ನೀಟ್ ಪರೀಕ್ಷೆಯಲ್ಲಿ ನಡೆದಿರುವ ಭ್ರಷ್ಟಾಚಾರ, ಅವ್ಯವಹಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು. ತಪ್ಪಿತಸ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಪ್ರತಿಭಟನೆ ನಡೆಸಿದೆ.
ವಿಜಯಪುರದ ಗಾಂಧಿ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಡಿವಿಪಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆ ಮುಖಂಡ ಅಕ್ಷಯ ಕುಮಾರ, “ದೇಶದಲ್ಲಿರುವ ಶೋಷಿತ ಸಮಾಜದ ಜನರು ತಮ್ಮ ಮಕ್ಕಳ ವಿದ್ಯಾಭ್ಯಸಕ್ಕಾಗಿ ಜೀವನವನ್ನೇ ಮುಡುಪಿಡುತ್ತಿದ್ದಾರೆ. ಶಿಕ್ಷಣದ ವ್ಯಾಪಾರೀಕರಣದ ವ್ಯವಸ್ಥೆಯ ಮಧ್ಯೆಯೂ ತಮ್ಮ ಮಕ್ಕಳು ಒಳ್ಳೆಯ ಶಿಕ್ಷಣ ಪಡೆಯಬೇಕೆಂದು ಕಷ್ಟಪಟ್ಟು ದುಡಿದು, ಶಿಕ್ಷಣ ಸಂಸ್ಥೆಗಳಿಗೆ ಹಣ ಸುರಿಯುತ್ತಿದ್ದಾರೆ. ಆದರೆ, ಇಂತಹ ಅಕ್ರಮಗಳಿಂದ ಅವರ ಶ್ರಮ, ಕನಸುಗಳಿಗೆ ಎಳ್ಳು-ನೀರು ಬಿಟ್ಟಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ನೀಟ್ ಫಲಿತಾಂಶದ ಭ್ರಷ್ಟಾಚಾರದ ಫಾರದರ್ಶಕತೆ ಕುರಿತೂ ದೇಶವ್ಯಾಪ್ತಿ ವಿದ್ಯಾರ್ಥಿಗಳು ಹಾಗೂ ಪಾಲಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ಯುಜಿಸಿ ಪರಿಕ್ಷಾ ಮಾರ್ಗಸೂಚಿ ಅನ್ವಯ ಅಂಕಗಳನ್ನು ನೀಡಿದ್ದಲ್ಲಿ ವಿದ್ಯಾರ್ಥಿಗಳು ಪಡೆಯಬಹುದಾದ ಅಂಕಗಳೊಂದಿಗೆ ಪ್ರಸ್ತುತ ಒಂದಿಷ್ಟು ವಿದ್ಯಾರ್ಥಿಗಳು ಪಡೆದಿರುವ ಅಂಕಗಳು ಹೋಂದಾಣಿಕೆ ಆಗುತ್ತಿಲ್ಲ” ಎಂದು ಆರೋಪಿಸಿದ್ದಾರೆ.
ಕೆಲವು ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕ ನೀಡಿರುಹುದಾಗಿ ಎನ್ಟಿಎ ಸಮಜಾಯಸಿ ನೀಡಿದೆ. ಆದರೆ, ಗ್ರೇಸ್ ಅಂಕ ನೀಡಿರುವ ಮಾನದಂಡವು ಸಂಪುರ್ಣವಾಗಿ ಪಕ್ಷಪಾತಿಯಾಗಿದೆ. ಈ ವರ್ಷ ಪ್ರಕಟಿಸಲಾಗಿದ್ದ ಮಾರ್ಗಸೂಚಿ ಅನ್ವಯ ಹೆಚ್ಚುವರಿ ಅಂಕಗಳನ್ನು ನೀಡಲು ಅವಕಾಶವಿಲ್ಲ” ಎಂದು ಹೇಳಿದ್ದಾರೆ.
ಪ್ರತಿಭಟನೆಯಲ್ಲಿ ದಲಿತ ವಿಧ್ಯಾರ್ಥಿ ಪರಿಷತ್ ಮುಖಂಡ ಮಾದೇಶ, ಯುವರಾಜ್, ಯಾಶಿನ್, ಪ್ರಜ್ವಲ್, ಗೌಡಪ್ಪ ಗೌಡಾ, ಸಂದೇಶ, ಮುಂತಾದ ಸಾವಿರಾರು ವಿಧ್ಯಾರ್ಥಿಗಳು ಭಾಗಿಯಾಗಿದ್ದರು.




