ವಿಜಯಪುರ | ಮಕ್ಕಳ ಜತೆಗೆ ಕಾಲುವೆಗೆ ಜಿಗಿದ ತಾಯಿ; ನಾಲ್ವರು ಮಕ್ಕಳ ಸಾವು, ಮಹಿಳೆಯ ರಕ್ಷಣೆ

Date:

ವಿಜಯಪುರ ಜಿಲ್ಲೆಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಗೆ ಮಹಿಳೆಯೊಬ್ಬಳು ತನ್ನ ನಾಲ್ವರು ಮಕ್ಕಳೊಂದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ನಾಲ್ವರು ಮಕ್ಕಳು ಸಾವಿಗೀಡಾಗಿದ್ದಾರೆ. ಮಹಿಳೆಯನ್ನು ಸ್ಥಳೀಯರು ರಕ್ಷಿಸಿ‌ರುವ ಘಟನೆ ಸೋಮವಾರ ನಡೆದಿದೆ.

ಸಾವಿಗೀಡಾದವರನ್ನು ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ತನು ನಿಂಗರಾಜ‌ ಭಜಂತ್ರಿ(5), ರಕ್ಷಾ ನಿಂಗರಾಜ ಭಜಂತ್ರಿ(3) ಹಾಗೂ ಅವಳಿ ಮಕ್ಕಳಾದ ಹಸೇನ ನಿಂಗರಾಜ ಭಜಂತ್ರಿ, ಹುಸೇನ ನಿಂಗರಾಜ ಭಜಂತ್ರಿ(13 ತಿಂಗಳು) ಎಂದು ಗುರುತಿಸಲಾಗಿದೆ.

ಕೌಟುಂಬಿಕ ಕಲಹದಿಂದ ನೊಂದ ಮಹಿಳೆ ಭಾಗ್ಯ ಎಂಬುವವರು ತನ್ನ ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ಬಳಿಕ ತಾನೂ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಮೀನುಗಾರರು ತಾಯಿಯನ್ನು ಕಾಲುವೆಯಿಂದ ಎತ್ತಿ ಬದುಕಿಸಿದ್ದಾರೆ. ಸ್ಥಳದಲ್ಲಿ ಸಂಬಂಧಿಗಳ ರೋಧನೆ ಮುಗಿಲು ಮಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಹಿನ್ನೆಲೆ

ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ಲಿಂಗರಾಜ್ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ. ಈ ಸಾಲವನ್ನು ತೀರಿಸಲು ಆಸ್ತಿ ಮಾರಾಟ ಮಾಡಲು ಚಿಂತನೆ ನಡೆಸಿದ್ದ. ಹೀಗಾಗಿ ತನ್ನ ಪಿತ್ರಾರ್ಜಿತ ಆಸ್ತಿ ಪಾಲು ಕೇಳಿದ್ದ. ಸಾಲ ತೀರಿಸಲು ತಂದೆಯ ಪಿತ್ರಾರ್ಜಿತ ಆಸ್ತಿಯ ಪಾಲು ಕೇಳಿದ್ದ. ಆದೆ, ಆಸ್ತಿಪಾಲಿನ ವಿಚಾರವಾಗಿ ನಿಂಗರಾಜ ಸಹೋದರರು ತಂದೆಯ ಜೊತೆ ಜಗಳವಾಡಿದ್ದಾರೆ. ಇದೇ ವಿಚಾರವಾಗಿ ಕಳೆದ ಹಲವಾರು ದಿನಗಳಿಂದ ಮನೆಯಲ್ಲಿ ಜಗಳ ಆಗಿತ್ತು ಎನ್ನಲಾಗಿದೆ.

ತಂದೆ ತಾಯಿ ಇರುವರೆಗೂ ಆಸ್ತಿಯಲ್ಲಿ ಪಾಲು ನೀಡುವುದಿಲ್ಲವೆಂದು ನಿಂಗರಾಜ ಸಹೋದರರು ಜಗಳ ಮಾಡಿದ್ದರು. ಇದರಿಂದ ನಿಂಗರಾಜ ತೀವ್ರವಾಗಿ ನೊಂದಿದ್ದ. ಈ ಕಾರಣಕ್ಕಾಗಿ ಪತ್ನಿ ಭಾಗ್ಯಶ್ರೀ ಹಾಗೂ ಲಿಂಗರಾಜ ಮಧ್ಯೆ ಜಗಳವಾಗುತ್ತಿತ್ತು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗುಡಿಸಲು ತೆರವುಗೊಳಿಸುವ ಮುನ್ನ ಬಡಜನರಿಗೆ ಪುನರ್ವಸತಿ ಕಲ್ಪಿಸಬೇಕು: ಸಿಪಿಐಎಂಎಲ್

ಬನದ ಹುಣ್ಣಿಮೆ ಇದ್ದ ಕಾರಣ ನಿಂಗರಾಜ, ಹೆಂಡತಿ ಮಕ್ಕಳೊಂದಿಗೆ ನಿಡಗುಂದಿ ತಾಲೂಕಿನ ಎಲ್ಲಮ್ಮನ ಬೂದಿಹಾಳ ಗ್ರಾಮಕ್ಕೆ ಎಲ್ಲಮ್ಮನ ದರ್ಶನಕ್ಕೆ ಕುಟುಂಬ ಸಹಿತ ತೆರಳುತ್ತಿದ್ದ. ದುರದೃಷ್ಟವಶಾತ್​ ಆಲಮಟ್ಟಿ ಎಡದಂಡೆ ಕಾಲುವೆ ಬಳಿ ನಿಂಗರಾಜನ ಬೈಕ್ ಪೆಟ್ರೋಲ್ ಖಾಲಿಯಾಗಿತ್ತು. ಬಳಿಕ ನಿಂಗರಾಜ, ಮಕ್ಕಳು ಹಾಗೂ ಪತ್ನಿಯನ್ನು ಕೆನಾಲ್ ಬಳಿ ನಿಲ್ಲಿಸಿ ಪೆಟ್ರೋಲ್ ತರಲು ಹೋಗಿದ್ದ. ವಾಪಸ್ ಬರುವಷ್ಟರಲ್ಲಿ ಭಾಗ್ಯಶ್ರೀ ತನ್ನ ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು ತಾನೂ ಸಹ ಜಿಗಿದಿದ್ದಳು ಎಂದು ತಿಳಿದುಬಂದಿದೆ.

ಭಾಗ್ಯಶ್ರೀ ಕಾಲುವೆಗೆ ಜಿಗಿದಿದ್ದನ್ನು ಕಂಡ ಮೀನುಗಾರರು, ಆಕೆಯನ್ನು ರಕ್ಷಿಸಿ ನಿಡಗುಂದಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಕಾಲುವೆ ಬಳಿ ಇಬ್ಬರು ಗಂಡು ಮಕ್ಕಳ ಶವಕ್ಕಾಗಿ ಶೋಧಕಾರ್ಯ ಮುಂದುವರೆದಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...