ವಿಜಯಪುರ | ಕುವೆಂಪು ಓದು ಕಮ್ಮಟ, ಕಾಲೇಜು ವಿದ್ಯಾರ್ಥಿಗಳಿಗೆ ಸಹಕಾರಿ: ಡಾ ಚನ್ನಪ್ಪ ಕಟ್ಟಿ

Date:

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಕುವೆಂಪು ಅವರು ಕನ್ನಡ ನಾಡಿನ ಅಸ್ಮಿತೆಯಂತಿದ್ದರು. ಅವರ ಬರಹಗಳನ್ನು ಕಾಲೇಜು ವಿದ್ಯಾರ್ಥಿಗಳಿಗೆ ತಲುಪಿಸುವಲ್ಲಿ ಕುವೆಂಪು ಓದು ಕಮ್ಮಟ ಸಹಕಾರಿಯಾಗಲಿದ್ದು, ಅವರ ಕೃತಿಗಳ ಮರುಓದು ಹೊಸವಿಚಾರಗಳನ್ನು ನೀಡುತ್ತದೆ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ ಚನ್ನಪ್ಪ ಕಟ್ಟಿ ಹೇಳಿದರು.

ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಬೆಂಗಳೂರು ಹಾಗೂ ವಿಜಯಪುರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕುವೆಂಪು ಓದು: ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಾಧಿಕಾರದ ಸದಸ್ಯ ಜೆ ಕರಿಯಪ್ಪ ಮಾಳಿಗೆ ಪ್ರಾಸ್ತಾವಿಕವಾಗಿ ಮಾತನಾಡಿ,‌ “ಕುವೆಂಪು ಓದು ಕಮ್ಮಟವು ಈ ವರ್ಷದ ಕಾರ್ಯಕ್ರಮಗಳನ್ನು ಇಂಡಿಯಿಂದಲೇ ಪ್ರಾರಂಭಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಕರ್ನಾಟಕದಾದ್ಯಂತ ಭಾಷಾಭಾರತಿ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ರಾಜ್ಯ ಮಹಿಳಾ ವಿವಿ ಸಿಂಡಿಕೇಟ್ ಸದಸ್ಯ ಪ್ರೊ.ಎಸ್ ಜೆ ಮಾಡ್ಯಾಳ ಅವರು ವೇದಿಕೆಯಲ್ಲಿದ್ದರು. ಮೊದಲ ಗೋಷ್ಠಿಯಲ್ಲಿ ಕುವೆಂಪು ಅವರ ಕುವೆಂಪು ಅವರ ನಾಟಕಗಳು ಕುರಿತು ಸಂಶೋಧಕ ಡಾ. ಎಸ್ ಕೆ ಕೊಪ್ಪಾ ಉಪನ್ಯಾಸ ನೀಡಿದರು. 2ನೇ ಗೋಷ್ಠಿಯಲ್ಲಿ ಕುವೆಂಪು ಅವರ ವೈಚಾರಿಕ ಬರಹಗಳ ಕುರಿತು ಶಹಾಪುರದ ವಿಮರ್ಶಕ ಸಿ ಎಸ್ ಬೀಮರಾಯ ಉಪನ್ಯಾಸ ನೀಡಿ ಕುವೆಂಪು ಅವರು ವೈಚಾರಿಕ ಪ್ರಜ್ಞೆಯನ್ನು ತಮ್ಮ ಬರಹ ಮತ್ತು ಮಾತು, ನಡೆಗಳ ಮೂಲಕ ನೀಡಿದ್ದಾರೆಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಲೋಕಾಪುರ-ಸವದತ್ತಿ-ಧಾರವಾಡ ರೈಲು ಮಾರ್ಗಕ್ಕೆ ಸಚಿವರ ಜೊತೆ ಚರ್ಚೆ

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಘವೇಂದ್ರ ಕುಲಕರ್ಣಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. 25ಕ್ಕೂ ಅಧಿಕ ಮಂದಿ ವಿದ್ಯಾರ್ಥಿ, ವಿದ್ಯಾರ್ಥಿನೀಯರು ಕಮ್ಮಟದ ಶಿಬಿರಾರ್ಥಿಗಳಾಗಿ ಭಾಗವಹಿಸಿ ಕುವೆಂಪು ಓದು ಮತ್ತು ವಿಶ್ಲೇಷಣೆ ಮಾಡಿದರು.

ಪ್ರೊ. ಕಿರಣಕುಮಾರ ರೇವಣಕರ, ಡಾ.ತ್ರಿವೇಣಿ ಬನಸೋಡೆ, ಪ್ರೊ. ಸಂತೋಷ ಗೊರನಾಳ, ಪ್ರೊ.ರವಿಕುಮಾರ ಅರಳಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...