ವಿಜಯಪುರ | ಮುಲ್ಲಾ ಸಮಾಜವು ಪ್ರತಿಯೊಂದು ಸಮುದಾಯದೊಂದಿಗೆ ಉತ್ತಮ ಒಡನಾಟ ಹೊಂದಬೇಕು: ಶಾಕಿರ್ ಸನದಿ

Date:

ಮುಲ್ಲಾ ಎಂಬದು ಶ್ರೇಷ್ಠ ಪದ. ಸಮಾಜದಲ್ಲಿ ಉನ್ನತ ಗೌರವ ಹೊಂದಿರುವ ಎಂದರ್ಥ. ಮುಲ್ಲಾ ಸಮಾಜವು ಪ್ರತಿಯೊಂದು ಸಮಾಜದೊಂದಿಗೆ ಉತ್ತಮ ಒಡನಾಟ ಹೊಂದುವುದರೊಟ್ಟಿಗೆ ಸಮಾಜದ ಏಳಿಗೆಗೆ ಒಗ್ಗಟ್ಟಾಗಬೇಕು ಎಂದು ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ತಿಳಿಸಿದರು.

ವಿಜಯಪುರ ನಗರದ ಕಂದಗಲ್ ಹನಮಂತರಾಯ ರಂಗಮಂದಿರದಲ್ಲಿ ನಡೆದ ಕರ್ನಾಟಕ ಮುಲ್ಲಾ ಅಸೋಸಿಯೇಷನ್ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಮುಲ್ಲಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಶಾಸಕ ವಿಠ್ಠಲ ಕಟಕದೊಂಡ ದೋಂಡಿಬ ಹಾಗೂ ರಾಜುಗೌಡ ಪಾಟೀಲರು ಅಸೋಸಿಯೇಷನ್ ಲೋಗೋ ಬಿಡುಗಡೆಗೊಳಿಸಿ ಮಾತನಾಡಿ, “ಗ್ರಾಮೀಣ ಭಾಗದ ಮುಲ್ಲಾ ಸಮುದಾಯಕ್ಕೆ ಗೌರವವಿದೆ. ಊರಿನ ಪ್ರತಿಯೊಂದು ಕಾರ್ಯಕ್ರಮಕ್ಕೆ ಈ ಸಮಾಜದವರು ಕೈಜೋಡಿಸುತ್ತಾರೆ. ಮುಲ್ಲಾ ಸಮುದಾಯದ ಪರವಾಗಿ ವಿಧಾನಸಭೆಯಲ್ಲಿ ಧ್ವನಿ ಎತ್ತಲಾಗುವುದು” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧಾರ್ಮಿಕ ಮುಖಂಡ ಮೊಹಮ್ಮದ್ ತನ್ವೀರ್ ಪೀರಾ ಆಸ್ಮಿ ಸಾನಿಧ್ಯ ವಹಿಸಿ ಮಾತನಾಡಿ, “ಮುಲ್ಲಾ ಸಮುದಾಯ ಸಾಮಾಜಿಕ, ಆರ್ಥಿಕ, ರಾಜಕೀಯ ಶಕ್ತಿಯಾಗಿ ಬೆಳೆಯಲು ಪ್ರತಿಯೊಬ್ಬರೂ ಒಗ್ಗಟ್ಟಾಗಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಹಾಸನ | ಜೀತ ಕಾರ್ಮಿಕ ಪ‌ದ್ದತಿ ಆಚರಣೆ ಶಿಕ್ಷಾರ್ಹ ಅಪರಾಧ: ಪಿಡಿಒ ಆರ್‌ ಪ್ರಭಾ

ಗುಳೇದ ಗುಡ್ಡದ ಆಸಿಫ್ ಖಾದ್ರಿ ಸಾಹೇಬ್, ಮನಗೂಳಿಯ ಡಾ. ಫಿರೋಜ ಹುಸೇನ್ ಆಶೀರ್ವವಚನ ನೀಡಿದರು. ಈ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮುಲ್ಲಾ ಬಾಂಧವರನ್ನು ಸನ್ಮಾನಿಸಲಾಯಿತು.

ಮಾಜಿ ಶಾಸಕ ರಾಜು ಆಲಗೂರ, ಎಸ್ ಎಂ ಪಾಟೀಲ ಗಣಿಹಾರ, ಎಂ ಸಿ ಮುಲ್ಲಾ, ಶ್ರೀನಾಥ ಪೂಜಾರಿ, ಮಹಿಬೂಬು ಮುಲ್ಲಾ ಬಳಬಟ್ಟಿ, ಇಮ್ತಿಯಾಜ ಮುಲ್ಲಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...