ವಿಜಯಪುರ | ಹಕ್ಕಿಜ್ವರ ಕುರಿತು ಆತಂಕ ಬೇಡ; ಅಧಿಕಾರಿಗಳ ಅಭಯ

Date:

ಹಕ್ಕಿಜ್ವರ ಪಕ್ಷಿಗಳಿಗೆ ಹರಡುವ ಕಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಸಾಂಕ್ರಾಮಿಕವಾಗಿ ಹರಡುವುದಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ವಿಜಯಪುರ ಕಂದಾಯ ಉಪ ವಿಭಾಗಾಧಿಕಾರಿ ವಿನಯ ಪಾಟೀಲ ಹೇಳಿದರು.

ಇಂಡಿ ತಾಲೂಕಿನ ವಿಧಾನಸೌಧದ ಕಂದಾಯ ಉಪ ವಿಭಾಗಾಧಿಕಾರಿಗಳ ಸಭಾಭವನದಲ್ಲಿ ನಡೆದ ಹಕ್ಕಿಜ್ವರ ಕುರಿತು ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಿರಿಯ ಪಶು ವೈದ್ಯಧಿಕಾರಿ ಡಾ. ರಾಜಕುಮಾರ ಅಡಗಿ ಮಾತನಾಡಿ, “ತಾಲೂಕಿನಲ್ಲಿ ಒಟ್ಟು ಹತ್ತು ಸಾವಿರ ಕೋಳಿಗಳಿವೆ. ಸಾವಿರ ಕೋಳಿಯ 4 ಫಾರಂಗಳಿವೆ. 50 ಕೋಳಿಯ 30 ಫಾರಂಗಳಿಗೆ. ಮರಣ ಹೊಂದಿದ ಕೋಳಿಗಳ ವೈಜ್ಞಾನಿಕ ವಿಲೇವಾರಿ ಮಾಡಲಾಗುತ್ತಿದೆ. ಇತ್ತೀಚೆಗೆ ನಡೆದ ಕೋಳಿಗಳ ಸಾವಿನ ಕುರಿತು ವೈದ್ಯಕೀಯ ಕಾರಣಗಳನ್ನು ಕಂಡುಕೊಳ್ಳಲಾಗುತ್ತಿದೆ. ಯಾವುದೇ ಕಾಯಿಲೆಯ ಕುರಿತು ಆತಂಕ ಬೇಡ, ಎಚ್ಚರವಿರಲಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕು ಹಕ್ಕಿಜ್ವರದ ನೋಡಲ್ ಅಧಿಕಾರಿ ಡಾ. ಪ್ರಕಾಶ್ ಮಿರ್ಜಿ ಮಾತನಾಡಿ, “ತಾಲೂಕಿನಲ್ಲಿ ಕೋಳಿ ಶೀತ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕೋಳಿ ಸಾಕಾಣಿಕೆ ಕೇಂದ್ರಗಳ ಮಾಲೀಕರಿಗೆ ಕೋಳಿಗಳಲ್ಲಿ ಅಸಹಜ ಸಾವು ಕಂಡುಬಂದಲ್ಲಿ ತಕ್ಷಣವೇ ಪಶುಪಾಲನ ಇಲಾಖೆಗೆ ತಿಳಿಸುವಂತೆ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕೋಳಿ ಮಾಂಸ ಮತ್ತು ಮೊಟ್ಟೆ ಮಾರಾಟ ಅಂಗಡಿಗಳಲ್ಲಿ ಉತ್ಪಾದನೆ ಆಗುವ ಮಾಂಸ ಹಾಗೂ ಮೊಟ್ಟೆಗಳನ್ನು ಸೂಕ್ತ ರೀತಿ ಪರಿಶೀಳನೆ ಮಾಡಲು ಕ್ರಮವಹಿಸಲು ಸೂಚನೆ ನೀಡಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ವಿಜಯಪುರ | ನೀರು ಕುಡಿಯಲು ಹೋಗಿ ಬಾಲಕ ನೀರುಪಾಲು

ಈ ವೇಳೆ ಪಶು ವೈದ್ಯಧಿಕಾರಿ ಡಾ ಲಕ್ಷ್ಮೇಶ ಕಟ್ಟಿಮನಿ, ಡಾ. ರವಿಕಾಂತ ಬಿರಾದಾರ, ಡಾ. ರಾಜಶೇಖರ ಕಾರಜೋಳ, ಡಾ. ಸಂಜೀವ್ ಕುಮಾರ ಲಾಳಸಂಗಿ, ಡಾ. ವಿನಯ ಜಂಬಗಿ, ಡಾ. ಪ್ರಶಾಂತ ಬೆಳ್ಳುಂಡಗಿ, ಡಾ, ಆಷಾರಾಣಿ ದಶವಂತ, ಸಿಬ್ಬಂದಿಗಳಾದ ರಾಮಣ್ಣ ಉಪ್ಪಾರ, ರಮೇಶ ನರಳೆ, ಜಾವೇದ ಭಾಗವಾನ, ಪುಂಡಲೀಕ ಕೂಡಗಿ, ಮೂಕಲಾಜಿ ಮತ್ತಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...