ವಿಜಯಪುರ | ಸುಸ್ಥಿರ ಹೈನುಗಾರಿಕೆಗಾಗಿ ಕ್ಷೀರ ಪೈಲೆಟ್ ಯೋಜನೆ; ಸಚಿವ ಎಂಬಿ ಪಾಟೀಲ್ ಚಾಲನೆ

Date:

ವಿಜಯಪುರ ಜಿಲ್ಲೆಯ ಸುಸ್ಥಿರ ಹೈನುಗಾರಿಕೆಗಾಗಿ ಕ್ಷೀರ ಪೈಲೆಟ್‌ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದ್ದು, ಪೈಲೆಟ್ ಯೋಜನೆಗೆ ಆಯ್ಕೆಯಾಗಿರುವ ರೈತರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್‌ ತಿಳಿಸಿದರು.

ನಗರದಲ್ಲಿ ಬಿಎಲ್‌ಡಿಇ ಸಂಸ್ಥೆ, ಕೃಷಿ ಕಲ್ಪ ಫೌಂಡೇಶನ್ ಹಾಗೂ ಅಕ್ಷಯ ಕಲ್ಪ ಫೌಂಡೇಶನ್ ಸಹಯೋಗದಲ್ಲಿ ಜಿಲ್ಲೆಯಲ್ಲಿ ಸುಸ್ಥಿರ ಹೈನುಗಾರಿಕೆ ಉತ್ತೇಜಿಸಲು ಅನುಷ್ಠಾನಿಸಿರುವ ಕ್ಷೀರ ಪೈಲೆಟ್ ಯೋಜನೆಯಡಿ ಮಕ್ಕಳಿಗೆ ಹಾಲು ಕೊಡಿಸುವ ಮೂಲಕ ವಿನೂತನವಾಗಿ ಚಾಲನೆ ನೀಡಿ ಅವರು ಮಾತನಾಡಿದರು.

