ವಿಜಯಪುರ | ಯತ್ನಾಳ್‌ ಬೆನ್ನಿಗೆ ನಿಂತ ಮೃತ್ಯುಂಜಯ ಸ್ವಾಮೀಜಿ; ಪಂಚಮಸಾಲಿಗರ ವಿರೋಧ

Date:

ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬೆನ್ನಿಗೆ ನಿಂತಿರುವ ಕೂಡಲಸಂಗಮ ಜಯಬಸವ ಮೃತ್ಯುಂಜಯ ಸ್ವಾಮಿಗಳ ವಿರುದ್ಧ ಪಂಚಮಸಾಲಿ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ.

ವಿಜಯಪುರದ ಬಿಜೆಪಿ ಪಂಚಮಸಾಲಿ ಸಮಾಜದ ವಿಜುಗೌಡ ಪಾಟೀಲ, ಸಂಜಯ ಪಾಟೀಲ ಕನಮಡಿ, ಡಾ.ಸುರೇಶ ಬಿರಾದಾರ, ಭೀಮಾಶಂಕರ ಹದನೂರ, ರವಿಕಾಂತ ಬಗಲಿ, ಕಾಸುಗೌಡ ಬಿರಾದಾರ, ಸಂದೀಪ ಪಾಟೀಲ ಮೊದಲಾದವರು ಜಂಟಿ ಪತ್ರಿಕಾಗೋಷ್ಠಿ ನಡೆಸಿ ಶ್ರೀಗಳ ವಿರುದ್ಧ ವಾಗ್ದಾಳಿ ನಡೆಸುವುದರ ಜೊತೆಗೆ ಯತ್ನಾಳರ ವಿರುದ್ಧವೂ ಕಿಡಿ ಕಾರಿದ್ದಾರೆ. ಈ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬೆನ್ನಿಗೆ ನಿಂತಿ್ದ್ದೇವೆ ಎನ್ನುವ ಸಂದೇಶ ರವಾನಿಸಿದ್ದಾರೆ.

ಬಿಜೆಪಿ ಮುಖಂಡ ಸಂಜಯ ಪಾಟೀಲ ಕನಮಡಿ ಮಾತನಾಡಿ, “ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ, ಹಿಂದೂತ್ವವನ್ನೇ ಉಸಿರಾಗಿಸಿಕೊಂಡ ನಾಯಕ. ಆದರೆ ಯತ್ನಾಳರ ಹಿಂದೆ ಇರುವ ಪಂಚಮಸಾಲಿ ಶ್ರೀಗಳು ತಾವು ಹಿಂದೂ ಅಲ್ಲ ಎಂದು ಹೇಳಿಕೊಂಡಿದ್ದಾರೆ. ಹಿಂದೂ ಒಂದೆಡೆ ಇರಲಿ ವೀರಶೈವ ಎಂಬ ಪದವನ್ನೇ ತಮ್ಮ ಪೀಠದ ಮುಂದೆ ಬಳಸಿಕೊಳ್ಳುತ್ತಿಲ್ಲ. ಹಿಂದೂಧರ್ಮದ ಆಚರಣೆಗಳನ್ನು ಸಹ ಖಂಡಿಸಿದ್ದ ಪಂಚಮಸಾಲಿ ಶ್ರೀಗಳು ಹಿಂದೂ ಧರ್ಮವನ್ನು ಒಡೆದು ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿವಹಿಸಿ ಕಾಂಗ್ರೆಸ್ ನಾಯಕರಿಗೆ ಸಾಥ್ ನೀಡಿದ್ದರು. ಈ ಹಿಂದೆ ವಿನಾಕಾರಣ ಕಲ್ಲು ನಾಗರಕ್ಕೆ ಹಾಲೆರೆಯುವುದು ಬೇಡ ಎಂದಿದ್ದ ಶ್ರೀಗಳು, ಈಗ ತಾವು ಬೆಂಬಲ ನೀಡುತ್ತಿರುವ ನಾಯಕರ ಭಾವಚಿತ್ರಕ್ಕೆ ದೊಡ್ಡ ಪ್ರಮಾಣದಲ್ಲಿ ಹಾಲೆರೆಯುವುದನ್ನು ಏಕೆ ನಿಲ್ಲಿಸಲು ಹೋಗಲಿಲ್ಲ” ಎಂದು ಖಾರವಾಗಿ ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಹಕಾರ ಮಹಾಮಂಡಳದ ಚುನಾವಣೆಯಲ್ಲಿ ಸಹಕಾರ ಭಾರತೀಯ ಅಧಿಕೃತ ಅಭ್ಯರ್ಥಿ ನಾನೇ ಇದ್ದೆ. ಎಲ್ಲ ಕಡೆಯಿಂದಲೂ ವ್ಯಾಪಕ ಬೆಂಬಲವೂ ವ್ಯಕ್ತವಾಯಿತು. ಆದರೆ ಯತ್ನಾಳರ ಪುತ್ರ ವ್ಯಾಮೋಹದಿಂದ ನನಗೆ ಸೋಲಾಯಿತು. ಬೆಳಗಾವಿಯ ಕಾಂಗ್ರೆಸ್ ಶಾಸಕರ ಸಹಾಯ ಪಡೆದು ಗೆದ್ದಿದ್ದು ಯತ್ನಾಳರು ಮರೆತಂತಿದೆ. ನಾನು ಪಂಚಮಸಾಲಿ ಸಮಾಜದ ನಾಯಕ. ನಾನು ಚುನಾವಣೆಯಲ್ಲಿ ಸೋತಾಗ ಶ್ರೀಗಳು ಕರೆ ಮಾಡಿ ಅನುಕಂಪ ತೋರುವ ಸೌಜನ್ಯವೂ ತೋರಿಲ್ಲವಲ್ಲ ಎಂಬ ನೋವು ನನಗೆ ಕಾಡುತ್ತಿದೆ” ಎಂದರು.

ಇದನ್ನೂ ಓದಿ: ವಿಜಯಪುರ | ಬೆಳೆ ಹಾನಿ; ವಿಮಾ ಕಂಪನಿ ವಿರುದ್ಧ ರೈತರ ಆಕ್ರೋಶ

ಮುಖಂಡ ಕಾಸುಗೌಡ ಬಿರಾದಾರ ಮಾತನಾಡಿ, “2023ರ ಚುನಾವಣೆಯಲ್ಲಿ ನಾನು ಸ್ಪರ್ಧಿಸಿದಾಗ ಸ್ಟಾರ್ ಪ್ರಚಾರಕರಾಗಿದ್ದ ಯತ್ನಾಳ ಅವರನ್ನು ಕರೆಯಲು ಬಂದಾಗ ಅವರು, “ಇಲ್ಲ ನೀ ಜಿಗಜಿಣಗಿ ಅನುಯಾಯಿ ಎಂದರು. ಯತ್ನಾಳರ ಅನುಯಾಯಿಗಳೆಲ್ಲರೂ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದರು. ಇದೇ ಜಿಲ್ಲೆಯಲ್ಲಿ ಗೆಲ್ಲಿಸಲಾಗದ ನೀ ಸ್ಟಾರ್ ಪ್ರಚಾರಕ ಆಗಿ ಉಪಯೋಗ ಏನು?” ಎಂದು ನುಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...