ವಿಜಯಪುರ | ಆಲಮಟ್ಟಿ ಅಣೆಕಟ್ಟು ಎತ್ತರಿಸಲು ಭೂಸ್ವಾಧೀನಕ್ಕೆ, ನಿಗದಿ ಬೆಲೆ ಘೋಷಿಸಲಾಗುವುದು: ಡಿಕೆಶಿ

Date:

ಆಲಮಟ್ಟಿ ಅಣೆಕಟ್ಟು ಎತ್ತರವನ್ನು 518 ಮೀ.ನಿಂದ 524 ಮೀ. ಎತ್ತರಿಸುವ ಬಗ್ಗೆ ಆದ್ಯತೆ ಮತ್ತು ಬದ್ಧತೆ ನಮ್ಮ ಸರ್ಕಾರಕ್ಕಿದೆ. ಮುಂದಿನ ಒಂದು ವಾರದೊಳಗೆ ಭೂಸ್ವಾಧೀನಕ್ಕೆ ನಿಗದಿ ಮಾಡಿರುವ ಬೆಲೆ ಘೋಷಣೆ ಮಾಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಆಲಮಟ್ಟಿ ಅಣೆಕಟ್ಟಿನಲ್ಲಿ ಕೃಷ್ಣಾನದಿಗೆ ಬಾಗಿನ ಅರ್ಪಿಸಿದ ನಂತರ ನಡೆದ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದರು.

“ಮುಖ್ಯಮಂತ್ರಿಯವರು ಹಾಗೂ ಯೋಜನೆ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆ ನಡೆಸಿ ಬೆಲೆ ನಿಗದಿ ತೀರ್ಮಾನ ಮಾಡಲಾಗುವುದು. ಯಾವುದೇ ಮೇಲ್ಮನವಿ ಇಲ್ಲದಂತೆ ಒಂದೇ ಹಂತದ ಒಪ್ಪಿತ ಭೂಸ್ವಾಧೀನಕ್ಕೆ ಮುಖಂಡರು, ಜನಪ್ರತಿನಿಧಿಗಳು ಒಪ್ಪಿಗೆ ‌ನೀಡಬೇಕು. ಪುನರ್ವಸತಿ ಬಗ್ಗೆ ಪ್ರತ್ಯೇಕ ತೀರ್ಮಾನ ಮಾಡಲಾಗುವುದು. ಸಮುದ್ರಕ್ಕೆ ಹೋಗುತ್ತಿರುವ ನೀರನ್ನು ನಮ್ಮ ಜನರಿಗೆ ನೀರಾವರಿ ಕಲ್ಪಿಸುವುದು ನಮ್ಮ ಸಂಕಲ್ಪ. ಇದನ್ನು ಇದೇ ಅವಧಿಯಲ್ಲಿ ಮಾಡಲು ಮುಂದಾಗಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಳುಗಡೆ ಜಮೀನುಗಳಿಗೆ ಉದಾರ ಮನಸ್ಸಿನಿಂದ ಪರಿಹಾರ ನೀಡಬೇಕು. ಕಾಲುವೆಗಳು ಹಾದುಹೋಗುವ ಕಡೆ ರೈತರಿಗೆ ಅನುಕೂಲವಾಗುವುದರಿಂದ ಇಂತಿಷ್ಟೇ ಪರಿಹಾರ ಬೇಕು ಎನ್ನುವ ಬೇಡಿಕೆಯಿಲ್ಲವೆಂದು ಶಾಸಕ ಯಶವಂತರಾಯ ಗೌಡ ಪಾಟೀಲರು ಅಭಿಪ್ರಾಯ ತಿಳಿಸಿದ್ದಾರೆ. ಶಿವಾನಂದ ಪಾಟೀಲರು, ಎಂ ಬಿ ಪಾಟೀಲರೂ ಕೂಡ ತಮ್ಮ ಸಲಹೆಗಳನ್ನು ನೀಡಿದ್ದಾರೆ” ಎಂದು ತಿಳಿಸಿದರು.

“ನಾವು ಕೇಂದ್ರದ ಮೇಲೆ ಹಾಕುತ್ತಿರುವ ಒತ್ತಡ ನೋಡಿದರೆ ಯಾವ ಕ್ಷಣದಲ್ಲಿ ಬೇಕಾದರೂ ಅಧಿಸೂಚನೆ ಹೊರಡಿಸಬಹುದು. ನಮ್ಮ ಪಾಲು ನಮಗೆ ಸಿಗಲೇಬೇಕು. ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ ಜಿಲ್ಲೆಯ ಜನರು ಸಹಕಾರ ನೀಡಬೇಕು. ನಾವು ಎಲ್ಲ ಪಕ್ಷದ ಶಾಸಕರ ಜತೆಗೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದೇವೆ” ಎಂದರು.

