ವಿಜಯಪುರ | ಮೋದಿ ದುರಾಡಳಿತ ಕೊನೆಗಾಣಿಸಬೇಕು: ಅಪ್ಪಾಸಾಹೇಬ ಯರನಾಳ

Date:

ಮೋದಿ ಹಿಟ್ಲರ್ ಶಾಹಿ ಆಡಳಿತ ಕೊನೆಗೊಳ್ಳುವ ಸಮಯ ಬಂದಿದೆ, ಮೋದಿ ಈ ಸಲ ಬಹುಮತ ಪಡೆಯುವುದಿಲ್ಲ ಅವರ ದುರಾಡಳಿತ ಕೊನೆಗಾಣಿಸಬೇಕು ಎಂದು ಹಿರಿಯ ಕಮ್ಯುನಿಸ್ಟ್ ನಾಯಕ ಅಪ್ಪಾಸಾಹೇಬ ಯರನಾಳ ಹೇಳಿದರು.

ವಿಜಯಪುರ ಜಿಲ್ಲೆಯ ಸಮೀಪದ ಶಿವಣಗಿ, ಹಡಗಲಿ ಹಾಗೂ ಆಹೇರಿ ಸೇರಿ ಕೆಲವು ತಾಂಡಾಗಳಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರ ಪರ ಮತಯಾಚಿಸಿದರು.

ವಿದ್ಯಾವಂತರಾದ ಆಲಗೂರರನ್ನು ಬೆಂಬಲಿಸಿದರೆ ಜಿಲ್ಲೆಗೆ ಅನುಕೂಲವಾಗಲಿದೆ. ಲೋಕಸಭೆ ಚುನಾವಣೆ ವಾತಾವರಣ ಬದಲಾಗಿದೆ. ಸುಳ್ಳು ಹೇಳಿ, ಭಾವನೆ ಕೆರಳಿಸುವ ಮೂಲಕ ಮೋದಿ ಅಧಿಕಾರ ನಡೆಸಿದ್ದಾರೆ. ಇವರ ಹಿಟ್ಲರ್ ಶಾಹಿ ಆಡಳಿತ ಕೊನೆಗೊಳಿಸಬೇಕು. ಬಡವರು, ಕೂಲಿಕಾರರಿಗೆ ಒಳ್ಳೆಯದಾಗಬೇಕು. ಮೇಲ್ವರ್ಗದ ಜನರ ಸಂಪೂರ್ಣ ಬೆಂಬಲಿವಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾಲಿಕೆ ಸದಸ್ಯ ರಾಜು ಜಾಧವ ಮಾತನಾಡಿ, ಸಂಸದ ಜಿಗಜಿಣಗಿಯವರು ಯಾವೊಂದು ಕೆಲಸ ಮಾಡಿಲ್ಲ. ಬೆಂಗಳೂರಿಗೆ ಒಂದು ಸರಿಯಾದ ರೈಲು ಮಾಡಲಿಲ್ಲ. ನಮ್ಮ ಲಂಬಾಣಿ ಸಮಾಜಕ್ಕೆ ಕನಿಷ್ಠ ಮರ್ಯಾದೆಯೂ ಕೊಡದೆ ನಮ್ಮ ಓಟೇ ಬೇಡ ಎಂದು ಹೇಳಿದ್ದಾರೆ. ಅವರಿಗೆ ಈ ಸಲ ಬುದ್ಧಿ ಕಲಿಸಬೇಕು ಎಂದರು.

ಅಭ್ಯರ್ಥಿ ಪ್ರೊ.ರಾಜು ಆಲಗೂರ ಮಾತನಾಡಿ, ಸಮುದಾಯಗಳ ಬಗ್ಗೆ ಗೌರವವಿಲ್ಲದ ಈಗಿನ ಸಂಸದರಿಂದ ಯಾವುದೇ ಉಪಯೋಗವಿಲ್ಲ. ಕಾಂಗ್ರೆಸ್‌ಗೆ ಮತ ನೀಡಿದರೆ ಅದು ವ್ಯರ್ಥವಾಗುವುದಿಲ್ಲ. ಜಿಲ್ಲೆಯ ಅಭಿವೃದ್ಧಿಗೆ ಯೋಜನೆ ಹಾಕಿಕೊಂಡಿದ್ದೇನೆ. ನಿಮ್ಮ ಸೇವಕನಾಗಿ ದುಡಿದು ವಿಶ್ವಾಸ ಉಳಿಸಿಕೊಳ್ಳುವೆ ಎಂದು ಹೇಳಿದರು.

ಖೀರು ಮಾಸ್ತರ ಅವರು ಮಾತನಾಡಿ, ತಾಂಡಾ ಅಭಿವೃದ್ಧಿಗೆ ಕಾಂಗ್ರೆಸ್ ಶ್ರಮಿಸಿದೆ. ನಮ್ಮ ಹಿತ ಯಾವತ್ತೂ ಕಾಪಾಡಿದೆ. ನಾವು ನಿಮ್ಮ ಜತೆಗಿದ್ದೇವೆ ಎಂದರು.

ರಾಜಶೇಖರ ಅವಜಿ ಪ್ರಸ್ತಾವಿಕ ಮಾತನಾಡಿ, ಈ ಸಲ ಪ್ರಜ್ಞಾವಂತಿಕೆಯಿಂದ ನಾವು ಮತಚಲಾಯಿಸುವ ಸಂದರ್ಭ ಬಂದಿದೆ. ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಪರ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಡವರ ಪರ ರಾಹುಲ್ ಗಾಂಧಿಯವರು ಮಿಡಿದಿದ್ದಾರೆ ಎಂದರು.

ಜಗನು ಮಾಸ್ತರ, ಲಾಲು ಮೊಕದ್ದಮ್, ಪ್ರಫುಲ್ ಮಂಗಣ್ಣವರ, ಯುವರಾಜ ರಾಠೋಡ, ಅರ್ಜುನ್ ರಾಠೋಡ, ಅನಿಲ ಭಾಗು ರಾಠೋಡ ಅನೇಕರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...