ವಿಜಯಪುರ | ಎಂಟು ಪ್ರಮುಖ ನಿರ್ಣಯದೊಂದಿಗೆ ‘ಮೇ ಸಾಹಿತ್ಯ ಮೇಳ’ ಸಮಾರೋಪ

Date:

  • ವಿಜಯಪುರ ಜಿಲ್ಲೆಗೆ ಸಂಬಂಧಿಸಿದ ಎಂಟು ನಿರ್ಣಯ ಮಂಡಿಸಿದ ಸಂಘಟಕ ಬಸವರಾಜ ಸೂಳಿಭಾವಿ
  • ದೆಹಲಿಯಲ್ಲಿ ಕುಸ್ತಿಪಟುಗಳ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಸಾಂಕೇತಿಕ ಪ್ರತಿಭಟನೆ

ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಮತ್ತು ಹಿಟ್ನಳ್ಳಿಯಲ್ಲಿ ಆರಂಭಿಸಲಾಗಿರುವ ಬಿ ಟೆಕ್ (ಕೃಷಿ) ಮಹಾವಿದ್ಯಾಲಯ ಮತ್ತು ಆಲಮೇಲಕ್ಕೆ ಮಂಜೂರಾದ ತೋಟಗಾರಿಕೆ ಮಹಾವಿದ್ಯಾಲಯ ಮರು ಆರಂಭ ಸೇರಿದಂತೆ ಎಂಟು ಪ್ರಮುಖ ನಿರ್ಣಯಗಳೊಂದಿಗೆ ವಿಜಯಪುರದಲ್ಲಿ ಎರಡು ದಿನಗಳ ಕಾಲ ನಡೆದ ‘ಮೇ ಸಾಹಿತ್ಯ ಮೇಳ’ವು ಭಾನುವಾರ ಸಂಜೆ ಸಮಾರೋಪಗೊಂಡಿತು.

ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಗದುಗಿನ ಲಡಾಯಿ ಪ್ರಕಾಶನ, ಕವಲಕ್ಕಿಯ ಕವಿ ಪ್ರಕಾಶನ, ಧಾರವಾಡದ ಚಿತ್ತಾರ ಕಲಾ ಬಳಗ ಹಾಗೂ ವಿಜಯಪುರದ ಮೇ ಸಾಹಿತ್ಯ ಮೇಳ ಬಳಗದ ಸಹಯೋಗದಲ್ಲಿ ಮೇ, 27-28ರಂದು ನಡೆದ ಮೇಳದಲ್ಲಿ ಸಂಘಟಕ, ಚಿಂತಕ ಬಸವರಾಜು ಸೂಳಿಭಾವಿ ಈ ಪ್ರಮುಖ ನಿರ್ಣಯಗಳನ್ನು ಮಂಡಿಸಿದರು.

ಅಲ್ಲದೇ, ಈ ನಿರ್ಣಯಗಳನ್ನು ಮುಂದಿನ ದಿನಗಳಲ್ಲಿ ಸರ್ಕಾರದ ಗಮನಕ್ಕೂ ತಂದು ಕಾರ್ಯರೂಪಕ್ಕೆ ತರಲು ಯತ್ನಿಸುವುದಾಗಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರು ಬೆಳೆದ ಬೆಳೆಗಳಿಗೆ ಸೂಕ್ತ, ನ್ಯಾಯಯುತ ಬೆಂಬಲ ಬೆಲೆ ಘೋಷಿಸಬೇಕು. ಸರ್ಕಾರದಿಂದ ಕೋಲ್ಡ್ ಸ್ಟೋರೇಜ್ ಗಳನ್ನು ಸ್ಥಾಪಿಸಬೇಕು. ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಮಂಜೂರಾಗಿರುವ ವಿವಿಧ ಏತನೀರಾವರಿ ಯೋಜನೆಗಳನ್ನು ನಿರ್ದಿಷ್ಟ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಹಾಗೂ ಭೀಮಾ ನದಿಯ ನೀರಿನ ಸಂಪೂರ್ಣ ಸದ್ಬಳಕೆ ಜಿಲ್ಲೆಯ ರೈತರಿಗಾಗಬೇಕು. ಡೋಣಿ ನದಿ ನೀರು ಸಂಪೂರ್ಣ ಸದ್ಬಳಕೆಯಾಗಬೇಕು.

ಜಿಲ್ಲೆಯಿಂದ ಅನೇಕ ಜನ ತಮ್ಮ ಜೀವನೋಪಾಯಕ್ಕಾಗಿ ಪಕ್ಕದ ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶಗಳಿಗೆ ಪ್ರತಿ ವರ್ಷ ಗುಳೇ ಹೋಗುತ್ತಿದ್ದಾರೆ. ಇದನ್ನು ತಪ್ಪಿಸಲು ಅವರ ಜೀವನೋಪಾಯಕ್ಕೆ ನಿರಂತರ ಉದ್ಯೋಗ ಕಲ್ಪಿಸುವ ಸಲುವಾಗಿಯೇ ಕೈಗಾರಿಕೆಗಳನ್ನು ಸ್ಥಾಪಿಸಬೇಕು.

