ವಿಜಯಪುರ | ಅನಧಿಕೃತ ಪಟಾಕಿ ಅಂಗಡಿ ತೆರವಿಗೆ ಕೆಆರ್‌ಎಸ್‌ ಆಗ್ರಹ

Date:

ಪಟಾಕಿಗಳ ಮಾರಾಟಕ್ಕೆ ಪರವಾನಗಿ ಪಡೆಯದೆ ಅನಧಿಕೃತವಾಗಿ ತೆರೆದಿರುವ ಪಟಾಕಿ ಅಂಗಡಿಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಕಾರ್ಯಕರ್ತರು ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

“ಪಟಾಕಿ ಮಳಿಗೆಗಳನ್ನು ತೆರೆಯಲು ಸರ್ಕಾರ ನಿರ್ದಿಷ್ಟವಾದ ಕಾನೂನುಗಳನ್ನು ಜಾರಿಗೆ ತಂದಿದೆ. ಆದರೆ ಜಿಲ್ಲಾದ್ಯಂತ ಯಾವುದೇ ರೀತಿಯ ಪರವಾನಗಿ ಪಡೆಯದೆ ಜನಸಂದಣಿ ಹೆಚ್ಚಾಗಿರುವ ಪ್ರದೇಶದಲ್ಲಿ ಅನಧಿಕೃತವಾಗಿ ವ್ಯಾಪಾರ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ಪಟಾಕಿ ಮಳಿಗೆ ತೆರೆಯಲು ಜಿಲ್ಲಾಧಿಕಾರಿಯಿಂದ ಸ್ಫೋಟಕ ಪರವಾನಗಿ, ಅಗ್ನಿಶಾಮಕ ಮತ್ತು ಪೊಲೀಸ್ ಇಲಾಖೆಯಿಂದ ಅನುಮತಿ ಪತ್ರ, ಸ್ಥಳೀಯ ಸಂಸ್ಥೆಗಳ ಜನರಲ್ ಲೈಸೆನ್ಸ್‌ ಸೇರಿದಂತೆ  ಮುಂತಾದ ಅನುಮತಿ ಪತ್ರಗಳನ್ನು ಪಡೆದುಕೊಂಡು ಜನಸಂದಣಿ ಇಲ್ಲದ, ಅಗ್ನಿ ಅವಘಡಗಳು ಸಂಭವಿಸಿದಾಗ ಹೆಚ್ಚು ಹಾನಿಯಾಗದ ಪ್ರದೇಶಗಳಲ್ಲಿ ಸುರಕ್ಷತೆಯಿಂದ ಮಳಿಗೆಗಳನ್ನು ತೆಗೆಯಲು ಮತ್ತು ವ್ಯಾಪಾರ ವಹಿವಾಟುಗಳು ಮಾಡಲು ಅವಕಾಶವಿರುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಲವು ಪಟಾಕಿ ಮಾರಾಟಗಾರರು ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಪೋಲಿಸ್ ಇಲಾಖೆ ಮತ್ತು ಅಗ್ನಿಶಾಮಕ ಅಧಿಕಾರಿಗಳಿಗೆ ತಿಂಗಳುವಾರು ಹಫ್ತಾ ನೀಡುವುದರ ಮೂಲಕ ಅನಧಿಕೃತ ಅಂಗಡಿಗಳ ಮಾಲೀಕರು ವರ್ಷಪೂರ್ತಿ ಅಂಗಡಿಯನ್ನು ತೆರೆದು ವ್ಯಾಪಾರ ಮಾಡುತ್ತಿದ್ದಾರೆ. ನಿಯಮದ ಪ್ರಕಾರ ಜಿಲ್ಲಾಧಿಕಾರಿಯವರು ಹಬ್ಬ, ನಾಡ ಉತ್ಸವಗಳಲ್ಲಿ ಎರಡು ದಿನಗಳು ಮಾತ್ರ ಮಳಿಗೆಗಳನ್ನು ತೆರೆಯಲು ಅವಕಾಶವನ್ನು ನೀಡುತ್ತಾರೆ. ಆದ್ದರಿಂದಾಗಿ ಈ ಕೂಡಲೇ ತಮ್ಮ ಇಲಾಖೆಯ ರಾಜಶ್ವ ನಿರೀಕ್ಷಕರ ನೇತೃತ್ವದಲ್ಲಿ ಒಂದು ಟಾಸ್ಕ್ ಫೋರ್ಸ್ ತಂಡವನ್ನು ರಚಿಸಿ ಅನಧಿಕೃತ ಅಂಗಡಿಗಳನ್ನು ಬಂದ್ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಸ್ಪೋಟಕ ಪರವಾನಗಿ ಇಲ್ಲದೆ ಅನಧಿಕೃತ ಮಳಿಗೆಗಳಲ್ಲಿ ವ್ಯವಹಾರ ನಡೆಸುತ್ತಿವೆ. ಇದನ್ನು ತಡೆಗಟ್ಟಬೇಕೆಂದು 2022ರಲ್ಲಿ ಮನವಿ ಸಲ್ಲಿಸಿದ್ದೆವು. ಆದರೆ ಅಧಿಕಾರಿಗಳು ತಮ್ಮ ಲಂಚಬಾಕ ಆಮಿಷಗಳಿಂದ ಅನಧಿಕೃತವಾಗಿ ಪಟಾಕಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿದ್ದರು. ಇದರಿಂದಾಗಿ ಕಳೆದ ಮೂರು ನಾಲ್ಕು ದಿನಗಳ ಹಿಂದೆ ಅತ್ತಿಬೆಲೆಯಲ್ಲಿ ಬೆಂಕಿ ಅವಘಡದಿಂದ ಪಟಾಕಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ 13 ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಖಾಯಂ ಶಿಕ್ಷಕರ ನೇಮಕಕ್ಕೆ ಆಗ್ರಹ; ಸಿಎಂ ಭೇಟಿ ಮಾಡಿದ ಎಸ್ಎಫ್ಐ ನಿಯೋಗ

“ವಿಜಯಪುರ ಜಿಲ್ಲೆಯಲ್ಲಿ ಆ ರೀತಿಯ ಪ್ರಕರಣಗಳು ನಡೆಯಬಾರದೆಂಬ ಮುಂಜಾಗೃತೆ ವಹಿಸಬೇಕೆಂದು ತಮ್ಮ ಗಮನಕ್ಕೆ ತಂದಿದ್ದು, ತಾವು ಕ್ರಮ ಕೈಗೊಳ್ಳುತ್ತೀರೆಂದು ಭಾವಿಸಿದ್ದೇವೆ” ಎಂದು ಹೇಳಿದರು.

ರಾಜ್ಯ ಸಂಘಟನೆ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ರಾಕೇಶ ಇಂಗಳಗಿ, ಅಮೀದ ಇನಾಮ್ದಾರ್, ಪ್ರವೀಣ ಕನಸೆ, ವಿಕ್ರಮ ವಾಗ್ಮೊರೆ ಮತ್ತು ಶ್ರೀಶೈಲ ಮಠ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...