ವಿಜಯಪುರ | ಮಹದೇವಪ್ಪ ಹರಿಜನ ಹತ್ಯೆ ಪ್ರಕರಣ: ಆರೋಪಿಗಳ ಪತ್ತೆಗೆ ಕಾಲಾವಕಾಶ ಕೇಳಿದ ಎಸ್‌ಪಿ

Date:

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನೆಟ್ಟಿ ಪಿ ಎ ಗ್ರಾಮದ ಮಹಾದೇವಪ್ಪ ಹರಿಜನ(ಪೂಜಾರಿ) ಅವರ ಕೊಲೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಏಳು ದಿನಗಳಿಂದ ನಡೆಯುತ್ತಿದ್ದ ಧರಣಿ ಶನಿವಾರ ಸಂಜೆ ಅಂತ್ಯಗೊಂಡಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸ್ಥಳಕ್ಕೆ ಭೇಟಿ ನೀಡಿ, “ಕೊಲೆ ಪ್ರಕರಣದ ತನಿಖೆ ಸಾಕಷ್ಟು ಪ್ರಗತಿಯಲ್ಲಿದೆ. ಆರೋಪಿಗಳು ಯಾರೇ ಆಗಿರಲಿ ಪತ್ತೆ ಹಚ್ಚುವ ಕಾರ್ಯವನ್ನು ಪೊಲೀಸರು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ. ಹೀಗಾಗಿ ತಾವು ಕಾಲಾವಕಾಶ ನೀಡಬೇಕು” ಎಂದು ಧರಣಿನಿರತ ದಲಿತ ಸಂಘಟನೆಗಳ ಒಕ್ಕೂಟದ ಪ್ರಮುಖರಿಗೆ ಮನವರಿಕೆ ಮಾಡಿಕೊಟ್ಟರು.

“ಯಾವುದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಗಳ ಜತೆಗೆ ಸಾಕ್ಷ್ಯಾಧಾರಗಳು ತುಂಬಾ ಮುಖ್ಯ. ಕೋರ್ಟ್ ಅನುಮತಿ ಪಡೆದು ತನಿಖೆ ಮುಂದುವರೆದಿದೆ. ಅರೇಳು ತಿಂಗಳ ಕಾಲಾವಕಾಶ ಬೇಕಿದ್ದ ಈ ವೈಜ್ಞಾನಿಕ ತನಿಖೆಯನ್ನು ಕೇವಲ ಎರಡೇ ತಿಂಗಳಲ್ಲಿ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರತಿಭಟನೆ ಮಾಡದಿದ್ದರೂ ಪೊಲೀಸ್ ಇಲಾಖೆ ತನ್ನ ತನಿಖಾ ಕಾರ್ಯವನ್ನು ಗಂಭೀರವಾಗಿಯೇ ಮಾಡುತ್ತದೆ. ಹೋದ ವರ್ಷ ಕಲಕೇರಿ ಠಾಣಾ ವ್ಯಾಪ್ತಿಯ ಪ್ರಕರಣ ಕಾಲುವೆಯಲ್ಲಿ ಬರೀ ಎಲುಬು ಹೊಂದಿದ ಅನಾಥ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವರ್ಷದ ನಂತರ ಆರೋಪಿಯನ್ನು ಬಂಧಿಸಲಾಗಿದೆ. ಹೀಗಾಗಿ ಕಾಲಾವಕಾಶ ಕೊಟ್ಟರೆ ಆರೋಪಿಯನ್ನು ಪತ್ತೆ ಹಚ್ಚಲಾಗುವುದು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ ನಗರಸಭೆಯ ಯುಜಿಡಿ ಸಮಸ್ಯೆಗೆ ಪರಿಹಾರ ಹುಡುಕುವತ್ತ ಹೆಜ್ಜೆ: ನಾಗರಾಜ್ ಜೆ

“ಈ ಪ್ರಕರಣ ಇನ್ನುಮುಂದೆ ನನ್ನ ಜವಾಬ್ದಾರಿ. ಎಲ್ಲ ಆಯಾಮಗಳಲ್ಲಿ ಎಫ್‌ಎಸ್ಎಲ್ ವರದಿಯನ್ವಯ ತನಿಖೆ ಮುಂದುವರೆದಿದೆ. ಸಹಕಾರ ಕೊಡಿ ಪ್ರತಿಭಟನೆ ಕೈಬಿಡಿ” ಎಂದು ಕೇಳಿಕೊಂಡರು.

ದಲಿತ ಸಂಘಟನೆಗಳ ಮುಖಂಡರಾದ ರಮೇಶ ಆಸಂಗಿ, ವಿನಾಯಕ ಗುಣಸಾಗರ, ಬಿ ಎಸ್ ತಳವಾರ, ಚಂದ್ರಕಾಂತ ಸಿಂಗೆ, ಪ್ರಕಾಶ ಗುಡಿಮನಿ, ಶರಣು ಸಿಂಧೆ, ರವಿ ಹೋಳಿ, ಶ್ರೀನಿವಾಸ ಓಲೇಕಾರ, ಅಶೋಕ ಚಲವಾದಿ, ಸುಭದ್ರಾ ಮೇಲಿನಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...