ಲೋಕಾಯುಕ್ತ ಡಿವೈಎಸ್ಪಿ ಅರುಣ್ ನಾಯಕ್ ಅವರು ಬ್ಯಾಡ್ಮಿಂಟನ್ ಆಡುವ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಅವರು ಜಿಲ್ಲೆಯ ಜಿಲ್ಲಾ ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸುತ್ತಿದ್ದರು.
ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವ ವೇಳೆ ಅರುಣ್ ನಾಯಕ್ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ಡೆತ್ನೋಟ್ನಲ್ಲಿ ಮಾಜಿ ಸಚಿವ ಬಿ.ಸಿ ನಾಗೇಶ್ ಹೆಸರು ಬರೆದು ಎನ್ಪಿಎಸ್ ನೌಕರ ನಾಪತ್ತೆ
ಅರುಣ್ ನಾಯಕ್ ಅವರ ಪತ್ನಿ ಮತ್ತು ಮಗ ಬೆಂಗಳೂರಿನಲ್ಲೇ ವಾಸವಿದ್ದರು. ವಿಚಾರ ತಿಳಿಯುತ್ತಿದ್ದಂತೆ ಪತ್ನಿ ಹಾಗೂ ಪುತ್ರ ವಿಜಯಪುರಕ್ಕೆ ಆಗಮಿಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.




