ವಿಜಯಪುರ | ಸಕ್ಕರೆ ದರ ನಿಗದಿಗೆ ವಿಳಂಬ ಬೇಡ: ಡಿಸಿ ಆನಂದ

Date:

ವಿಜಯಪುರ ಜಿಲ್ಲೆಯಲ್ಲಿ 10 ಸಕ್ಕರೆ ಕಾರ್ಖಾನೆಗಳಿದ್ದು, ಕೇವಲ ಒಂದು ಕಾರ್ಖಾನೆ ಮಾತ್ರ ದರ ನಿಗದಿಪಡಿಸಿದ್ದು, ಇನ್ನುಳಿದ ಕಾರ್ಖಾನೆಗಳು ಶೀಘ್ರ ದರ ನಿಗದಿಪಡಿಸಿ ಕಾರ್ಯಾರಂಭ ಮಾಡುವಂತೆ ವಿಜಯಪುರ ಜಿಲ್ಲಾಧಿಕಾರಿ ಡಾ. ಕೆ ಆನಂದ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತರೊಂದಿಗೆ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, “ಜಿಲ್ಲೆಯಲ್ಲಿರುವ ಸಕ್ಕರೆ ಕಾರ್ಖಾನೆಗಳು ಎರಡು ದಿನಗಳಲ್ಲಿ ಕಬ್ಬಿನ ಸಾಗಾಣಿಕೆ ಮತ್ತು ಕಟಾವು ದರ ಹೊರತುಪಡಿಸಿ ರೈತರಿಗೆ ಪಾವತಿಸಬೇಕಾಗುವ ದರವನ್ನು ನಿಗದಿಗೊಳಿಸಿ, ಕಬ್ಬು ನುರಿಸುವ ಕಾರ್ಯ ಪ್ರಾರಂಭಿಸಬೇಕು. ರೈತರಿಗೆ ಪಾವತಿಯಾಗಬೇಕಾದ ಈ ಹಿಂದಿನ ಯಾವುದೇ ಬಿಲ್ಲುಗಳನ್ನು ಬಾಕಿ ಉಳಿಸಿಕೊಳ್ಳದೆ ಶೀಘ್ರವಾಗಿ ಇತ್ಯರ್ಥಪಡಿಸಿ ಪಾವತಿಗೆ ಕ್ರಮವಹಿಸಬೇಕು. ಈ ಹಂಗಾಮಿನಲ್ಲಿ ಸರ್ಕಾರದ ಮಾನದಂಡವನ್ನು ಬಳಸಿಕೊಂಡು ತಮ್ಮ ಕಾರ್ಖಾನೆಯ ವತಿಯಿಂದ ಕಬ್ಬುನುರಿಸುವ ಕುರಿತು ಪತ್ರ ನೀಡಿ ಕಾರ್ಖಾನೆಗಳನ್ನು ಆರಂಭಿಸಬೇಕು” ಎಂದು ಸೂಚನೆ ನೀಡಿದರು.

“ರೈತ ಮುಖಂಡರು ತಮ್ಮ ಸಮಸ್ಯೆಗಳ ಕುರಿತು ಜಿಲ್ಲಾಡಳಿತದ ಗಮನಕ್ಕೆ ತಂದಿದ್ದು, ಬಹುತೇಕ ಸ್ಥಳೀಯವಾಗಿರುವ ಸಮಸ್ಯೆ ಪರಿಹರಿಸಲಾಗುವುದು. ವಾಯು ಮಾಲಿನ್ಯ, ನೈರ್ಮಲ್ಯ ಪರಿಶೀಲನೆ ನಡೆಸಿದ ವರದಿ ಸಲ್ಲಿಸಿ, ಸಕ್ಕರೆ ಕಾರ್ಖಾನೆಗಳು ಕೊಳಚೆ ನೀರು ಹರಿ ಬಿಡದಂತೆ ನೋಡಿಕೊಂಡು ಮಾಲಿನ್ಯವಾಗದಂತೆ ನಿಗಾ ವಹಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಕರ್ನಾಟಕ ರಾಜ್ಯೋತ್ಸವ: ಸಚಿವ ಎಂ ಬಿ ಪಾಟೀಲರಿಂದ ಧ್ವಜಾರೋಹಣ

“ರೈತರು ಕಬ್ಬು ಪೂರೈಸಿದ ನಿಗದಿತ ಕಾಲಾವಧಿಯೊಳಗೆ ರೈತರಿಗೆ ಕಬ್ಬಿನ ಬಿಲ್ ಪಾವತಿಯಾಗುವಂತೆ ನೋಡಿಕೊಳ್ಳಬೇಕು. ಸಕ್ಕರೆ ಕಾರ್ಖಾನೆಗಳಲ್ಲಿ ಪ್ರತಿದಿನ ಕಾರ್ಖಾನೆಗೆ ಬರುವ ಕಬ್ಬು ತುಂಬಿದ ವಾಹನಗಳ ಕುರಿತು ಮಾಹಿತಿ ಲಾಗ್ ಬುಕ್ಕಿನಲ್ಲಿ ದಾಖಲಿಸಬೇಕು. ಕಬ್ಬಿನ ಕಾಸ್ಟ್ ಆಫ್ ಕಲ್ಟಿವೇಶನ್ ಲಾಭಾಂಶ ಕುರಿತು 15 ಅಂಶಗಳ ಕಬ್ಬಿಣ ದರ ನಿಗದಿಪಡಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಸಕ್ಕರೆ ಕಾರ್ಖಾನೆಗಳು ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಕಾರ್ಖಾನೆಗಳ ಮಾಲೀಕರು ಒಂದು ನಿಖರತೆಯಿಂದ ದರ ನಿಗದಿಪಡಿಸಿ ಘೋಷಿಸಿ ಕಾರ್ಖಾನೆ ಆರಂಭಿಸಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...