ವಿಜಯಪುರ | ಮೌಢ್ಯ ಬಿಡಿ; ವೈಜ್ಞಾನಿಕವಾಗಿ ಪರಾಮರ್ಶಿಸಿ: ಎಸ್‌ ಕುಮಾರ್

Date:

ವೈಜ್ಞಾನಿಕ ಮತ್ತು ತಂತ್ರಜ್ಞಾನ ಯುಗ ಇಷ್ಟು ಮುಂದುವರೆದರೂ ಮೂಢನಂಬಿಕೆಗಳು ಹಾಗೂ ಅಂಧ ಆಚರಣೆಗಳು ಸಾಕಷ್ಟಿವೆ. ಪ್ರತಿಯೊಬ್ಬ ವ್ಯಕ್ತಿಯ ಜೀವನವು ವಿಜ್ಞಾನಮಯ. ಪ್ರತಿಯೊಂದು ಘಟನೆಯನ್ನೂ ವೈಜ್ಞಾನಿಕ ತಳಹದಿ ಮೇಲೆ ಪರಮರ್ಸಿಸಬೇಕು ಎಂದು ವಿದ್ಯಾವರ್ಧಕ ಸಂಸ್ಥೆ ಸಂಸ್ಥಾಪಕ ಎಸ್ ಕುಮಾರ್ ತಿಳಿಸಿದರು.

ವಿಜಯಪುರ ನಗರದ ಬರಟಗಿ ರಸ್ತೆಯಲ್ಲಿರುವ ಸರಸ್ವತಿ ಆಂಗ್ಲ ಮಾಧ್ಯಮ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಮಹೇಶ್‌ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ʼಮೂಢನಂಬಿಕೆಗಳು ಮತ್ತು ಪವಾಡ ರಹಸ್ಯ ಬಯಲುʼ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಸ್ಥೆ ಅಧ್ಯಕ್ಷೆ ಡಾ. ಎಚ್.ಟಿ. ಲತಾದೇವಿ ಮಾತನಾಡಿ, “ಮಾನವ ಇಂದು ಚಂದ್ರನ ಮೇಲೆ ಕಾಲಿಟ್ಟ, ಮಂಗಳನ ಅಂಗಳಕ್ಕೆ ಲಗ್ಗೆ ಹಾಕಿದ್ದಾನೆ. ಇಂತಹ ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಅನೇಕ ಮೂಢನಂಬಿಕೆಗಳನ್ನು ಪಾಲಿಸಲಾಗುತ್ತಿದೆ. ಎಲ್ಲಿವರೆಗೆ ಮೂಢ್ಯ ಬಿಟ್ಟು ಹೊರಗೆ ಬರಲು ಆಗುವುದಿಲ್ಲವೋ, ಅಲ್ಲಿವರೆಗೆ ವಿಜ್ಞಾನ ಕ್ಷೇತ್ರದಲ್ಲಿ ಮುಂದುವರೆಯಲು ಸಾಧ್ಯವಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತ್ತಳಿಯ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಜಿ.ಎಸ್.ಕಾಂಬಳೆ ಮಾತನಾಡಿ, “ಮೂಢನಂಬಿಕೆ ಮತ್ತು ಕಂದಾಚಾರಗಳು ನಮ್ಮ ಸಮಾಜವನ್ನು ನಿರಂತರವಾಗಿ ಕಾಡುತ್ತಿರುವ ಸಮಸ್ಯೆಗಳಾಗಿವೆ. ಅಕ್ಷರಸ್ಥರು ಮತ್ತು ಅನಕ್ಷರಸ್ಥರು ಈ ಸಮಸ್ಯೆಯ ಸಮಾನ ಬಲುಪಶುಗಳಾಗಿದ್ದಾರೆ. ಪ್ರತಿನಿತ್ಯ ಜರುಗುತ್ತಿರುವ ಘಟನೆಗಳಾದ ನೀರಿನಿಂದ ದೀಪ ಉರಿಸುವುದು, ಕುದಿಯುವ ಎಣ್ಣೆಯಲ್ಲಿ ಕೈ ಅದ್ದುವುದು, ಬೆಂಕಿಯಲ್ಲಿ ನಡೆಯುವುದು, ಮೈಗೆ ಬೆಂಕಿ ಹಚ್ಚಿಕೊಳ್ಳುವುದು ಮುಂತಾದ ಘಟನೆಗಳ ಹಿಂದೆ ವೈಜ್ಞಾನಿಕ ಕಾರಣಗಳು ಬೇರೆಯೇ ಇರುತ್ತವೆ. ಅವುಗಳನ್ನು ಕಂಡುಕೊಳ್ಳಬೇಕಷ್ಟೇ” ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

WhatsApp Image 2025 03 04 at 2.38.34 PM

ಇದನ್ನೂ ಓದಿ: ವಿಜಯಪುರ | ಪಾಳುಬಿದ್ದ ಸಂತೆ ಮಾರುಕಟ್ಟೆ; ಲಕ್ಷಾಂತರ ರೂಪಾಯಿ ವ್ಯರ್ಥ

ಶಾಲೆಯ ವಿಜ್ಞಾನ ಶಿಕ್ಷಕ ರವಿ ಪತಂಗೆ, ವಿದ್ಯಾರ್ಥಿಗಳಿಂದ ವಿವಿಧ ಮಾದರಿಗಳನ್ನು ತಯಾರಿಸಿ ಅವುಗಳ ವೈಜ್ಞಾನಿಕ ಉಪಯೋಗಗಳನ್ನು ತಿಳಿಸಿಕೊಟ್ಟರು. ಈ ವೇಳೆ ಹತ್ತಳಿಯ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಜಿಎಸ್ ಕಾಂಬಳೆ ಅವರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...