ವಿಜಯಪುರ | ಶಾಸಕರಿಗೆ ದೆಹಲಿ ಹೋಗುವ ಅಧಿಕಾರವಿದೆ: ಸಚಿವ ಎಂ ಬಿ ಪಾಟೀಲ

Date:

ಶಾಸಕರಿಗೆ ದೆಹಲಿ ಹೋಗುವ ಅಧಿಕಾರವಿದೆ. ಯಾವ ಕಾರಣಕ್ಕೆ ಹೋಗಿದ್ದಾರೆ ಎಂಬುದನ್ನು ಅವರೇ ಹೇಳಬೇಕು ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಮತ್ತು ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದರು.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಂಬಲಿಗ ಶಾಸಕರು ದೆಹಲಿ ಪೆರೇಡ್ ವಿಚಾರದ ಕುರಿತು ವಿಜಯಪುರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಶಾಸಕರು ಸಚಿವರಾಗಲು ದೆಹಲಿಗೆ ಹೋಗಿದ್ದಾಗಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸುಪ್ರೀಂ, ಹೈಕಮಾಂಡ್‌ ನಿರ್ಧಾರಗಳೇ ಅಂತಿಮ. ಹೈಕಮಾಂಡ್ ಕಾಲ ಕಾಲಕ್ಕೆ ಮಾಡುವ ತೀರ್ಮಾನವನ್ನು ಸಿಎಂ, ಡಿಸಿಎಂ ಸಚಿವರು ಪಾಲಿಸಬೇಕು. ನಮ್ಮಲ್ಲಿ ಯಾವುದೇ ನಿರ್ಧಾರ ಮಾಡಿದರೂ ಹೈಕಮಾಂಡ್ ತೀರ್ಪು ಅಂತಿಮ. ಹೈಕಮಾಂಡ್ ಸುಪ್ರೀಂ ಎಂದು ಸಿದ್ದರಾಮಯ್ಯನವರೇ ಹೇಳಿದ್ದಾರೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ ತಲೆಬಾಗಿ ಒಪ್ಪು ರೂಢಿ ನಮ್ಮ ಪಕ್ಷದಲ್ಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅನಿಷ್ಠ ಪದ್ಧತಿಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಬೇಕು: ಡಾ.ಆನಂದ ಕೆ ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದಿರುವ ಸಿಎಂ ಹೇಳಿಕೆ ವಿಚಾರದ ಕುರಿತು ಮಾತನಾಡಿ, “ಸಿಎಂ ಅವರೇ ಹೇಳಿದ ಮೇಲೆ ಮುಗಿತಲ್ಲ. ಸಿಎಂ ಅವರೇ ಹೇಳಿದ್ದಾರಲ್ಲ. ಸಿಎಂ ಆಗಿ ನಾನೇ ಮುಂದುವರೆಯುತ್ತೇನೆ, ಬಜೆಟ್ ಮಂಡಿಸುವೆ ಎಂದಿದ್ದಾರೆ. ಡಿ.ಕೆ ಶಿವಕುಮಾರ್ ಪಕ್ಷದ ಅಧ್ಯಕ್ಷರು. ಮೇಲಿಂದ ಮೇಲೆ ದೆಹಲಿ ಹೋಗಬೇಕಾಗುತ್ತೆ‌, ಬರಬೇಕಾಗುತ್ತೆ. ವ್ಯಾಪಾರಕ್ಕಾಗಿ ಹೋಗಬೇಕಾಗುತ್ತದೆ. ಅವರ ಮೇಲೆ ಅನೇಕ ಕೇಸ್ ಹಾಕಿದ್ದಾರೆ ಅದಕ್ಕೂ ವಕೀಲರ ಬಳಿ ಹೋಗಬೇಕಾಗುತ್ತದೆ. ಪಕ್ಷದ ಅಧ್ಯಕ್ಷರಾಗಿ ದೆಹಲಿಗೆ ಹೋಗೋದು ಬೇಡ ಅಂತೀರಾ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...