ವಿಜಯಪುರ | ವೃಕ್ಷಥಾನ್ ಹೆರಿಟೇಜ್‌ ರನ್‌ ಸಿದ್ಧತೆಗೆ ಮಹಾಂತೇಶ ಬಿರಾದಾರ ಸೂಚನೆ

Date:

ಡಿಸೆಂಬರ್‌ನಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್‌ ರನ್‌ ಈಗಿನಿಂದಲೇ ಸಿದ್ದತೆ ಕೈಗೊಳ್ಳುವಂತೆ ಸಚಿವ ಎಂ ಬಿ ಪಾಟೀಲ ಅವರ ಸಾರ್ವಜನಿಕ ಸಂಪರ್ಕಾಧಿಕಾರಿ ಮಹಾಂತೇಶ ಬಿರಾದಾರ ತಿಳಿಸಿದರು.

ವಿಜಯಪುರ ನಗರದಲ್ಲಿ ನಡೆದ ವೃಕ್ಷಥಾನ್ ಹೆರಿಟೇಜ್ ರನ್ ಕೋರ್ ಕಮಿಟಿ-2025 ಪೂರ್ವ ತಯಾರಿ ಸಭೆಯಲ್ಲಿ ಮಾತನಾಡಿದರು.

“ಕಳೆದ ಬಾರಿ ನಡೆದ ಕಾರ್ಯಕ್ರಮದಲ್ಲಿ ಕಂಡುಬಂದ ಲೋಪದೋಷಗಳನ್ನು ಈ ಬಾರಿ ಸರಿಪಡಿಸಬೇಕು. ನೋಂದಣಿ ಪ್ತಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಈಗಿನಿಂದಲೇ ಪರಿಸರ ಮತ್ತು ಆರೋಗ್ಯ ಜಾಗೃತಿ ಮೂಡಿಸಲು ಕಾರ್ಯೋನ್ಮುಖರಾಗಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಬಾರಿ ಟಿ-ಶರ್ಟ್ ವಿತರಣೆಯನ್ನು ಸುಗಮವಾಗಿ ನಡೆಸಬೇಕು. ಕಾರ್ಯಕ್ರಮಗಳು ಆಕರ್ಷಣೀಯವಾಗಿ ಇರುವಂತೆ ಸಾಂಸ್ಕೃತಿಕ ಸಮಿತಿಯವರು ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮದಲ್ಲಿ ಎಲ್ಲ ಕ್ಷೇತ್ರಗಳ ಜನರು ಮತ್ತು ಯುವಕರು ಪಾಲ್ಗೊಳ್ಳಲು, ರೂಟ್ ಸಮಿತಿ, ರೇಸ್ ಸಮಿತಿ, ಹೈಡೇಷನ್ ಸಮಿತಿ, ಸ್ವಯಂ ಸೇವಕರ ಸಮಿತಿ, ವೇದಿಕೆ ಸಮಿತಿ, ಆಹಾರ ಸಮಿತಿಯವರೂ ಈಗಿನಿಂದಲೇ ಯೋಜನೆ ರೂಪಿಸಬೇಕು” ಎಂದು ತಿಳಿಸಿಸದರು.

ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಅವಘಡದಲ್ಲಿ ಸಾವಿಗೀಡಾದ ಕ್ರಿಕೆಟ್ ಅಭಿಮಾನಿಗಳು ಮತ್ತು ಜೂನ್ 8ರಂದು ನಿಧನರಾದ ಶತಾಯುಷಿ ಸಂಗವ್ವ ಮಲಕಯ್ಯ ಸ್ವಾಮಿ ಗೌರವಾರ್ಥವಾಗಿ ಸಭೆಯ ಪ್ರಾರಂಭದಲ್ಲಿ ಎರಡು ನಿಮಿಷ ಮೌನ ಆಚರಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಅಪೂರ್ಣಗೊಂಡ ಚರಂಡಿ, ರಸ್ತೆ ಕಾಮಗಾರಿಗಳ ಪೂರ್ಣಗೊಳಿಸಲು ಒತ್ತಾಯ

ಶುಭಶ್ರೀ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಶಾಂತೇಶ ಕಳಸಗೊಂಡ, ಕೋರ್ ಕಮಿಟಿ ಮುಖಂಡರಾದ ಡಾ. ಮುರುಗೇಶ ಪಟ್ಟಣಶೆಟ್ಟಿ, ಸಂತೋಷ ಔರಸಂಗ, ಶಂಭು ಕರ್ಪೂರಮಠ, ಸುರೇಶ ಸೊಣಸಗಿ, ಡಾ. ರಾಜು ಯಲಗೊಂಡ, ಅಪ್ಪು ಭೈರಗೊಂಡ, ಡಾ. ಪ್ರವೀಣ ಚೌರ, ಅಶ್ವಾಕ ಮನಗೂಳಿ, ಸಮೀರ ಬಳಗಾರ, ಡಿ ಕೆ ತಾವಸೆ, ಗುರುಶಾಂತ ಕಾಪಸೆ, ಶಿವಾನಂದ ಯರನಾಳ, ವೀಣಾ ದೇಶಪಾಂಡೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...