ವಿಜಯಪುರ | ಮುರುಡೇಶ್ವರ ಪವರ್ ಕಂಪೆನಿಯ ₹75 ಲಕ್ಷಕ್ಕೂ ಅಧಿಕ ತೆರಿಗೆ ಬಾಕಿ; ವಸೂಲಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

Date:

ನಾರಾಯಣಪುರ ಜಲಾಶಯದ ಕೃಷ್ಣಾ ನದಿ ಹಿನ್ನೀರು ಬಳಸಿ, ವಿದ್ಯುತ್ ಉತ್ಪಾದಿಸುವ ಮುರುಡೇಶ್ವರ ಪವರ್ ಕಂಪೆನಿಯು ಬಾಕಿ ಉಳಿಸಿಕೊಂಡಿರುವ ₹75 ಲಕ್ಷಕ್ಕೂ ಹೆಚ್ಚು ತೆರಿಗೆಯನ್ನು ವಸೂಲಿ ಮಾಡಿ, ನಾಗಬನಾಳ ಗ್ರಾಮ ಪಂಚಾಯಿತಿಯ ಅಭಿವೃದ್ಧಿಗೆ ಬಳಸಬೇಕೆ ಎಂದು ಒತ್ತಾಯಿಸಿ ಯುವಜನ ಸೇನೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಪಂಚಾಯತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಪ್ರಾರಂಭಿಸಿದ್ದಾರೆ.

ಯುವಜನ ಸೇನೆ ಅಧ್ಯಕ್ಷ ಶಿವಾನಂದ ವಾಲಿ ಮಾತನಾಡಿ, “24 ವರ್ಷಗಳಲ್ಲಿ ಅಂದಾಜು ₹2ಕೋಟಿಯಿಂದ ₹3ಕೋಟಿಯಷ್ಟು ತೆರಿಗೆ ವಂಚಿಸಲಾಗಿದೆ. 2000ದಿಂದ 2024ರವರೆಗೆ ಕಂಪನಿಯು ವಿದ್ಯುತ್ ಉತ್ಪಾದನೆಯ ವಾಣಿಜ್ಯ ತೆರಿಗೆ ಕಟ್ಟಿಲ್ಲ. ಪಿಡಿಒ ಅವರಿಂದ ಜಿಲ್ಲಾಧಿಕಾರಿವರೆಗೂ ಪತ್ರ ವ್ಯವಹಾರ ನಡೆಸಿದ್ದರೂ ಸ್ಪಂದಿಸುತ್ತಿಲ್ಲ. ಸರ್ಕಾರಕ್ಕೆ ವಂಚಿಸಿ ನಷ್ಟವುಂಟು ಮಾಡಿದ ಕಂಪನಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಖೋಬಾ ಸಿಂಗ್ ಜಾದವ್ ಪ್ರತಿಭಟನಾ ಸ್ಥಳಕ್ಕಾಗಮಿಸಿ ಈವರೆಗೆ ಕೈಗೊಂಡ ಕ್ರಮಗಳ ಮಾಹಿತಿ ನೀಡಿದರು. ತಾಲೂಕು ಪಂಚಾಯಿತಿ ಎನ್ ಎಸ್ ಮುಸಳಿ ಆಗಮಿಸಿ ಬೇಡಿಕೆ ಪರಿಶೀಲಿಸಲು ಕಾಲಾವಕಾಶ ಕೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಕ್ರೋಶಗೊಂಡ ಹೋರಾಟಗಾರರು, “ಈ ಕುರಿತು ಅನೇಕ ಬಾರಿ ಪಿಡಿಒ, ತಾಲೂಕು ಪಂಚಾಯಿತಿಯ ಈ ಹೊಂದಿನ ಇಒ ಗಮನಕ್ಕೂ ತಂದಾಗಿದೆ. ಜಿಲ್ಲಾ ಪಂಚಾಯಿತಿ ಸಿಇಒ, ಜಿಲ್ಲಾಧಿಕಾರಿ ಅಥವಾ ತಹಶೀಲ್ದಾರ್ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ ತೆರಿಗೆ ವಂಚನೆ ಕುರಿತು ಕ್ರಮ ಕೈಗೊಳ್ಳುವದಾಗಿ, ಬಾಕಿ ತೆರಿಗೆ ತುಂಬಿಸಿಕೊಳ್ಳುವುದಾಗಿ ಲಿಖಿತ ಪತ್ರ ನೀಡಿದರೆ ಮಾತ್ರ ಧರಣಿ ಕೈಬಿಡುತ್ತೇವೆ” ಎಂದು ಹೋರಾಟಗಾರರು ಪಟ್ಟುಹಿಡಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 1 ವರ್ಷ ಸಜೆ

ಈ ವೇಳೆ ಸಂಘಟನೆಗಳ ಮುಖಂಡರುಗಳಾದ ಗಿರಿಯಪ್ಪ ತಳವಾರ, ಮಲ್ಲು ಬಿಜ್ಜುರ, ರಾಜು ಮಾಸಬಿನಾಳ, ಸಂಗಯ್ಯ ಸಾರಂಗ ಮಠ, ಶಿವು ಒನಕಿಹಾಳ, ರಫೀಕ್ ತಗ್ಗಿನಮನಿ, ಬಾಬು ತಡ್ಲಿಮನಿ, ಗುರು ತಂಗಡಗಿ, ಶಕೀಲ್ ಅವಟಿ, ರಾಹುಲ್ ಚಲವಾದಿ, ರಮೇಶ ಚಲವಾದಿ, ಶರಣ ಕಂಬಳಿ, ವೀರೇಶ ವಡ್ಡರ, ಸಂಗಮೇಶ ತಳವಾರ, ಶೇಖಪ್ಪ ಚಲವಾದಿ ಮಂಜುನಾಥ ತಿಳಗೂರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...