“ಈ ವಿಚಾರವಾಗಿ ಅಧಿಸೂಚನೆ ಹೊರಡಿಸಬೇಕೆಂದು ಮುಖ್ಯಮಂತ್ರಿಯವರು, ನಾನು ಹಾಗೂ ಸಣ್ಣ ನೀರಾವರಿ ಸಚಿವರು ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದೆವು. ನಾನು ಸುಮಾರು ಐದು ಬಾರಿ ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಿದ್ದೇವೆ. ಪ್ರಧಾನಿಯವರ ಗಮನಕ್ಕೂ ಇದನ್ನು ತರಲಾಗಿತ್ತು. ಎರಡು ಬಾರಿ ಇದರ ಬಗ್ಗೆ ಸಂಬಂಧಪಟ್ಟ ರಾಜ್ಯಗಳ ಸಭೆ ಕರೆಯಲಾಗಿತ್ತು. ಆಂಧ್ರಪ್ರದೇಶದವರು ಒಮ್ಮೆ ಮಹಾರಾಷ್ಟ್ರದವರು ಮತ್ತೊಮ್ಮೆ ಸಭೆಯನ್ನು ಮುಂದಕ್ಕೆ ಹಾಕಿಸಿದರು ಎನ್ನುವ ಮಾಹಿತಿಯಿದೆ” ಎಂದು ಹೇಳಿದರು.

“ಈ ಬಗ್ಗೆ ಮತ್ತೆ ಕೇಂದ್ರ ಜಲಶಕ್ತಿ ಸಚಿವರ ಗಮನ ಸೆಳೆದಾಗ ಅವರು ‘ಗಾಬರಿಯಾಗಬೇಡಿ, ತಾಂತ್ರಿಕ ವಿಚಾರದ ಕಾರಣಕ್ಕೆ ಸಭೆ ಮುಂದಕ್ಕೆ ಹಾಕಲಾಯಿತು. ಮತ್ತೊಮ್ಮೆ ಸಭೆ ಕರೆಯಲಾಗುವುದುʼ ಎಂಬುದಾಗಿ ಆಶ್ವಾಸನೆ ನೀಡಿದ್ದಾರೆ. ಅಣೆಕಟ್ಟು ಎತ್ತರ ಹೆಚ್ಚಳ ಕುರಿತಂತೆ ಯಾವುದೇ ತಕರಾರುಗಳು ಇಲ್ಲವೆಂದು ಮಹಾರಾಷ್ಟ್ರದವರು ಈ ಹಿಂದೆ ತಿಳಿಸಿರುವುದಾಗಿ ಎಂ ಬಿ ಪಾಟೀಲರು ಹೇಳಿದ್ದಾರೆ” ಎಂದರು.

“ರೈತರ ಭೂಮಿ ಸ್ವಾಧೀನಕ್ಕೆ ಒಳಪಡಿಸಿಕೊಳ್ಳುವ ಬಗ್ಗೆ ಅನೇಕ ಸಭೆಗಳನ್ನು ನಡೆಸಲಾಗಿದೆ. ಬಸವರಾಜ ಬೊಮ್ಮಾಯಿಯವರ ಕಾಲದಲ್ಲಿ ಇಂತಿಷ್ಟು ಪರಿಹಾರವೆಂದು ನಿಗದಿ ಮಾಡಲಾಗಿತ್ತು. ಇದರಿಂದ ರೈತರಿಗೆ ಅನುಕೂಲವಾಗುತ್ತಿಲ್ಲವೆಂದು ಅನೇಕ ಜನಪ್ರತಿನಿಧಿಗಳು ಒತ್ತಡ ಹಾಕಿ ಇದನ್ನು ನಿಲ್ಲಿಸಿದ್ದರು. ಇತ್ತೀಚೆಗೆ ಆಲಮಟ್ಟಿ ಭಾಗದ ಜನಪ್ರತಿನಿಧಿಗಳು, ಸಚಿವರು ಹಾಗೂ ರೈತರ ಸಭೆ ನಡೆಸಿ ಅದರ ತೀರ್ಮಾನವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮದ್ದೂರು | ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ಎಂಟು ಜನರಿಗೆ ಗಾಯ

“ಪರಿಹಾರದ ವಿಚಾರವಾಗಿ ಸುಮಾರು 20 ಸಾವಿರ ರೈತರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅನೇಕ ವಕೀಲರು ರೈತರನ್ನು ತಪ್ಪು ದಾರಿಗೆ ಎಳೆಯಲು ಪ್ರಯತ್ನಿಸುತ್ತಿದ್ದಾರೆ. ಇದರಿಂದ ಯಾರಿಗೂ ಕೂಡ ಅನುಕೂಲವಾಗುವುದಿಲ್ಲ ಎನ್ನುವುದನ್ನು ರೈತರು ಅರಿಯಬೇಕು” ಎಂದರು.

“ಅಣೆಕಟ್ಟು ಎತ್ತರ ಹೆಚ್ಚಳ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಿ ನಮ್ಮ ಸರ್ಕಾರ ಬದ್ಧತೆ ಮೆರೆದಿದೆ. ಈ ವರ್ಷ 100 ಟಿಎಂಸಿಗೂ ಹೆಚ್ಚು ನೀರು, ಕೆಲವೊಮ್ಮೆ 400 ಟಿಎಂಸಿಗೂ ಹೆಚ್ಚು ನೀರು ಸಮುದ್ರ ಸೇರಿದ ಉದಾಹರಣೆಯಿದೆ. ವರುಣನ ಕೃಪೆಯಿಂದ ಆಲಮಟ್ಟಿ ಅಣೆಕಟ್ಟು ತುಂಬಿ ಎಲ್ಲರಿಗೂ ಸಂತಸ ಉಂಟುಮಾಡಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...