ವಿಜಯಪುರ |‌ ಕುರುಬರಿಗೆ ಎಸ್‌ಟಿ ಮೀಸಲಾತಿ ಕಲ್ಪಿಸುವಂತೆ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಆಗ್ರಹ

Date:

ಕುರುಬರಿಗೆ ಎಸ್‌ಟಿ(ಪರಿಶಿಷ್ಟ ಪಂಗಡ) ಮೀಸಲಾತಿಯನ್ನು ಕಲ್ಪಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ನಿಂತು ಎಸ್‌ಟಿ ಮೀಸಲಾತಿ ಕೇಳುವ ಗಟ್ಟಿ ಧ್ವನಿ, ಧೈರ್ಯ ಯಾರಲ್ಲೂ ಇಲ್ಲ. ಬರಿ ಜೈ ಎನ್ನುವುದು, ಶಾಲು, ಹಾರ ಹಾಕಿ ಸನ್ಮಾನಿಸುವುದರಿಂದ ಏನೂ ಪ್ರಯೋಜನವಾಗದು. ಕುರುಬರಿಗೆ ಎಸ್‌ಟಿ ಮೀಸಲಾತಿ ಕೊಡಿ ಎಂದು ಕೇಳುವ ಧೈರ್ಯ ಸಮಾಜದವರಲ್ಲಿ ಬರಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅಭಿಪ್ರಾಯ ವ್ಯಕ್ತಪಡಿಸಿದರು.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಮಾದರಿ ಕಲ್ಯಾಣ ಮಂಟಪದಲ್ಲಿ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲಾ ಕುರುಬ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದರು.

“ನನಗೆ ಸಮಾಜದ ವಿಷಯ ಬಂದಾಗ ಯಾವ ಪಕ್ಷ, ಪಂಗಡ ಸಂಬಂಧವಿಲ್ಲ. ಬಸವರಾಜ ಬೊಮ್ಮಾಯಿ ಸಿಎಂ ಇದ್ದಾಗ ಕುರುಬರಿಗೆ ಎಸ್‌ಟಿ ಮೀಸಲಾತಿ ನೀಡಬೇಕೆಂದು ಕೇಂದ್ರಕ್ಕೆ ಶಿಫಾರಸು ಮಾಡಿದ್ದರು. ಆದರೆ, ಅದನ್ನು ವಾಪಸ್ ಕಳುಹಿಸಿದಾಗ ಮತ್ತೆ ಸಿದ್ದರಾಮಯ್ಯ ಕೇಂದ್ರಕ್ಕೆ ಕಳುಹಿಸಿಕೊಟ್ಟಿದ್ದಾರೆ. ಪ್ರಧಾನಿ ಮೋದಿ ಬಳಿ ಕುರುಬರಿಗೆ ಎಸ್‌ಟಿ ಮೀಸಲಾತಿ ಏಕೆ ಆಗಲಿಲ್ಲವೆಂದು ಸಿದ್ದರಾಮಯ್ಯ ಕೇಳಬೇಕಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಕುರುಬರು, ನಮಗೆ ಯಾವುದೇ ಎಂಪಿ, ಎಂಎಲ್‌ಎ ಆಗುವುದು ಬೇಡ. ಮೊದಲು ಕುರುಬರು ಎಸ್‌ಟಿ ಮೀಸಲು ಅಡಿ ಸೇರ್ಪಡೆಯಾಗಬೇಕು” ಎಂದು ಕೆಪಿಎಸ್‌ಸಿ ಮಾಜಿ ಸದಸ್ಯರೊಬ್ಬರು ಹೇಳಿದರು.

ಮಾಜಿ ಸಂಸದ ಕೆ ವಿರುಪಾಕ್ಷಪ್ಪ ಮಾತನಾಡಿ, “ಕುರುಬರಿಗೆ ಎಸ್‌ಟಿ ಮೀಸಲಾತಿಗಾಗಿ ಜನಾಂದೋಲನ ಮಾಡುವ ಅಗತ್ಯವಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ದೇಶಕ್ಕೆ ಬರಹಗಾರರ ಕೊಡುಗೆ ಅನನ್ಯ

ಸಿದ್ದನ ಕೊಳ್ಳದ ಶಿವಕುಮಾರ ಸ್ವಾಮೀಜಿ, ಸರೂರ ಹಾಲುಮತ ಗುರುಪೀಠದ ಶಾಂತಮಯ ಶ್ರೀ ಸಂಗೊಳ್ಳಿ ರಾಯಣ್ಣ ವೇದಿಕೆ ಸಂಚಾಲಕ ಪರಮೇಶ ಮಾತಿನ್, ಮುಖಂಡ ಮಂಜುನಾಥ ಲಕ್ಕವಳ್ಳಿ, ವಕೀಲ ಎಚ್ ವೈ ಪಾಟೀಲ, ಶಿಲ್ಪ ಕುದರಗೊಂಡ ಮಾತನಾಡಿದರು.

ಮುಖಂಡರಾದ ಎಸ್ ಎಸ್ ಹುಲ್ಲೂರ, ಸಿದ್ದಣ್ಣ ಮೇಟಿ, ನೀಲಮ್ಮ ಮೇಟಿ, ವಕೀಲರಾದ ಪಿಬಿ ಗೌಡರ, ಬಿಜಿ ಜಗ್ಗಲ, ಬಿ ವೈ ಮೇಟಿ, ರೇವತಿ ಬೂದಿಹಾಳ, ಪಂಚಮಸಾಲಿ ಸಮಾಜದ ಕಾಶಿಬಾಯಿ ರಾಂಪುರ, ಜೆಡಿಎಸ್ ಮುಖಂಡ ಬಸನಗೌಡ ಪಾಟೀಲ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...