“ಪ್ರಶಾಂತ್ ಪ್ರಕಾಶ್ ಅವರು ನವೋದ್ಯಮಿಗಳಿಗೆ ಸ್ಟಾರ್ಟಪ್ ಮೂಲಕ ಉದ್ಯಮ ಪ್ರಾರಂಭಿಸಲು ನೆರವಾಗುತ್ತಿದ್ದಾರೆ. ಅವರು ಈ ಯೋಜನೆಗೆ ಕೈಜೋಡಿಸಿರುವುದು ಸಂತಸ ತಂದಿದೆ. “ಮುಂದಿನ ಐದು ವರ್ಷಗಳಲ್ಲಿ ವಿಜಯಪುರ ಜಿಲ್ಲೆ, ದೇಶದಲ್ಲೇ ಅತಿ ಹೆಚ್ಚು ಹಾಲು ಉತ್ಪಾದನೆಯ ಮೂರು ಜಿಲ್ಲೆಗಳಲ್ಲಿ ಸ್ಥಾನ ಪಡೆಯಲಿದೆ. ಇದು ರೈತಪರ, ಮಹಿಳೆಯ ಪರ, ಯುವಕರ ಪರ ಮತ್ತು ಪಕ್ಷಾತೀತ ಯೋಜನೆಯಾಗಿದೆ. ನಾವು ಕೈಗೊಂಡ ಕೋಟಿ ವೃಕ್ಷ ಅಭಿಯಾನದಂತೆ ಎಲ್ಲರೂ ಇದರಲ್ಲಿ ತೊಡಗಿಕೊಳ್ಳಬೇಕು. ಈ ಕ್ಷಣ ಯೋಜನೆಯಡಿ ಸಣ್ಣದಾಗಿ ಹೈನುಗಾರಿಕೆ ಪ್ರಾರಂಭಿಸಿ ಲೋಪ ದೋಷ ಸರಿಪಡಿಸಿಕೊಂಡು ಹೈನುಗಾರಿಕೆ ವಿಸ್ತರಿಸಲು ರೂಪುರೇಷೆ ಸಿದ್ಧಪಡಿಸಲಾಗಿದೆ. ಯುವಕರು ಕೂಡ ವೃತ್ತಿ ಕೌಶಲ್ಯ ಹೆಚ್ಚಿಸಿಕೊಂಡು ಉದ್ಯಮದಲ್ಲಿ ತೊಡಗಿಸಿಕೊಳ್ಳಲು ಮತ್ತು ಈ ಮೂಲಕ ತೋಟಗಾರಿಕೆ, ಹೈನುಗಾರಿಕೆಗಳನ್ನು ವೈಜ್ಞಾನಿಕವಾಗಿ ಅಳವಡಿಸಿಕೊಂಡು ಉತ್ಪಾದನೆ ಹೆಚ್ಚಿಸಲು ಇದು ನೆರವಾಗಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪದ್ಮಶ್ರೀ ಪುರಸ್ಕೃತ ಮತ್ತು ಬೆಂಗಳೂರಿನ ಕಂಪನಿ ಸಿಇಒ ಪ್ರಶಾಂತ ಪ್ರಕಾಶ್ ಮಾತನಾಡಿ, “ಕಳೆದ 15 ರಿಂದ 20 ವರ್ಷಗಳ ಕಾಲ ನವ ಉದ್ಯಮಗಳಿಗೆ ಉತ್ತೇಜನ ನೀಡಿ ನಗರಾಭಿವೃದ್ಧಿ ಮಾಡುವತ್ತ ಗಮನ ಹರಿಸಿದ್ದೆ. ಸಚಿವ ಎಂಬಿ ಪಾಟೀಲ ಅವರ ಸಹಯೋಗದಲ್ಲಿ ಈಗ ಗ್ರಾಮೀಣ ಭಾಗಗಳಲ್ಲಿಯೂ ಕೈಗಾರಿಕೆಗಳನ್ನು ಪ್ರಾರಂಭಿಸಲು ಉತ್ತೇಜನ ನೀಡುವ ಕೆಲಸಗಳಿಗೆ ಆದ್ಯತೆ ನೀಡಿದ್ದೇನೆ. ವಿಜಯಪುರ ಜಿಲ್ಲೆಯಲ್ಲಿ ಈ ಯೋಜನೆಗೆ ಚಾಲನೆ ನೀಡಲು ಬಿ ಎಲ್ ಡಿ ಇ ಡಿ ಯ ಕುಲಾಧಿಪತಿ ಬಸನಗೌಡ ಪಾಟೀಲ್ ನನ್ನ ಜೊತೆ ಹದಿನೈದು ಸಭೆಗಳನ್ನು ಮಾಡಿದ್ದಾರೆ. ತಂತ್ರಜ್ಞಾನ ಬಳಸಿ ಹಾಲು ಉತ್ಪಾದನೆ ಹೆಚ್ಚಿಸಲು ರೂಪುರೇಷೆ ಸಿದ್ಧಪಡಿಸಿದ್ದಾರೆ. ಜಿಲ್ಲೆಯ ಜನ ಕಾಯಕ ನಿಷ್ಠರಾಗಿದ್ದು, ಮುಂಬರುವ ದಿನಗಳಲ್ಲಿ ಶ್ವೇತ ಕ್ರಾಂತಿಗೂ ಕೊಡುಗೆ ನೀಡಲಿದ್ದಾರೆ” ಎಂದರು.

ಇದನ್ನೂ ಓದಿ: ವಿಜಯಪುರ | ಸಕ್ಕರೆ ದರ ನಿಗದಿಗೆ ವಿಳಂಬ ಬೇಡ: ಡಿಸಿ ಆನಂದ

ಈ ವೇಳೆ ಕೃಷಿ ಕಲ್ಪ ಫೌಂಡೇಶನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಎಂ ಪಾಟೀಲ, ಜಿಲ್ಲಾಧಿಕಾರಿ ಡಾ ಆನಂದ ಕೆ, ವಿಜಯಪುರ ಮತ್ತು ಬಾಗಲಕೋಟೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಈರನಗೌಡ ಕರಿಗೌಡ, ಡಾ. ಮಹಾಂತೇಶ ಬಿರಾದಾರ, ಭಾಗ ವಿಜಯಪುರ ಬಾಗಲಕೋಟೆ ಹಾಲ್ ಉತ್ಪಾದಕರ ಸಂಘದ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ ಸ್ವಾಮಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಭು ರಾಜ ಹಿರೇಮಠ, ಪಶು ಸಂಗೋಪನೆ ಇಲಾಖೆ ಉಪ ನಿರ್ದೇಶಕ ಡಾ. ಅಶೋಕ ಗುಣಸಗಿ ರೈತರೊಂದಿಗೆ ಕ್ಷೀರ ಯೋಜನೆ ಕುರಿತು ಸಂವಾದ ನಡೆಸಿದರು. ಉಪನ್ಯಾಸಕ ಸುಭಾಷ್ ಕಣ್ಣೂರ್ ಮತ್ತು ಕೃಷಿಕಲ್ಪ ಫೌಂಡೇಶನ್ ವೀರಣ್ಣ ರೊಟ್ಟಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...