ವಿಜಯಪುರ | ಪಠ್ಯಗಳ ಜತೆಗೆ ಕೌಶಲ್ಯಗಳನ್ನು ಕಲಿಯುವುದರಿಂದ ಉದ್ಯೋಗಾವಕಾಶ ಹೆಚ್ಚು: ಪ್ರೊ.ವಿಜಯಾ ಕೋರಿಶೆಟ್ಟಿ

Date:

ವಿದ್ಯಾರ್ಥಿನಿಯರು ತಮ್ಮ ಪಠ್ಯಗಳ ಜತೆಗೆ ಇತರೆ ಕೌಶಲ್ಯಗಳನ್ನು ಕಲಿತುಕೊಳ್ಳುವ ಮೂಲಕ ಉದ್ಯೋಗಾವಕಾಶಗಳನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಸಲಹೆ ನೀಡಿದರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ ಉನ್ನತ ಶಿಕ್ಷಣ ಮಂಡಳಿ, ಭಾರತ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಕರ್ನಾಟಕ ಸರ್ಕಾರ ಬೆಂಗಳೂರು ಪ್ರಾಯೋಜಕತ್ವದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಕಾಗ್ನಿಟಿವ್ ಟೆಕ್ನಿಕಲ್ ಅಂಡ್ ಮ್ಯಾನೇಜಿರಿಯಲ್ ಸ್ಕಿಲ್ಸ್ ಫಾರ್ ವುಮೆನ್ ಎಂಪವರ್‌ಮೆಂಟ್ ಫ್ರೀ ವಿಕಸಿತ್ ಭಾರತ’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

“ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪದವಿಗಳಿದ್ದರೆ ಸಾಲದು, ಉನ್ನತ ಪದವಿಗಳ ಜತೆಗೆ ಕೌಶಲಗಳನ್ನೂ ಕಲಿತುಕೊಂಡಿದ್ದರೆ ಉದ್ಯೋಗ ದೊರಕಿಸಿಕೊಳ್ಳಲು ಸುಲಭವಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ವಿವಿಧ ಕೌಶಲ್ಯಗಳನ್ನು ಅಳವಡಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೇಗೆ ತಯಾರಿ ನಡೆಸಬೇಕು ಎಂಬ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡರು.

ಮೌಲ್ಯಮಾಪನ ಕುಲಸಚಿವ ಪ್ರೊ. ಬಿ ಎಲ್ ಲಕ್ಕಣ್ಣವರ ಮಹಿಳಾ ಸಬಲೀಕರಣದಲ್ಲಿ ಮಹಿಳಾ ಕೌಶಲ್ಯದ ಮಹತ್ವದ ಕುರಿತು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಇತರ ರಾಜ್ಯಗಳ ಹೇರಿಕೆಯಿಂದ ಕನ್ನಡ ರಕ್ಷಿಸುವುದು ನಮ್ಮ ಕರ್ತವ್ಯ: ಶಾಸಕ ಎಂ. ಆರ್. ಪಾಟೀಲ

ಈ ಕಾರ್ಯಾಗಾರದಲ್ಲಿ ಒಟ್ಟು ಮೂರು ವಿಚಾರ ಗೋಷ್ಟಿಗಳು ನಡೆದವು. ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೊ. ಕೆ ಬಿ ರಂಗಪ್ಪ, ಪ್ರೊ. ಬಸವರಾಜ ಎಸ್ ಬೇಣಿ, ಪ್ರೊ. ಆರ್ ವಿ ಗಂಗಶೆಟ್ಟಿ ಭಾಗವಹಿಸಿದ್ದರು.

ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ಡಿ ಎಂ ಮದರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಯೋಜಕ ಡಾ. ಸುರೇಶ ಕೆ ಪಿ, ಪ್ರೊ. ಜಿ ಬಿ ಸೋನಾರ ಉಪಸ್ಥಿತರಿದ್ದರು.

ಮಾಬುಬಿ ಮುಲ್ಲಾ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಗಳ ಪರಿಚಯವನ್ನು ರೇಣುಕಾ ಮಾಡಿದರು. ಅತಿಥಿ ಉಪನ್ಯಾಸಕಿ ಶೈಲಾ ಪಾಟೀಲ ವಂದಿಸಿದರು. ಅಶ್ವಿನಿ ಎ ಲಾಯದಗುಂದಿ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...