ವಿಜಯಪುರದಲ್ಲಿ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಒಂದು ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು ಹಾಗೂ ಸರ್ಕಾರಿ ಮಹಾವಿದ್ಯಾಲಯಗಳನ್ನು ಪ್ರಾರಂಭಿಸಬೇಕು.

WhatsApp Image 2023 05 29 at 7.28.17 AM1

ಜಿಲ್ಲೆಯಲ್ಲಿ ಬಹಳದೊಡ್ಡ ಸಂಖ್ಯೆಯಲ್ಲಿ ವಸತಿ ರಹಿತ ಕಾರ್ಮಿಕರಿದ್ದು, ಇವರೆಲ್ಲರಿಗೂ ನಿವೇಶನ ಹಂಚುವ ಹಾಗೂ ಮನೆ ಕಟ್ಟಿಸಿಕೊಡುವ ಕೆಲಸವಾಗಬೇಕು.

ಪಡಿತರ ವ್ಯವಸ್ಥೆ ಮೂಲಕ ಐದು ಕೆಜಿ ಅಕ್ಕಿಯ ಜೊತೆಗೇ 5 ಕೆಜಿ ಗೋಧಿ ಅಥವಾ ಐದು ಕೆಜಿ ಬಿಳಿಜೋಳ ಕೊಡುವ ಕೆಲಸವಾಗಬೇಕು ಎಂಬ ನಿರ್ಣಯಗಳನ್ನು ಸೂಳಿಭಾವಿ ಮಂಡಿಸಿದರು.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಒಡಿಶಾ ಎದುರಿಸುತ್ತಿರುವ ಮಾಸಾಶನ ಸಮಸ್ಯೆ ಕರ್ನಾಟಕವನ್ನು ಕಾಡದಿರಲಿ

ಸಮಾರೋಪದ ಅಧ್ಯಕ್ಷತೆಯನ್ನು ಜಾನಪದ ವಿದ್ವಾಂಸ ಕಾಳೇಗೌಡ ನಾಗವಾರ ವಹಿಸಿದ್ದರು. ಪುಣೆಯ ನೀರಜ್ ಜೈನ್ ಸಮಾರೋಪ ನುಡಿಗಳನ್ನಾಡಿದರು.

ಪ್ರಶಸ್ತಿ ಪ್ರದಾನ
ಕಾರ್ಯಕ್ರಮದಲ್ಲಿ ಭಾಗ್ಯಜ್ಯೋತಿ ಹಿರೇಮಠ್ ಅವರಿಗೆ ‘ವಿಭಾ ಸಾಹಿತ್ಯ ಪ್ರಶಸ್ತಿ, ಎನ್ ವೆಂಕಟೇಶ್ ಅವರಿಗೆ ‘ಬಂಡಿ, ನರಸಪ್ಪ ಸಮಾಜಮುಖಿ ಶ್ರಮಜೀವಿ’ ಪ್ರಶಸ್ತಿ, ಮಾಲತಿ ಪಟ್ಟಣಶೆಟ್ಟಿ ಅವರಿಗೆ ಬೃಹನ್ಮಠ ಶಾಂತವೀರಮ್ಮ ಮಹಾತಾಯಿ ಕಥಾ ಪ್ರಶಸ್ತಿ’, ರೈತ ಮುಖಂಡ ಜೆ ಎಂ ವೀರಸಂಗಯ್ಯ ಅವರಿಗೆ ‘ನಿಂಗಪ್ಪ ಸಂತಿ ರೈತಚೇತನ ಪ್ರಶಸ್ತಿ, ರಂಗಕರ್ಮಿ ಸಿ. ಬಸವಲಿಂಗಯ್ಯ ಅವರಿಗೆ ಪಂಚಪ್ಪ ಸಮುದಾಯ ಮಾರ್ಗಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಇದೇ ವೇಳೆ ದೆಹಲಿಯಲ್ಲಿ ಪ್ರತಿಭಟನಾನಿರತ ಕುಸ್ತಿಪಟುಗಳ‌ ಬಂಧನ ಖಂಡಿಸಿ‌ ಹಾಗೂ ಲೈಂಗಿಕ ಕಿರುಕುಳದ ಆರೋಪಿ ಸಂಸದ ಬೃಜ್ ಭೂಷಣ್ ಬಂಧನಕ್ಕೆ ಆಗ್ರಹಿಸಿ, ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...