ವಿಜಯಪುರ | ಮೇ 27ರಿಂದ ‘ಮೇ ಸಾಹಿತ್ಯ ಮೇಳ’: ಹರ್ಷ ಮಂದರ್, ತೀಸ್ತಾ, ಪ್ರಕಾಶ್ ಅಂಬೇಡ್ಕರ್ ಭಾಗಿ

Date:

  • ‘ಭಾರತೀಯ ಪ್ರಜಾತಂತ್ರ – ಸವಾಲು ಮೀರುವ ದಾರಿಗಳು’ ವಿಷಯದ ಕುರಿತು ಚರ್ಚೆ
  • ಎರಡು ದಿನಗಳ ಕಾಲ ನಡೆಯಲಿರುವ 9ನೇ ವರ್ಷದ ಮೇಳದಲ್ಲಿ ಆರು ಗೋಷ್ಠಿ

    ಬಂಡಾಯ ಸಾಹಿತ್ಯದ ನೆಲೆಯಲ್ಲಿ ಕಳೆದ ಒಂಭತ್ತು ವರ್ಷಗಳಿಂದ ನಿರಂತರವಾಗಿ ನಡೆದು ಬರುತ್ತಿರುವ ‘ಮೇ ಸಾಹಿತ್ಯ ಮೇಳ’ವು ಈ ವರ್ಷ ಮೇ 27, 28ರಂದು ವಿಜಯಪುರದ ಕಂದಗಲ ಹನಮಂತರಾಯ ರಂಗಮಂದಿರದಲ್ಲಿ ನಡೆಯಲಿದೆ.

ಈ ಮೇಳದಲ್ಲಿ ‘ಭಾರತೀಯ ಪ್ರಜಾತಂತ್ರ – ಸವಾಲು ಮೀರುವ ದಾರಿಗಳು’ ವಿಷಯದ ಕುರಿತು ಚರ್ಚೆಗಳು ನಡೆಯಲಿವೆ.

ಡಾ. ಬಿ. ಆರ್ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್, ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್, ಹರ್ಷ ಮಂದರ್, ಮುಝಫ್ಫರ್ ಅಸ್ಸಾದಿ, ಹೋರಾಟಗಾರ ಪ್ರಕಾಶ ಹಿಟ್ನಳ್ಳಿ, ನಜ್ಮಾ ಬಾಂಗಿ, ಭೀಮಶಿ ಕಲಾದಗಿ, ಉಮಾ ಕಲಬುರ್ಗಿ, ತುಕಾರಾಂ ಚಂಚಲಕರ, ವಿಹಾನ್ ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟಕರಾದ ಬಸವರಾಜ ಸೂಳಿಭಾವಿ ಮಾಹಿತಿ ನೀಡಿದ್ದಾರೆ

“ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಪಮೌಲ್ಯಗೊಳಿಸುವ, ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ವ್ಯವಸ್ಥಿತ ಸಂಚುಗಳ ವಿರುದ್ಧ ಚಿಂತನೆ ಮಾಡಬೇಕಿದೆ. ಆ ಉದ್ದೇಶದಿಂದ ಈ ಸಾಹಿತ್ಯ ಮೇಳ ಆಯೋಜನೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯ ಚಿಂತಕರ ಜೊತೆಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಚಿಂತಕರು ಈ ಮೇಳದಲ್ಲಿ ಭಾಗಿಯಾಗುತ್ತಿದ್ದು, ಎರಡು ದಿನಗಳ ಮೇಳದಲ್ಲಿ ಒಟ್ಟು ಆರು ಗೋಷ್ಠಿಗಳನ್ನು ಸಂಘಟಿಸಲಾಗುತ್ತಿದೆ.

ಗೋಷ್ಠಿ ಮೂಲಕ ಉದ್ಘಾಟನೆ

ಮೇ 27ರಂದು ಬೆಳಗ್ಗೆ 10ಕ್ಕೆ ಹೋರಾಟದ ಹಾಡುಗಳ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಪ್ರೊ. ರಾಜೇಂದ್ರ ಚೆನ್ನಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಮಧ್ಯಾಹ್ನ 1.30ಕ್ಕೆ ‘ಭಾರತೀಯ ಪ್ರಜಾತಂತ್ರ-ಚಾರಿತ್ರಿಕ ನೋಟ’ ವಿಷಯದ ಕುರಿತು ಗೋಷ್ಠಿ ನಡೆಯಲಿದ್ದು, ಹಿರಿಯ ಸಾಹಿತಿ ಪುರಷೋತ್ತಮ ಬಿಳಿಮಲೆ ಆಶಯ ನುಡಿಗಳನ್ನಾಡಲಿದ್ದಾರೆ. ಎಚ್.ಜಿ. ಜಯಲಕ್ಷ್ಮಿ, ಎ. ನಾರಾಯಣ ವಿಚಾರ ಮಂಡಿಸಲಿದ್ದಾರೆ.

