ವಿಜಯಪುರ | ಮುದ್ದೇಬಿಹಾಳ ತಾಲೂಕು ಕಸಾಪ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಅಶೋಕ್ ಮಣಿ ಆಯ್ಕೆ

Date:

ಫೆ. 15ರಂದು ನಡೆಯಲಿರುವ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ನಾಟಕಕಾರ, ಕವಿ, ಹಿರಿಯ ಸಾಹಿತಿ, ನಿವೃತ್ತ ಮುಖ್ಯೋಪಾಧ್ಯಾಯ ಅಶೋಕ ಪಿ.ಮಣಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಕಸಾಪ ಸಮ್ಮೇಳನ ಕಾರ್ಯಾಲಯದಲ್ಲಿ ಪದಾಧಿಕಾರಿಗಳ ಸಮೇತ ಕಾರ್ಯಕಾರಿಣಿ ಸಭೆ ನಡೆಸಿ,ಮೊದಲು ಮಣಿ ಅವರ ಆಯ್ಕೆಗೆ ಒಪ್ಪಿಗೆ ಪಡೆದು ಅದನ್ನು ಅನುಮೋದಿಸಿ ಅಧಿಕೃತಗೊಳಿಸಲಾಯಿತು.

ವಿದ್ಯಾನಗರದಲ್ಲಿರುವ ಮಾರುತೇಶ್ವರ ದೇವಸ್ಥಾನದ ಬಳಿ ಸೇರಿದ್ದ ಸಾಹಿತಿಗಳು, ಕನ್ನಡಾಭಿಮಾನಿಗಳು,ಕನ್ನಡಮ್ಮನ ಜಯಘೋಷಣೆ ಹಾಕುತ್ತ ಮಣಿ ಅವರ ನಿವಾಸಕ್ಕೆ ಆಗಮಿಸಿ ಅವರಿಗೆ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಸಂದೇಶ ಪತ್ರ ಹಸ್ತಾಂತರಿಸಿ ಸರ್ವಾಧ್ಯಕ್ಷತೆ ಒಪ್ಪಿಕೊಳ್ಳುವಂತೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೂ ಮೊದಲು ಕಸಾಪ ಗೌರವ ಕಾರ್ಯದರ್ಶಿ ಸಿದ್ದನಗೌಡ ಬಿಜ್ಜೂರ ಅವರ ಕಸಾಪ ಸ್ವಾಗತ ಸಮಿತಿಯ ಅನುಮೋದನೆ ಮತ್ತು ಆಯ್ಕೆ ವಿಷಯವನ್ನು ಎಲ್ಲರಿಗೂ ತಿಳಿಸಿ 4-5 ಜನ ಅರ್ಹರನ್ನು ಗುರುತಿಸಲಾಗಿತ್ತು. ಅವರಲ್ಲಿ ಮಣಿ ಅವರನ್ನು ಎಲ್ಲರ ಒಪ್ಪಿಗೆ ಪಡೆದು ಅಧಿಕೃತಗೊಳಿಸಲಾಯಿತು. ಕಸಾಪ ಜಿಲ್ಲಾ ಘಟಕದವರು ಕಸಾಪ ತಾಲೂಕು ಘಟಕದ ತೀರ್ಮಾನವನ್ನು ಎತ್ತಿ ಹಿಡಿದು ತಮ್ಮ ಒಪ್ಪಿಗೆ ಸೂಚಿಸಿದರು. ಮಣಿ ಅವರು 3-4 ಚಲನಚಿತ್ರಗಳಲ್ಲಿ ನಟಿಸಿ ತಮ್ಮ ಕಲಾಪಾಂಡಿತ್ಯವನ್ನೂ ಪ್ರದರ್ಶಿಸಿದ್ದು, ಮಾತ್ರವಲ್ಲದೆ ತಾಲೂಕಿನ ಸಾಹಿತ್ಯಿಕ, ನಾಟಕ ವಲಯದಲ್ಲಿ ವಿಶೇಷ ವ್ಯಕ್ತಿತ್ವ ಹೊಂದಿದವರಾಗಿದ್ದಾರೆ.

ಕಸಾಪ ಗೌರವ ಕಾರ್ಯದರ್ಶಿ ವೈ.ಎಚ್.ವಿಜಯಕರ್, ಹಿರಿಯ ಸಾಹಿತಿ ಪ್ರೊ. ಬಿ.ಎಂ.ಹಿರೇಮಠ ಅವರು ಮಾತನಾಡಿದರು.

