ವಿಜಯಪುರ | ಆಯುರ್ವೇದ ಮಹಾವಿದ್ಯಾಲಯದ ಭೂಮಿ ಅತಿಕ್ರಮಣ; ಬಿಎಲ್‌ಡಿಇ ಆರೋಪ

Date:

ಆಯುರ್ವೇದ ಮಹಾವಿದ್ಯಾಲಯಕ್ಕೆ ಲೀಸ್ ಆಧಾರದ ಮೇಲೆ ನೀಡಿದ್ದ ಭೂಮಿಯನ್ನು ಅತಿಕ್ರಮಣ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲೆ ಬಿಎಲ್‌ಡಿಇ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್‌ ಸದಸ್ಯ ಸುನಿಲ್‌ ಗೌಡ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ವಿವಿಗೆ ಲೀಸ್ ಆಧಾರದ ಮೇಲೆ 17.20 ಗುಂಟೆ ಜಮೀನನ್ನು ಮಂಜೂರು ಮಾಡಲಾಗಿತ್ತು. ಈ ಜಮೀನಿನಲ್ಲಿ ಅಂದಾಜು 1 ಎಕರೆ 10ಗುಂಟೆ ಜಾಗವನ್ನು ಈಗಾಗಲೇ ಕಾನೂನು ಬಹಿರವಾಗಿ ಅತಿಕ್ರಮಣ ಮಾಡಿಕೊಂಡು ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಬಾಕಿ ಉಳಿದಿರುವ 16.10 ಎಕರೆ ಸರ್ಕಾರಿ ಆಸ್ತಿಯನ್ನು ಕಾಪಾಡಿಕೊಳ್ಳುವುದು ಸಂಸ್ಥೆಯ ಜವಾಬ್ದಾರಿಯಾಗಿದೆ” ಎಂದು ಹೇಳಿದ್ದಾರೆ.

“ಇತ್ತೀಚಿಗೆ ಕೆಲವು ವ್ಯಕ್ತಿಗಳು, ʼಈ ಕೋಟೆ ಗೋಡೆಯಲ್ಲಿ ಚಾಲುಕ್ಯರ ಕಾಲದ ಸ್ವಯಂಭು ದೇವಸ್ಥಾನ ಇದೆ. ಬಿಎಲ್‌ಡಿಇ ಸಂಸ್ಥೆಯವರು ಇಂದು ದೇವಸ್ಥಾನದ ಮೇಲೆ ದಾಳಿ ಮಾಡಿ, ದೇವಸ್ಥಾನದ ಜಾಗವನ್ನು ಅತಿಕ್ರಮಿಸಿ, ಅಕ್ರಮ ಕಟ್ಟಡ ಕಟ್ಟಿ, ಷಡ್ಯಂತ್ರ ಮಾಡಿದ್ದಾರೆʼ ಎನ್ನುವ ರೀತಿಯಲ್ಲಿ ಕೆಲವು ಪೋಸ್ಟುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ. ಆದರೆ ವಾಸ್ತವವಾಗಿ ವಿಜಯಪುರದ ಆದಿಲ್‌ ಶಾಹಿ ಅರಸರ ಕೋಟೆ ಗೋಡೆಗೆ ಹೊಂದಿಕೊಂಡು ಸಿಟಿಎಸ್ ನಂ 605ಎ/1ಎ ಕ್ಷೇತ್ರ 2 ಎಕರೆ 20 ಗುಂಟೆ ಮತ್ತು ಸಿಟಿಎಸ್ ನಂ :605ಎ/1ಎ/1ಎ/2ಕ್ಷೇತ್ರ 15 ಎಕರೆ ಹೀಗೆ ಒಟ್ಟು ಆಸ್ತಿ 17 ಎಕರೆ, 29ಗುಂಟೆ ಪ್ರದೇಶ ಸರ್ಕಾರಿ ಜಾಗವನ್ನು 30 ವರ್ಷಗಳ ಅವಧಿಗೆ ಆಯುರ್ವೇದ ಮಹಾವಿದ್ಯಾಲಯ ಸಮಿತಿಗೆ ಸರ್ಕಾರದಿಂದ ಲೀಜ್ ಕೊಡಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2011ನೇ ವರ್ಷದಲ್ಲಿ ಆಯುರ್ವೇದ ಮಹಾವಿದ್ಯಾಲಯ ಸಮಿತಿ ಬಿಎಲ್‌ಡಿಇ ಸಂಸ್ಥೆಯಲ್ಲಿ ವಿಲೀನಗೊಂಡಿದೆ. ಸಂಸ್ಥೆ ವಿಲೀನದ ನಂತರ ಸರ್ಕಾರದಿಂದ ಮತ್ತೆ 30 ವರ್ಷಗಳ ಕಾಲ ಲೀಸ್ ಮುಂದುವರಿಸಲಾಗಿದೆ. ಸರ್ಕಾರ ಬಿ ಎಲ್ ಡಿ ಇ ಸಂಸ್ಥೆಗೆ ನೀಡಿದ ಆಸ್ತಿಯನ್ನು ಕಾಪಾಡಿಕೊಳ್ಳುವುದು ಸಂಸ್ಥೆಯ ಜವಾಬ್ದಾರಿಯಾಗಿದೆ ಎಂದರು.‌

ಇದನ್ನೂ ಓದಿ: ವಿಜಯಪುರ | ಐತಿಹಾಸಿಕ ಸ್ಮಾರಕಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯ: ವಿಜಯ್ ಕುಮಾರ್

ಐತಿಹಾಸಿಕ ಕೋಟೆ ಗೋಡೆ ಭಾರತ ಸರ್ಕಾರ ವ್ಯಾಪ್ತಿಯ ಪುರಾತತ್ವ ಇಲಾಖೆ ವ್ಯಾಪ್ತಿಗೆ ಬರುತ್ತದೆ. ಅವರ ನಿಯಮಗಳು ಕಠಿಣವಾಗಿವೆ. ಐತಿಹಾಸಿಕ ದಾಖಲೆಗಳು, ಶಾಸನಗಳು ಆಧರಿಸಿ ಈ ದೇವಸ್ಥಾನದ ಖಚಿತತೆ ಕುರಿತು ಪುರಾತತ್ವ ಇಲಾಖೆ ಅಧಿಕಾರಿಗಳಿಗೆ ಕ್ರಮ ಜರುಗಿಸುವಂತೆ ಸಂಸ್ಥೆ ವತಿಯಿಂದಲೇ ಕೋರಿದ್ದೇವೆ. ಅದು ಸತ್ತಾಂಶಗಳಿಂದ ಕೂಡಿದ್ದರೆ ಪ್ರಾಚ್ಯ ವಸ್ತು ಇಲಾಖೆ ಅದನ್ನು ರಕ್ಷಿಸಲಿದೆ. ಇದರಲ್ಲಿ ಸಾರ್ವಜನಿಕರ ಪಾತ್ರ ಇರುವುದಿಲ್ಲ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...