ವಿಜಯಪುರ | ರಂಜಾನ್‌, ಹೋಳಿ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಿ: ಪೊಲೀಸ್ ಸಿಪಿಐ ಮಹಮ್ಮದ್‌

Date:

ಈ ಬಾರಿ ರಂಜಾನ್, ಹೋಳಿ ಹಬ್ಬದ ವೇಳೆ ಎಲ್ಲರೂ ಕಾನೂನು ವ್ಯವಸ್ಥೆಗೆ ಧಕ್ಕೆ ಬಾರದಂತೆ ನಡೆದುಕೊಂಡು ಶಾಂತಿ ಹಾಗೂ ಸೌಹಾರ್ದತೆಯಿಂದ ಈ ಹಬ್ಬಗಳನ್ನು ಆಚರಿಸಿ ಎಂದು ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕು ಪೊಲೀಸ್ ಸಿಪಿಐ ಮಹಮ್ಮದ್ ಪಸಿಯುದ್ದಿನ್ ಮನವಿ ಮಾಡಿದರು.

ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ರಂಜಾನ್, ಹೋಳಿ ಹಬ್ಬ ಹಾಗೂ ಶರಣ ಜಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಮಾ. 13ರಂದು ಕಾಮದಹನ ಇದ್ದು ಅಂದು ಪ್ರತಿಯೊಬ್ಬರೂ ತಮ್ಮಲ್ಲಿರುವ ಕೆಟ್ಟ ಯೋಚನೆ ಸುಟ್ಟು ಹಾಕಲು ಪ್ರಯತ್ನಿಸಬೇಕು. ಪ್ರತಿಯೊಂದು ಹಬ್ಬದ ಹಿಂದೆ ಶ್ರೇಷ್ಠ ಉದ್ದೇಶವಿದೆ ಅದನ್ನು ತಿಳಿದು ಹಬ್ಬಗಳನ್ನು ಆಚರಿಸಬೇಕು. ಮಾರ್ಚ್ 14 ಮತ್ತು 15ರಂದು ಬಣ್ಣದಾಟ ಇರುವುದರಿಂದ ಯಾರಿಗೂ ತೊಂದರೆ ಆಗದಂತೆ ನೋಡಿಕೊಂಡು ನಿಗದಿತ ಅವಧಿಯಲ್ಲಿ ಬಣ್ಣದಾಟವನ್ನು ಮುಗಿಸಲು ಪ್ರಯತ್ನಿಸಿ. ಹಬ್ಬಗಳು ಶಾಂತರೀತಿಯಿಂದ ನಡೆಯಲು ಇಲಾಖೆ ನಿಮ್ಮೊಂದಿಗೆ ಸಹಕರಿಸಲಿದೆ ನಿಮ್ಮ ಸಹಕಾರವೂ ಅತ್ಯಗತ್ಯ” ಎಂದರು.

ಕೆಪಿಸಿಸಿ ಸದಸ್ಯ ಬಿಎಸ್ ಪಾಟೀಲ ಯಾಳಗಿ ಮಾತನಾಡಿ, “ಈ ಹಿಂದೆ ಪಟ್ಟಣವು ಕೆಲವು ಅಹಿತಕರ ಘಟನೆಗಳನ್ನು ಕಂಡಿದೆ. ಅದರಿಂದ ನಮ್ಮೆಲ್ಲರಿಗೂ ಸಾಕಷ್ಟು ತೊಂದರೆ ಆಗಿದೆ. ಈಗ ಪಟ್ಟಣದಲ್ಲಿ ಸಾಮರಸ್ಯದ ವಾತಾವರಣವಿದೆ, ಅದನ್ನು ಕೆಡದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ ಸಿಂಗಾಜರೆ ಮಾತನಾಡಿ, “ಯುವಕರು ಹಿರಿಯರ ಮಾರ್ಗದರ್ಶನದಲ್ಲಿ ಹಬ್ಬಗಳ ಆಚರಣೆಯನ್ನು ಮಾಡಿದರೆ ಯಾವುದೇ ರೀತಿಯ ಸಮಸ್ಯೆಗಳು ಉದ್ಭವವಾಗುವುದಿಲ್ಲ. ಎಲ್ಲಾ ಜಾತಿ ಧರ್ಮದ ಕಿರಿಯರು ಹಿರಿಯರು ಸೇರಿ ಆಚರಣೆ ಮಾಡೋಣ” ಎಂದು ತಿಳಿಸಿದರು.

ಇದನ್ನೂ ಓದಿ: ವಿಜಯಪುರ | ಸಾಮಾಜಿಕ ಪಿಡುಗುಗಳಿಗೆ ಶಿಕ್ಷಣವೇ ಪರಿಹಾರ

ಈ ವೇಳೆ ಜೈ ಭೀಮ್ ಮುತ್ತಗಿ, ಗೋಪಾಲ ಕಟ್ಟಿಮನಿ, ಸಿದ್ದನಗೌಡ ಪಾಟೀಲ ನಾವದಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಹಬೂಬ್ ಚೋರ್ ಗಸ್ತಿ, ಮದರಕಲ್ಲ, ಕಾಶಿನಾಥ ಮುರಾಳ, ಎಂ ಎಸ್ ಸರ ಶೆಟ್ಟಿ, ಡಿ ವಿ ಪಾಟೀಲ, ಅಣ್ಣಪ್ಪ ಜಗ ತಾಪ, ಶರಣಗೌಡ ಪಾಟೀಲ, ಫಯಾಜ್ ಉತ್ನಳ, ಆಸೀಫ ಕೆಂಭಾವಿ, ಅಬೂಬಕರ್ ಲಾಹೋರಿ, ತಾಳಿಕೋಟಿ ಪಿಎಸ್ಐ ರಾಮನಗೌಡ ಸಂಕನಾಳ, ಆರ್ ಎಸ್ ಭಂಗಿ ಇಲಾಖೆಯ ಸಿಬ್ಬಂದಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...