ವಿಜಯಪುರ | ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ʼನಿಮ್ಮೊಂದಿಗೆ ನಾವುʼ ಕಾರ್ಯಕ್ರಮ

Date:

ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಪ್ರೌಢಶಾಲಾ ವಿಭಾಗದ ಮಕ್ಕಳಿಗಾಗಿ ಫೆಬ್ರವರಿ 10ರ ಸೋಮವಾರ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ “ನಿಮ್ಮೊಂದಿಗೆ ನಾವು” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೊಂದು ವಿಶೇಷ ಕಾರ್ಯಕ್ರಮವಾಗಿದ್ದು, 2024/25ನೇ ಸಾಲಿನಲ್ಲಿ ಇದೇ ಪ್ರಥಮ ಬಾರಿಗೆ ಮಕ್ಕಳಿಗಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮವಾಗಿದೆ.

ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯೆ ರಾಜೇಶ್ವರಿ ಮೋಪಗಾರ ಅವರು ಈ ಕುರಿತು ಪತ್ರಿಕೆ ಪ್ರಕಟಣೆ ತಿಳಿಸಿದ್ದು, ಕಲೆಯನ್ನು ಜನಪರವಾಗಿಸಬೇಕು. ಜನರಲ್ಲಿ ಕಲೆಯ ಬಗ್ಗೆ ತಿಳುವಳಿಕೆ ಮೂಡಿಸಬೇಕು. ಕಲಾಭಿಮಾನಿಗಳ ದೊಡ್ಡ ಸಮೂಹ ಸೃಷ್ಟಿಯಾಗಬೇಕೆನ್ನುವುದೇ ನಮ್ಮ ಆಶಯ. ಕಲಾವಿದರ ಚಿತ್ರ ಪ್ರದರ್ಶನವೂ ಇರುತ್ತದೆ. ಕಲಾವಿದರು ರಚಿಸಿದ ಕಲಾಕೃತಿಗಳನ್ನು ನೋಡಿದ ಮಕ್ಕಳ ಮನಸ್ಸಿನ ಆಲೋಚನಾ ಲಹರಿ ವಿಸ್ತಾರವಾಗುವುದಂತೂ ಖಂಡಿತ ಎಂದು ಹೇಳಿದ್ದಾರೆ.

“ಈ ಕಾರ್ಯಕ್ರಮದಲ್ಲಿ ಮತ್ತೊಂದು ವಿಶೇಷವೆಂದರೆ ʼಪ್ರಾತ್ಯಕ್ಷಿಕೆʼ ಮತ್ತು ʼಉಪನ್ಯಾಸʼ ನೀಡಲು ನಮ್ಮ ಕಲಾವಿದರು ಜೊತೆಗಿರುತ್ತಾರೆ. ಚಿತ್ರರಚನೆಯ ಕ್ರಮವನ್ನು ಬಣ್ಣ ಬಳಸುವ ವಿಧಾನವನ್ನು ಮಕ್ಕಳಿಗೆ ತಿಳಿಸಿ ಕೊಡುತ್ತಾರೆ. ಮಕ್ಕಳು ಅವರೊಂದಿಗೆ ಮುಕ್ತವಾಗಿ ಚರ್ಚಿಸಬಹುದು. ʼನಿಮ್ಮೊಂದಿಗೆ ನಾವುʼ ಒಂದು ವಿಶಿಷ್ಟ ಪ್ರಯೋಗವೆಂದರೆ, ಈ ಕಾರ್ಯಕ್ರಮದಲ್ಲಿ, ಕಲಾವಿದರು, ಕಲಾಭಿಮಾನಿಗಳು, ಕಲಾ ವಿದ್ಯಾರ್ಥಿಗಳು, ಕಲಾಪೋಷಕರು ಮಕ್ಕಳನೆಲ್ಲ ಒಟ್ಟಾಗಿ ಸೇರಿಸಿ ʼಕಲಾ ಸಂಭ್ರʼ ವನ್ನು ಆಚರಿಸಬೇಕೆನ್ನುವುದೇ ನಮ್ಮ ಆಸೆ. ಚಿತ್ರಕಲೆಯಲ್ಲಿ ಆಸಕ್ತಿಯುಳ್ಳ ಪ್ರತಿ ಶಾಲೆಗೆ ಐದು ಮಕ್ಕಳಂತೆ ಒಟ್ಟು 50 ಮಂದಿ ಮಕ್ಕಳಿಗಾಗಿ ಶಿಬಿರವನ್ನು ಆಯೋಜಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ರೈತರ ಜಮೀನು ಹೆದ್ದಾರಿ ಪಾಲು; ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಟ

ವಿಜಯಪುರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಬಿ ಕೆ ಶ್ರೀದೇವಿಯವರಿಂದ ಕಾರ್ಯಕ್ರಮದ ಉದ್ಘಾಟನೆ ನೆರವೇರಲಿದೆ. ಬೆಂಗಳೂರಿನ ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪ ಸ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...