ವಿಜಯಪುರ | ಗೊಂದಲದಲ್ಲೇ ನಡೆದಿದ್ದ ಪಾಲಿಕೆ ಮೇಯರ್‌ ಚುನಾವಣೆ; ಆ.7ರಂದು ಫಲಿತಾಂಶ

Date:

ವಿಜಯಪುರ ಮಹಾನಗರ ಪಾಲಿಕೆಯ 22ನೇ ಅವಧಿಗೆ ಕಳೆದ ಜನವರಿ, ಫೆಬ್ರವರಿ ತಿಂಗಳಲ್ಲಿ ಜರುಗಿದ ಮೇಯರ್ ಹಾಗೂ ಉಪ ಮೇಯರ್ ಆಯ್ಕೆಯ ಚುನಾವಣಾ ಫಲಿತಾಂಶವನ್ನು ಘೋಷಣೆ ಮಾಡಲು ಪಾಲಿಕೆಯ ಸಭಾಂಗಣದಲ್ಲಿ ಆ.7ರಂದು ಮಧ್ಯಾಹ್ನ 1 ಗಂಟೆಗೆ ಸಭೆ ಆಯೋಜಿಸಲಾಗಿದೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಎಸ್ ಬಿ ಶೆಟ್ಟಣ್ಣವರ ತಿಳಿಸಿದ್ದಾರೆ.

ಕಳೆದ ಜ.27ರಂದು ಮೇಯ‌ರ್ ಹಾಗೂ ಉಪ ಮೇಯರ್ ಚುನಾವಣೆ ನಿಗದಿಯಾಗಿತ್ತು. ಅದರಂತೆ ಆಯ್ಕೆ ಪ್ರಕ್ರಿಯೆ ನಡೆದು ಹಿಂದುಳಿದ ವರ್ಗಕ್ಕೆ ಮೀಸಲಾಗದ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಶೋಕ ನ್ಯಾಮಗೊಂಡ ಹಾಗೂ ಬಿಜೆಪಿಯಿಂದ ಎಂ ಎಸ್ ಕರಡಿ ಅಭ್ಯರ್ಥಿಯಾಗಿದ್ದರು. ಸಾಮಾನ್ಯ ಮಹಿಳೆಗೆ ಮೀಸಲಾದ ಉಪ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ನಿಂದ ವಿಮಲಾ ರಫೀಕ್ ಕಾಣೆ ಹಾಗೂ ಬಿಜೆಪಿಯಿಂದ ಪಕ್ಷೇತರ ಸದಸ್ಯೆ ಸುಮಿತ್ರಾ ರಾಜು ಜಾಧವ ಅಭ್ಯರ್ಥಿಯಾಗಿದ್ದರು. ಆದರೆ, ಉಪ ಮೇಯರ್ ಆಯ್ಕೆ ವೇಳೆ ಗೊಂದಲ, ಗದ್ದಲ ಉಂಟಾಗಿದ್ದರಿಂದ ಉಪ ಮೇಯರ್ ಆಯ್ಕೆ ಪ್ರಕ್ರಿಯೆನ್ನು ಮುಂದೂಡಿದ್ದಾಗಿ ಪ್ರಾದೇಶಿಕ ಆಯುಕ್ತರು ಘೋಷಿಸಿದ್ದರು.