ಅದೇ ದಿನ ಮಧ್ಯಾಹ್ನ 3.30 ಕ್ಕೆ ‘ಪ್ರಜಾತಂತ್ರ ಸಾಗಿದ ದಾರಿ-ಅಸ್ಮಿತೆ ರಾಜಕಾರಣ’ ವಿಷಯವಾಗಿ ಗೋಷ್ಠಿ ನಡೆಯಲಿದ್ದು, ಬಾಲ ಗುರುಮೂರ್ತಿ, ಕೃಷ್ಣಮೂರ್ತಿ ಚಮರಂ, ರಂಗನಾಥ ಕಂಟನಕುಂಟೆ, ಬಿ.ಎಂ. ಹನೀಫ್, ಶೈಲಜಾ ಹಿರೇಮಠ ವಿಚಾರ ವ್ಯಕ್ತಪಡಿಸಲಿದ್ದಾರೆ.

ಸಂಜೆ 6ಕ್ಕೆ ‘ಬೌದ್ಧ, ಸೂಫಿ, ಶರಣ ಪರಂಪರೆಯಲ್ಲಿ ಪ್ರಜಾತಂತ್ರದ ಆಶಯಗಳು’ ಕುರಿತಾದ ಗೋಷ್ಠಿ ನಡೆಯಲಿದೆ. ಮೂಡ್ನಾಕೂಡು ಚಿನ್ನಸ್ವಾಮಿ, ನಟರಾಜ ಬೂದಾಳು ವಿಚಾರ ಮಂಡಿಸಲಿದ್ದಾರೆ.

ಮೇ 28 ರಂದು ‘ಪ್ರಜಾಪ್ರಭುತ್ವ-ಯುವಸ್ಪಂದನ’ ಗೋಷ್ಠಿ ನಡೆಯಲಿದ್ದು, ಯುವ ಚಿಂತಕರಾದ ಸುಭಾಷ ರಾಜಮಾನೆ, ನಿಕೇತ್ ರಾಜ್ ಮೌರ್ಯ, ಕಲ್ಯಾಣಿ ಎಂ. ಎಸ್, ನದೀಂ ಸನದಿ, ಶಿವು ನಾಗರಹೊಳೆ, ಟಿ. ಎಸ್. ಗೊರವರ ಭಾಗಿಯಾಗಲಿದ್ದಾರೆ.

ಕವಿಗೋಷ್ಠಿಯಲ್ಲಿ ತಮಿಳುನಾಡಿನ ಕವಯಿತ್ರಿ ಸುಕೀರ್ತರಾಣಿ ಆಶಯ ಭಾಷಣ ಮಾಡಲಿದ್ದಾರೆ. ಸಬಿತಾ ಬನ್ನಾಡಿ ಅಧ್ಯಕ್ಷತೆ ವಹಿಸಲಿರುವ ಕವಿಗೋಷ್ಠಿಯಲ್ಲಿ 18 ಕವಿಗಳು ಕವನ ವಾಚನ ಮಾಡಲಿದ್ದಾರೆ.

“ಪ್ರಜಾಪ್ರಭುತ್ವದ ಬಿಕ್ಕಟ್ಟುಗಳು-ಎದುರಿಸುವ ಬಗೆ” ಎಂಬ ಗೋಷ್ಠಿಯಲ್ಲಿ ಮಾವಳ್ಳಿ ಶಂಕರ್‌, ಸಿದ್ಧನಗೌಡ ಪಾಟೀಲ, ನೂರ್ ಶ್ರೀಧರ್, ಕೆ. ನೀಲಾ, ಬಡಗಲಪುರ ನಾಗೇಂದ್ರ, ಸಸಿಕಾಂತ್ ಸೆಂಥಿಲ್, ನಂದಕುಮಾರ ಅವರು ಮಾತನಾಡಲಿದ್ದಾರೆ.

ಪ್ರಶಸ್ತಿ ಪ್ರದಾನ

ಸಮಾರೋಪ ಸಮಾರಂಭದಲ್ಲಿ ಭಾಗ್ಯಜ್ಯೋತಿ ಹಿರೇಮಠ ಅವರಿಗೆ `ವಿಭಾ ಸಾಹಿತ್ಯ’ ಪ್ರಶಸ್ತಿ, ಎನ್ ವೆಂಕಟೇಶ ಅವರಿಗೆ ‘ಬಂಡ್ರಿ ನರಸಪ್ಪ ಸಮಾಜವಾದಿ ಶ್ರಮಜೀವಿ’ ಪ್ರಶಸ್ತಿ, ಮಾಲತಿ ಪಟ್ಟಣಶೆಟ್ಟಿ ಅವರಿಗೆ ‘ನವಲಕಲ್ ಶಾಂತವೀರಮ್ಮ ಮಹಾತಾಯಿ’ ಪ್ರಶಸ್ತಿ, ಜೆ. ಎಂ. ವೀರಸಂಗಯ್ಯ ಅವರಿಗೆ ‘ಸಂಶಿ ನಿಂಗಪ್ಪ ರೈತ ಚೇತನ’ ಪ್ರಶಸ್ತಿ, ಸಿ. ಬಸಲಿಂಗಯ್ಯ ಅವರಿಗೆ ‘ಪಂಚಪ್ಪ ಸಮುದಾಯ ಮಾರ್ಗಿ’ ಪ್ರಶಸ್ತಿಯನ್ನು ಪ್ರದಾನ ನಡೆಯಲಿದೆ.

ಸಮಾರೋಪ ಭಾಷಣವನ್ನು ಪುಣೆಯ ನೀರಜ್ ಜೈನ್ ಮಾಡಲಿದ್ದಾರೆ. ಅಧ್ಯಕ್ಷತೆ ಕಾಳೇಗೌಡ ನಾಗವಾರ ವಹಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...