ಮುದ್ದೇಬಿಹಾಳ | ಶಿಥಿಲಗೊಂಡ ವಾಣಿಜ್ಯ ಕಟ್ಟಡದ ಮಳಿಗೆಗಳು; ನಾಲತವಾಡ ಪ.ಪಂ.ಗೆ ಲಕ್ಷ ಲಕ್ಷ ನಷ್ಟ!

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪ್ರಮುಖ ಮಾರುಕಟ್ಟೆಯಲ್ಲಿನ ಪಟ್ಟಣ ಪಂಚಾಯಿತಿಯ ಆರು ವಾಣಿಜ್ಯ ಮಳಿಗೆಗಳು ಶಿಥಿಲಗೊಂಡು ನಿರುಪಯುಕ್ತವಾಗಿದ್ದು, ಪಪಂಗೆ ಬಾಡಿಗೆ ರೂಪದಲ್ಲಿ ಬರುವ ಆದಾಯ ಕೈಜಾರುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ.

ಹಲವಾರು ವರ್ಷಗಳಿಂದ ಶಿಥಿಲಗೊಂಡು ನರಳುತ್ತಿರುವ ವಾಣಿಜ್ಯ ಮಳಿಗೆಗಳನ್ನು ಇಲ್ಲಿಯವರೆಗೂ ದುರಸ್ತಿಗೊಳಿಸುವ ಮನಸ್ಸು  ಪಪಂ ಮಾಡಿಲ್ಲ. ಈ ಹಿಂದೆ ಪ್ರತಿ ವರ್ಷವೂ ವಾಣಿಜ್ಯ ಮಾಳಿಗೆ ಒಂದಕ್ಕೆ ಹರಾಜಿನಲ್ಲಿ ವರ್ಷಕ್ಕೆ 1.50 ರಿಂದ ಎರಡು ಲಕ್ಷ ರೂಗೆ ನೀಡಲಾಗುತ್ತಿತ್ತು. ಸದ್ಯ 6 ಮಳೆಗಳು ನಿರುಪಯುಕ್ತವಾಗಿದ್ದು, ವಾರ್ಷಿಕ ಬಾಡಿಗೆ ಅಂದಾಜು 10 ಲಕ್ಷ ರೂಪಾಯಿಗಳಷ್ಟು ಆದಾಯ ಕಳೆದುಕೊಳ್ಳುತ್ತಿರುವುದು ವಿಪರ್ಯಾಸವೇ ಸರಿ.

WhatsApp Image 2025 02 14 at 8.11.37 PM 1

ಅಭಿವೃದ್ಧಿಗೆ ಮುಂದಾಗಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯಪುರ ಜಿಲ್ಲೆ ಸೇರಿದಂತೆ ನಾಲತವಾಡ ಪಟ್ಟಣ ತೀವ್ರ ಗತಿಯಲ್ಲಿ ಬೆಳವಣಿಗೆ ಹೊಂದುತ್ತಿದೆ. ಅಲ್ಲದೆ, ರಾಜಸ್ಥಾನ ಮೂಲದ ವ್ಯಾಪಾರಿಗಳು ಮತ್ತು ಸ್ಥಳೀಯವಾಗಿ ಬಟ್ಟೆ, ಕಿರಾಣಿ, ಎಲೆಕ್ಟ್ರಿಕ್ ಸೇರಿದಂತೆ ಹೋಟೆಲ್ ನಡೆಸುವ ವ್ಯಾಪಾರಿಗಳು ಕೂಡ ಹೆಚ್ಚಾಗುತ್ತಿದ್ದಾರೆ. ಆದರೆ, ಪಟ್ಟಣದಲ್ಲಿ ಸ್ಥಳದ ಅಭಾವವಿದೆ. ಹಾಗೆಯೇ ವಾಣಿಜ್ಯ ಮಳಿಗೆಗಳಿಗೂ ಭಾರೀ ಬೇಡಿಕೆ ಇದೆ. ಸದ್ಯ ಮಳಿಗೆಗಳಿಲ್ಲದೆ ಮುಖ್ಯ ಮಾರುಕಟ್ಟೆಯಲ್ಲಿ ಸಿಕ್ಕಸಿಕ್ಕ ಸ್ಥಳಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ವ್ಯಾಪಾರಸ್ಥರು ನಡೆಸುತ್ತಿದ್ದಾರೆ. ಹಣ್ಣಿನ ವ್ಯಾಪಾರಸ್ಥರು, ಹೊಟೇಲ್‌ಗಳು, ಹಡತಿ ಅಂಗಡಿಯವರು ಸಹ ಮಳಿಗೆಗಳಿಗಾಗಿ ಆಸೆಗಣ್ಣಿನಿಂದ ನೋಡುತ್ತಿದ್ದಾರೆ. ವ್ಯಾಪಾರಕ್ಕೆ ಸ್ಥಳದ ಅಭಾವ ತಪ್ಪಿಸುವ ನಿಟ್ಟಿನಲ್ಲಿ ಶಿಥಿಲಗೊಂಡ ವಾಣಿಜ್ಯ ಮಳಿಗೆಗಳಿಗೆ ಪಪಂ ಮರು ಜೀವ ನೀಡಬೇಕಿದೆ.

