ವಿಜಯಪುರ | ಅಂಬೇಡ್ಕರ್ ಅವರನ್ನು ಎಷ್ಟೇ ಜಪ ಮಾಡಿದರು ಸಾಲದು: ಮಲ್ಲಿಕಾರ್ಜುನ್ ಲೋಣಿ

Date:

ಅಂಬೇಡ್ಕರ್ ಅವರು ಕೇವಲ ಒಂದು ಜಾತಿ ಜನಾಂಗ ಮತ್ತು ಧರ್ಮಕ್ಕೆ ಸೀಮಿತವಾದವರಲ್ಲ. ಅವರು ಈ ದೇಶದ ಪ್ರತಿಯೊಬ್ಬರ ಪಾಲಿಗೆ ದೇವರ ಸಮಾನರಾಗಿದ್ದಾರೆ. ಅಂತಹ ಒಬ್ಬ ಮಹಾನ್ ವ್ಯಕ್ತಿಯ ಬಗ್ಗೆ ನಾವು ಪ್ರತಿನಿತ್ಯ ಎಷ್ಟೇ ಜಪ ಮಾಡಿದರು ಸಾಲದು ಎಂದು ಕಾಂಗ್ರೆಸ್ ವಿಜಯಪುರ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಲೋಣಿ ಹೇಳಿದರು.

ವಿಜಯಪುರದ ಅಂಬೇಡ್ಕರ್ ವೃತ್ತದಿಂದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ನಡೆಸಿ ಅಪಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ಜಗತ್ತಿನ ಮಹಾನ್ ಮಾನವತವಾದಿ ಸಂವಿಧಾನ ಶಿಲ್ಪಿಡಾ. ಬಿ. ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖಂಡ ಅಬ್ದುಲ್ ಹಮೀದ್ ಮುಶ್ರಫ್ ಮಾತನಾಡಿ, ಅಂಬೇಡ್ಕರ್ ಈ ದೇಶದ ಸಂವಿಧಾನ ಬರೆದವರು. ನಮ್ಮೆಲ್ಲರಿಗೂ ಸಮಾನ ಹಕ್ಕು ನೀಡಿದ ಮಹಾನ್ ನಾಯಕ. ಅಂಬೇಡ್ಕರ್ ಬಗ್ಗೆ ನಗುವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡಲೆ ಸಂಪುಟದಿಂದ ವಜಾ ಮಾಡಬೇಕು. ಅಂಬೇಡ್ಕರ್ ಬಗ್ಗೆ ಕೇವಲವಾಗಿ ಮಾತನಾಡುವ ಬಿಜೆಪಿ ನಾಯಕರನ್ನು ಜನತೆ ತಿರಸ್ಕರಿಸಬೇಕೆಂದು ಆಗ್ರಹಿಸಿದರು.

WhatsApp Image 2024 12 24 at 12.56.23 PM

ಪರಿಶಿಷ್ಟ ಜಾತಿ ಘಟಕದ ಜಿಲ್ಲಾ ಅಧ್ಯಕ್ಷ ರಮೇಶ್ ಗುಬ್ಬೇವಾಡ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ರಚಿಸಿ ಈ ದೇಶದ ಪ್ರತಿಯೊಬ್ಬ ನಾಗರಿಕರಿಗೆ ಸಮಾನಕಗಳನ್ನು ಕಲ್ಪಿಸಿದ್ದಾರೆ. ನಾಲ್ಕು ಗೋಡೆಗಳ ಮಧ್ಯೆ ಜೀವಿಸುತ್ತಿದ್ದ ಮಹಿಳೆಯರಿಗೆ ಪುರುಷ ಸಮಾನ ಅಧಿಕಾರ ಮತ್ತು ಹಕ್ಕುಗಳನ್ನು ನೀಡಿದ್ದಾರೆ. ಇದರಿಂದ ಮಹಿಳೆಯರನ್ನು ಮುಖ್ಯವಾಗಿ ತಂದು ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯ ಸಾಧನೆ ಮಾಡಲು ಸಾಧ್ಯವಾಗಿದೆ. ಇಂತಹ ಮಹಾನ್ ಚೇತನರ ಬಗ್ಗೆ ಮಾತನಾಡಿದ್ದು ಅತ್ಯಂತ ಖಂಡನೆವಾಗಿದೆ. ಅಮಿತ್ ಶಾ ಹೇಳಿಕೆಯಿಂದ ಕೇವಲ ಅಂಬೇಡ್ಕರ್ ಅವರಿಗೆ ಅಷ್ಟೇ ಅಲ್ಲ ಇಡೀ ದೇಶದ ನಾಗರಿಕರಿಗೆ ಅವಮಾನ ಮಾಡಿದಂತಾಗಿದೆ. ಹೀಗಾಗಿ ಅಮಿತ್ ಸರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೇಶದ ಜನತೆಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ವಿಜಯಪುರ | ಶರಣರ ಎಲ್ಲ ಕುರುಹುಗಳನ್ನು ಉಳಿಸಿ ಅಭಿವೃದ್ಧಿಪಡಿಸುವಂತೆ ಸರ್ಕಾರಕ್ಕೆ ಒತ್ತಾಯ

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಆರತಿ ಷಹಪೂರ, ಮುಖಂಡರಾದ ಡಾ.ಬಾಬುರಾಜೇಂದ್ರ ನಾಯಕ, ಬಿಎಸ್ ಗಸ್ತಿ, ಸುಭಾಶ ಕಾಲೇಭಾಗ, ವೈದ್ಯನಾಥ್ ಕರ್ಪೂರ ಮಠ, ಚಾಂದಸಾಬ್ ಗಡಗಲಾವ, ಗಂಗಾಧರ ಸಂಬಣ್ಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಮೀರ್ ಬಕ್ಷಿ, ಪ್ರಧಾನ ಕಾರ್ಯದರ್ಶಿಗಳಾದ ಜಾಕೀರ್ ಹುಸೇನ್ ಮುಲ್ಲಾ, ಎಂ ಎಂ ಮುಲ್ಲಾ, ದೇಶೂ ಚೌಹಾಣ್, ವಸಂತ ವನಮೋಡೆ, ಹಾಜಿಲಾಲ್ ದಳವಾಯಿ, ರಾಘವೇಂದ್ರ ಒಡವಡಗಿ, ಅಜಯ್ ರೋಜೆವಾಲೆ, ಇಲಿಯಾಸ್ ಸಿದ್ದಕಿ, ಜಬ್ಬರ್ ಮುಲ್ಲಾ, ಆನಂದ್ ಜಾದವ, ಅಮಿತ್ ಚೌಹಾನ್, ರಾಜೇಶ್ವರಿ ಚೊಳಕೆ, ಪ್ರಿಯಾಂಕಾ ತೊರವಿ, ಲಲಿತ ದೊಡ್ಡಮನಿ, ಜಯಶ್ರೀ ಹದನೂರ, ದಿಲೀಪ್ ಪ್ರಭಾಕರ್ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...