ವಿಜಯಪುರ | ಋತುಚಕ್ರದ ವೇಳೆ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತಿ ಮುಖ್ಯ: ಡಾ. ಅನುರಾಧಾ ಜೋಶಿ

Date:

ಮಹಿಳೆಯರ ಋತುಚಕ್ರ ಅಥವಾ ಮುಟ್ಟಾಗುವುದು ಒಂದು ನೈಸರ್ಗಿಕ ಪ್ರಕ್ರಿಯೆ, ಪ್ರೌಢಾವಸ್ಥೆಗೆ ಬಂದಾಗ ಪ್ರತಿಯೊಬ್ಬ ಮಹಿಳೆಯೂ ಕೂಡಾ ಈ ಹಂತವನ್ನು ದಾಟಲೇಬೇಕು. ಹಾಗಾಗಿ ಋತುಚಕ್ರದ ಸಂದರ್ಭದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತಿ ಮುಖ್ಯ ಎಂದು ಭಾರತೀಯ ಕುಟುಂಬ ಯೋಜನಾ ಸಂಘದ ವೈದ್ಯಾಧಿಕಾರಿ ಡಾ. ಅನುರಾಧಾ ಜೋಶಿ ಸಲಹೆ ನೀಡಿದರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗ ಹಾಗೂ ಮಮದಾಪುರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ, ಭಾರತ ಸರ್ಕಾರದ ಪ್ರಧಾನಮಂತ್ರಿ ರಾಷ್ಟ್ರೀಯ ಉಚ್ಚತರ ಶಿಕ್ಷಣ ಅಭಿಯಾನ(ಪಿಎಂ-ಉಷಾ) ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಅನುದಾನದ ನೆರವಿನಿಂದ ʼಮಹಿಳೆಯರ ಋತುಚಕ್ರ ಆರೋಗ್ಯʼದ ಕುರಿತು ಮಮದಾಪುರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

“ಮಹಿಳೆಯರು ಮುಟ್ಟಿನ ದಿನಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳದಿದ್ದರೆ ಹಲವಾರು ಬ್ಯಾಕ್ಟೀರಿಯಾ ಉತ್ಪತ್ತಿಯಾಗಿ ಸೋಂಕು ಹರಡುವುದರ ಜತೆಗೆ ಮಾರಣಾಂತಿಕ ಕಾಯಿಲೆಗಳಿಗೆ ಒಳಗಾಗುವ ಸಾಧ್ಯೆತಗಳಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಿಳೆಯರ ಋತುಚಕ್ರದ ಸಂದರ್ಭದಲ್ಲಿ ಮಹಿಳೆಯರ ದೇಹದಲ್ಲಿ ಹಾರ್ಮೋನ್‌ಗಳಲ್ಲಿ ಕಂಡುಬರುವ ಬದಲಾವಣೆಗಳು ಮಹಿಳೆಯರಲ್ಲಿ ಹಲವಾರು ರೀತಿಯ ಮಾನಸಿಕ ಹಾಗೂ ದೈಹಿಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಪ್ರಮುಖವಾಗಿ ಈ ಸಮಯದಲ್ಲಿ ವಿಪರೀತ ಹೊಟ್ಟೆನೋವು, ಕಾಲುಗಳಲ್ಲಿ ಸೆಳೆತ, ಕೆಲವರಲ್ಲಿ ಬೆನ್ನುನೋವು, ವಿಪರೀತ ಸ್ರವಿಕೆಯಂತಹ ದೈಹಿಕ ಸಮಸ್ಯೆಗಳು ಸಾಕಷ್ಟು ತೊಂದರೆಗಳಿಗೆ ಕಾರಣವಾಗುತ್ತವೆ. ಈ ತೊಂದರೆಗಳನ್ನು ಸಮಚಿತ್ತದಿಂದ ನಿಭಾಯಿಸಬೇಕು” ಎಂದು ಅವರು ಕಿವಿಮಾತು ಹೇಳಿದರು.

ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಶಿವಾನಂದ ಹಿರೇಮಠ ಮಾತನಾಡಿ, “ವಿದ್ಯಾರ್ಥಿಗಳು ಮುಟ್ಟಿನ ಆರೋಗ್ಯದ ಬಗ್ಗೆ ಕಾರ್ಯಾಗಾರದಲ್ಲಿ ಅರಿತುಕೊಂಡಿರುವ ಸಂಗತಿಗಳನ್ನು ಸದುಪಯೋಗ ಪಡೆದುಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ ನಗರದಲ್ಲಿ ಫ್ಲೆಕ್ಸ್‌ ವಿಚಾರಕ್ಕೆ ಗಲಾಟೆ; ಯಾವುದೇ ಕಲ್ಲುತೂರಾಟ ನಡೆದಿಲ್ಲ: ಎಸ್‌ಪಿ ಸ್ಪಷ್ಟನೆ

ಕಾರ್ಯಾಗಾರದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಪ್ರೊ. ಜಿ ಬಿ ಸೋನಾರ ಅವರು, ಇಂದಿನ ದಿನಗಳಲ್ಲಿ ಹದಿಹರೆಯದ ವಿದ್ಯಾರ್ಥಿನಿಯರು ಆರೋಗ್ಯದ ಬಗ್ಗೆ ಅರಿವು ಮತ್ತು ಜ್ಞಾನ ಹೊಂದುವುದು ಆಗತ್ಯ ಎಂದರು.

ಕಾರ್ಯಾಗಾರದಲ್ಲಿ, ಡಾ. ಎಸ್ ಎಸ್ ಮೇತ್ರಿ, ಡಾ. ಪ್ರಕಾಶ ಹಡಪದ, ಕು. ರುಕ್ಸಾನ್ ಎಫ್ ಹಾಗೂ ಕಾಲೇಜಿನ ಎಲ್ಲ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...