ಕೂಡಲೇ ಸಿಬಿಐಗೆ ವಹಿಸಬೇಕು” ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತಮಿತ್ರರಾಗಿರುವ ರೇವಣ್ಣನವರ ಮಗನೇ ಆರೋಪಿ ಆಗಿರುವುದರಿಂದಾಗಿ ರಾಜ್ಯ ಸರ್ಕಾರದ ಮೇಲೆಯೂ ಅನುಮಾನ ಮೂಡುವ ವಾತಾವರಣವು ರಾಜ್ಯದಲ್ಲಿ ನಿರ್ಮಾಣವಾಗುವ ಸಂಭವಿಸುತ್ತದೆ. ಈ ಕಾರಣಕ್ಕೆ ಪ್ರಕರಣವೂ ಸಂಪೂರ್ಣವಾಗಿ ನ್ಯಾಯ ಸಮ್ಮತವಾದ ತನಿಖೆ ಆಗುವುದಿಲ್ಲವೆಂಬ ಅನುಮಾನವೂ ರಾಜ್ಯದ ಜನತೆಯಲ್ಲಿ ಮೂಡುತ್ತಿದೆ. ಹಾಗಾಗಿ ಆರೋಪಿಯನ್ನು ಶೀಘ್ರದಲ್ಲಿ ಬಂಧಿಸಿ ಕರುನಾಡಿನ ಸ್ತ್ರೀ ಕುಲದ ಗೌರವವನ್ನು ಎತ್ತಿ ಹಿಡಿಯಬೇಕು” ಎಂದು ಕೆಆರ್‌ಎಸ್ ಪಕ್ಷ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಪ್ರಜ್ವಲ್‌ ಪೆನ್‌ಡ್ರೈವ್ ಪ್ರಕರಣ |‌ ಸಂತ್ರಸ್ತ ಮಹಿಳೆಯರ ಪರ ಬಿಜೆಪಿ ಯಾಕೆ ಧ್ವನಿ ಎತ್ತುತ್ತಿಲ್ಲ : ಪ್ರಿಯಾಂಕ್‌ ಖರ್ಗೆ

ಮುಖಂಡರುಗಳಾದ ರಾಕೇಶ ಇಂಗಳಗಿ, ಪ್ರವೀಣ ಕನಸೇ, ಹಮೀದ್ ಇನಾಮದಾರ, ವಿಕ್ರಮ ವಾಗ್ಮೋರೆ, ದೀಪಾ ಮರ್ನೂರ, ಕಾಂತುಗೌಡ ಬೆಂಡವಾಡ ಮತ್ತು ದುರ್ಗಪ್ಪ ಬೂದಿಹಾಳ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...