ಈ ಬಗ್ಗೆ ಈದಿನ ಡಾಟ್‌ ಕಾಮ್ ಜೊತೆಗೆ ಮಾತನಾಡಿದ ನಾಲತವಾಡ ಪಪಂ ಅಧ್ಯಕ್ಷೆ ವಿಜಯಲಕ್ಷ್ಮಿ ಇಲಕಲ್, ‘ಜಿಲ್ಲಾಧಿಕಾರಿಗಳಿಗೆ ಮಳಿಗೆಯನ್ನು ಮರು ನಿರ್ಮಾಣ ಮಾಡುವಂತೆ ಪ್ರಸ್ತಾವನೆ ಕೊಟ್ಟಿದ್ದೇವೆ. ಶಾಸಕ ಸಿ ಎಸ್ ನಾಡಗೌಡ ಅವರು ಅನುದಾನ ಕೊಡುವ ಭರವಸೆ ನೀಡಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

WhatsApp Image 2025 02 14 at 8.11.38 PM

ಹೊಟೇಲ್ ಉದ್ಯಮಿ ಶರಣಪ್ಪ ಮುಂದಿನ ಮನೆ ಮಾತನಾಡಿ, ‘ಹಲವು ವರ್ಷ ಪಟ್ಟಣ ಪಂಚಾಯಿತಿ ವಾಣಿಜ್ಯ ಮಳಿಗೆಗಳಲ್ಲಿ ಉದ್ಯಮ ನಡೆಸಿದ್ದೇನೆ. ಸದ್ಯ ಮಳಿಗೆಗಳು ಶಿಥಿಲಗೊಂಡಿದ್ದರಿಂದ ಹಲವಾರು ಕಡೆ ಹೊಟೇಲ್ ನಡೆಸಿ, ವರ್ಷಕ್ಕೊಮ್ಮೆ ಸ್ಥಳ ಬದಲಿಸುವ ಸ್ಥಿತಿ ಎದುರಾಗಿದೆ. ಪಪಂ ಹಳೆಯ ಮಳಿಗೆಗಳನ್ನು ದುರಸ್ತಿ ಮಾಡಬೇಕು. ಈಗ ಇರುವ 2 ನೂತನ ಮಳಿಗೆಗಳನ್ನು ಹರಾಜು ಮಾಡಿ ಅನುಕೂಲ ಕಲ್ಪಿಸಿಕೊಡಿ’ ಎಂದು ತಮ್ಮ ಅಳಲು ತೋಡಿಕೊಂಡರು.

ರೈತ ಸಂಘಟನೆಯ ಯುವ ನಾಯಕ ಶಿವಾನಂದ ಗೌಂದಿ ಮಾತನಾಡಿ, ‘ಬೀದಿ ಬದಿ ವ್ಯಾಪಾರಸ್ಥರಿಗೆ ಜಾಗದ ಕೊರತೆ ತುಂಬಾ ಇದೆ. ಇದನ್ನು ಮನಗಂಡು ಪಂಚಾಯತಿಯವರು ಕೈ ಚೆಲ್ಲಿ ಕುಂತಿದ್ದಾರೆ. ಇದರ ವಿರುದ್ಧ  ಹಲವು ಬಾರಿ ಬೀದಿಬದಿ ವ್ಯಾಪಾರಸ್ಥರನ್ನು ಕರೆದುಕೊಂಡು ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗೆ ಭೇಟಿ ನೀಡಿದ್ದೇವೆ. ಆದರೆ ಇಲ್ಲಿಯವರೆಗೂ ಯಾವುದೇ ಕೆಲಸವಾಗಿಲ್ಲ’ ಎಂದರು.

ಇದನ್ನು ಓದಿದ್ದೀರಾ? ಕನ್ನಡ ಅಭ್ಯರ್ಥಿಗಳಿಗೆ ಅನ್ಯಾಯ: ಕೆಪಿಎಸ್‌ಸಿ ಫಲಿತಾಂಶ ತಡೆಯುವಂತೆ ಸಿಎಂಗೆ ಸಾಹಿತಿ ಬರಗೂರು ಪತ್ರ

ಈ ವಿಷಯದ ಕುರಿತು ಈ ದಿನ ಪ್ರತಿನಿಧಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗೆ ಕರೆ ಮಾಡಿ ಮಾತನಾಡಿಸಿದಾಗ, ಸಮಸ್ಯೆ ನಮ್ಮ ಗಮನಕ್ಕೆ ಇದೆ. ಶಾಸಕರ ಗಮನಕ್ಕೂ ತಂದಿದ್ದೇವೆ. ಶೀಘ್ರದಲ್ಲೇ ಮಳಿಗೆಗಳನ್ನು ಧ್ವಂಸ ಮಾಡಿ ಹೊಸ ಮಳಿಗೆಗಳನ್ನು ಕಟ್ಟುವ ಪ್ರಕ್ರಿಯೆಯ ಬಗ್ಗೆ ಚರ್ಚೆ ನಡೆಯುತ್ತಿದೆ’ ಎಂದು ಮಾಹಿತಿ ನೀಡಿದರು.

ಇನ್ನಾದರೂ ಪಟ್ಟಣ ಪಂಚಾಯಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಬೀದಿ ಬದಿ ವ್ಯಾಪಾರಸ್ಥರಿಗೆ ಮಳಿಗೆಗಳನ್ನು ಒದಗಿಸುವ ಮತ್ತು ಶಿಥಿಲಗೊಂಡಿರುವ ವಾಣಿಜ್ಯ ಮಳಿಗೆಗೆ ಮುಕ್ತಿ ನೀಡಿ, ಹೊಸ ಕಟ್ಟಡ ಕಟ್ಟಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

WhatsApp Image 2025 02 14 at 8.11.37 PM
WhatsApp Image 2025 02 05 at 18.09.20 1
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...