ಉಪ ಮೇಯರ್ ಸ್ಥಾನಕ್ಕೆ ಮುಂದೂಡಿದ್ದ ಚುನಾವಣೆ ಫೆ.12ರಂದು ನಿಗದಿಯಾಗಿ ನಡೆಯಿತು. ಆದರೆ, ಕೆಲ ವಿಚಾರಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ಫಲಿತಾಂಶ ಘೋಷಿಸದಂತೆ ನ್ಯಾಯಾಲಯದ ನಿರ್ದೇಶನ ನೀಡಿತ್ತು. ಕಾಂಗ್ರೆಸ್‌ನ ನಾಲ್ವರು ಪರಿಷತ್ ಸದಸ್ಯರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಿದ್ದನ್ನು ಪ್ರಶ್ನಿಸಿ ಬಿಜೆಪಿ ರಿಟ್ ಅರ್ಜಿ ಸಲ್ಲಿಸಿತ್ತು. ಚುನಾವಣೆ ನಡೆಸಬಹುದು, ಆದರೆ ಮುಂದಿನ ಆದೇಶದವರೆಗೆ ಫಲಿತಾಂಶ ಪ್ರಕಟಿಸದಂತೆ ಕೋರ್ಟ್ ಮಧ್ಯಂತರ ಆದೇಶ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಚ್ಚರಿಯ ಬೆಳವಣಿಗೆಯಲ್ಲಿ ಪಾಲಿಕೆ ಸದಸ್ಯರು ನಿಯಮ ಪ್ರಕಾರ ತಮ್ಮ ಹಾಗೂ ಕುಟುಂಬದ ಆಸ್ತಿ ವಿವರ ಸಲ್ಲಿಸಿಲ್ಲ. ಹೀಗಾಗಿ ಅವರ ಸದಸ್ಯತ್ವ ರದ್ದುಗೊಳಿಸಬೇಕೆಂದು ಕೆಲವರು ನ್ಯಾಯಾಯದ ಮೊರೆ ಹೋಗಿದ್ದರು. ಸದಸ್ಯತ್ವ ರದ್ದುಗೊಳಿಸುವುದು ಸರಕಾರದ ವಿವೇಚನೆಗೆ ಬಿಟ್ಟಿದ್ದು ಎಂದು ಕೋರ್ಟ್ ತೀರ್ಪು ನೀಡಿತ್ತು.‌

ಪಾಲಿಕೆಯ ಆಡಳಿತಕ್ಕಾಗಿ ಕಾಂಗ್ರೆಸ್-ಬಿಜೆಪಿ ನಡುವೆ ರಾಜಕೀಯ ಹಗ್ಗ-ಜಗ್ಗಾಟ, ಪವರ್ ಪಾಲಿಟಿಕ್ಸ್ ಬೆಳವಣಿಗೆಗಳು ನಡೆದು ಕೊನೆಗೆ ಸರಕಾರವೇ ಆಸ್ತಿ ವಿವರ ಸಲ್ಲಿಸದ ಕಾರಣಕ್ಕೆ ಕಾರ್ಪೋರೇಟರ್‌ಗಳ ಸದಸ್ಯತ್ವ ರದ್ದುಗೊಳಿಸಿ ಆದೇಶಿಸಿತ್ತು. ಮೇಯರ್-ಉಪ ಮೇಯರ್ ಚುನಾವಣೆಯ ಫಲಿತಾಂಶವೂ ಪ್ರಕಟಗೊಳ್ಳದೆ, ಚುನಾಯಿತ ಸದಸ್ಯರ ಅಧಿಕಾರವೂ ಇರಲಿಲ್ಲ. ಆಯುಕ್ತರಿಂದಲೇ ಪಾಲಿಕೆ ಕಾರ್ಯಚಟುವಟಿಕೆ ನಡೆದಿದೆ.

ತಮ್ಮ ಸದಸ್ಯತ್ವ ಉಳಿಸಿಕೊಳ್ಳಲು ಚುನಾಯಿತರಾದವರು ರಾಜಕೀಯ ನಾಯಕರ ಮನೆ ಬಾಗಿಲು ಬಡಿದು ಕಸರತ್ತು ನಡೆಸಿದ್ದರು. ಆದರೀಗ ಮೇಯರ್ -ಉಪ ಮೇಯರ್ ಚುನಾವಣೆಯ ಫಲಿತಾಂಶ ಘೋಷಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಆದರೆ, ಚುನಾಯಿತರಾದವರ ಸದಸ್ಯತ್ವದ ಬಗ್ಗೆ ರಾಜಕೀಯ ಕುತೂಹಲ ಕೆರಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...