ಅಧ್ಯಕ್ಷ ಕಾಮರಾಜ ಬಿರಾದಾರ ಅವರು ಮಾತನಾಡಿ, ಸರ್ವಾಧ್ಯಕ್ಷತೆಗೆ ಅರ್ಹರು, ಸಮರ್ಥರನ್ನೇ ಆಯ್ಕೆ ಮಾಡಿರುವ ಸಂತೃಪ್ತಿ ಇದೆ. ನಾನು ಸಾಹಿತಿ ಅಲ್ಲದಿದ್ದರೂ ಸಂಘಟಕ ಎಂದು ನನ್ನನ್ನು ಈ ಹುದ್ದೆಯಲ್ಲಿ ಕೂಡಿಸಿದ್ದು ಸಮ್ಮೇಳನ ಯಶಸ್ವಿಗೊಳಿಸುವ ನನ್ನ ಜವಾಬ್ಧಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತೇನೆ. ಎಲ್ಲರೂ ಸಹೃದಯವಂತರು, ಸಾಹಿತ್ಯ ಮತ್ತು ಕನ್ನಡ ಪ್ರೇಮಿಗಳು ನನಗೆ ಕೈಜೋಡಿಸಿ ಹೆಗಲಿಗೆ ಹೆಗಲು ಕೊಟ್ಟು ಯಶಸ್ವಿನಲ್ಲಿ ಪಾಲುದಾರರಾಗಬೇಕು ಎಂದರು.

WhatsApp Image 2025 02 07 at 11.57.40 AM

ಅಶೋಕ ಮಣಿ ಅವರು ಕೃತಜ್ಞಾಪೂರ್ವಕ ನುಡಿಗಳನ್ನಾಡುತ್ತ, ತಮ್ಮ ಹಿರಿಯರು ಬಿಟ್ಟು ಹೋದ ಸಾಹಿತ್ಯಿಕ ಚಿಂತನೆಗಳು ತಮ್ಮ ಕಾಲದಲ್ಲಿ ಮುಂದುವರೆದಿದ್ದರ ಸಂಕೇತವಾಗಿ ಈ ಸರ್ವಾಧ್ಯಕ್ಷತೆ ಹುದ್ದೆ ಅರಸಿ ಬಂದಿದೆ. ತನ್ಮೂಲಕ ಸಣ್ಣ ಪ್ರಮಾಣದಲ್ಲಿರುವ ದಿಗಂಬರ ಜೈನ ಸಮಾಜಕ್ಕೆ ಗೌರವ ಕಟ್ಟಿಕೊಟ್ಟಂತಾಗಿದೆ. ಅವಕಾಶ ಕೊಟ್ಟ ಎಲ್ಲರಿಗೂ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸುವುದರ ಜೊತೆಗೆ ಸಮ್ಮೇಳನ ಯಶಸ್ವಿಯಾಗಲು ಕಾಯಾ ವಾಚಾ ಮನಸಾ ಒಪ್ಪಿಗೆ ನೀಡಿ ಗೌರವವನ್ನು ಸ್ವೀಕರಿಸುತ್ತೇನೆ. ನನಗೆ ಸಂದ ಈ ಗೌರವ ಮನೆಯಲ್ಲಿ ಮಹಾಬಳಗಕ್ಕೆ ಮಾತ್ರವಲ್ಲದೆ ಎಲ್ಲ ಸಮಾಜದವರಿಗೂ ಸಂದ ಗೌರವವಾಗಿದೆ ಎಂದರು.

ಇದನ್ನು ಓದಿದ್ದೀರಾ? ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಸುದ್ದಿ ಛಾಯಾಚಿತ್ರ ಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ

ಈ ವೇಳೆ ಹಿರಿಯರಾದ ಎಸ್.ಬಿ.ಕನ್ನೂರ, ಬಸವರಾಜ ನಾಲತವಾಡ, ಅಬ್ದುಲ್‌ ರೆಹಮಾನ ಬಿದರಕುಂದಿ, ಎಸ್.ಎಸ್.ಕರಡ್ಡಿ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುದೇವ ಕಲಬುರ್ಗಿ, ದಿಗಂಬರ ಜೈನ ಸಮಾಜದ ಪ್ರಮುಖರಾದ ಬಾಬು ಗೋಗಿ, ಮಾಣಿಕಚಂದ ದಂಡಾವತಿ, ಅಭಿನಂದನ್ ಜೈನ್, ಕಸಾಪದ ಚಂದ್ರಶೇಖರ ಕಲಾಲ, ರಾಜು ಬಳ್ಳೊಳ್ಳಿ, ಎಸ್.ಎ.ಬೇವಿನಗಿಡದ, ಬಿ.ಎಸ್.ಪಾಟೀಲ ಸರೂರ, ಹುಸೇನ ಮುಲ್ಲಾ ಕಾಳಗಿ, ಸಿದ್ದಣ್ಣ ಹಡಲಗೇರಿ, ಡಾ. ಪ್ರಕಾಶ ನರಗುಂದ, ನೇತಾಜಿ ನಲವಡೆ, ಜಹಾಂಗೀರ ಮುಲ್ಲಾ, ಎಂ.ಎಂ.ಬೆಳಗಲ್ಲ, ಸಂಗಣ್ಣ ಮೇಲಿನಮನಿ, ಅಶೋಕ ವನಹಳ್ಳಿ, ಸರಸ್ವತಿ ಪೀರಾಪೂರ, ಸೇರಿದಂತೆ ಅನೇಕರು ಭಾಗವಹಿಸಿದ್ದರು. ಕಿರುತೆರೆಯ ಹಾಸ್ಯಕಲಾವಿದ ಶ್ರೀಶೈಲ ಹೂಗಾರ ಕಾರ್ಯಕ್ರಮ ನಿರ್ವಹಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...