ವಿಜಯಪುರ | ಧರಣಿ ಕುಳಿತವರು ಯಾರೂ ಅಜ್ಞಾನಿಗಳಲ್ಲ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಅರವಿಂದ ಕುಲಕರ್ಣಿ ತಿರುಗೇಟು

Date:

ಧರಣಿ ಕುಳಿತವರು ಯಾರೂ ಅಜ್ಞಾನಿಗಳಲ್ಲ, ಎಲ್ಲರೂ ಉನ್ನತ ಶಿಕ್ಷಣ ಅಧ್ಯಯನ ಮಾಡಿದಂಥವರು. ಇಲ್ಲಿ ಯಾರದೂ ಸ್ವಾರ್ಥವಿಲ್ಲ. ಮತ್ತೊಬ್ಬರಿಂದ ಪ್ರಚೋದನೆಗೆ ಒಳಗಾಗಿ ಅಥವಾ ಯಾರದೋ ಕುಮ್ಮಕ್ಕಿನಿಂದ ಧರಣಿ ಕೂತಿಲ್ಲ ಎಂದು ವಿಜಯಪುರ ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಅಸಮಾಧಾನ ವ್ಯಕ್ತಪಡಿಸಿದರು.

ಇತ್ತೀಚೆಗೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರ, ʼಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಬಾರದೆಂದು ನಡೆಸುತ್ತಿರುವ ಧರಣಿ ಯಾರದೋ ಕುಮ್ಮಕ್ಕಿನಿಂದ ನಡೆಸುತ್ತಿದ್ದಾರೆಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅರವಿಂದ ಕುಲಕರ್ಣಿಯವರು, “ಧರಣಿಯ ಬಗ್ಗೆ ಹಗುರವಾಗಿ ಮಾತನಾಡಬಾರದು. ಹೋರಾಟಗಾರರಲ್ಲಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಸಚಿವರ ವಿರುದ್ಧವೇ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಸಿದರು.

“ಧರಣಿ ಕುಳಿತವರು ಯಾವ ಕಾರಣಕ್ಕಾಗಿ ಕುಳಿತಿದ್ದಾರೆ, ಅವರ ನಿಲುವೇನು? ಯಾರಿಗಾಗಿ ಧರಣಿ ಕುಳಿತಿದ್ದಾರೆ ಮತ್ತು ಏತಕ್ಕಾಗಿ ಧರಣಿ ನಡೆಸುತ್ತಿದ್ದಾರೆಂದು ತಿಳಿದುಕೊಳ್ಳದೆ ಅಧಿಕಾರದ ದರ್ಪದಿಂದ ತಮ್ಮ ಮನಸಿಗೆ ತೋಚಿದಂತೆ ಮಾತನಾಡಿರುವುದು ತಮ್ಮ ಸಚಿವ ಸ್ಥಾನಕ್ಕೆ ಶೋಭೆ ತರುವಂಥದ್ದಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾರ ಕುಮ್ಮಕ್ಕಿನಿಂದ ಹೋರಾಟ ನಡೆಯುತ್ತಿದೆ ಎಂಬುದನ್ನು ಸಚಿವರು ಬಹಿರಂಗಪಡಿಸಬೇಕು. ಇವರು ಆಯ್ಕೆಯಾಗಿರುವುದು ಜನರ ಮತಭಿಕ್ಷೆಯಿಂದ ಎನ್ನುವುದನ್ನು ಬಹುಷಃ ಮರೆತಿದ್ದಾರೆ. ಜನರಿಗೆ ಅನ್ಯಾಯವಾದರೆ ಅನ್ಯಾಯವನ್ನು ಪ್ರತಿಭಟಿಸುವುದು ಸಂಘಟನೆಗಳ ಕರ್ತವ್ಯ. ಇಲ್ಲಿ ಯಾರದೋ ಮಾತನ್ನು ಕೇಳಿ, ಯಾರದೋ ಮುಲಾಜಿಗೆ ಒಳಗಾಗುವ ಅಗತ್ಯವಿಲ್ಲ” ಎಂದಿದ್ದಾರೆ.

“ಸರ್ಕಾರ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ನಡೆಸಲು ಉದ್ದೇಶಿರುವುದು ಕೋಟಿ ಕೋಟಿ ಹಣವನ್ನು ಲೂಟಿ ಮಾಡುವ ಹುನ್ನಾರದಿಂದಲೇ ಹೊರತು, ಜನ ಹಿತಕ್ಕಲ್ಲ. ಇದರಲ್ಲಿ ಪಿಪಿಪಿ ಮಾದರಿ ಬೇಕಾಗಿರುವುದು ಜನಪ್ರತಿನಿಧಿಗಳಿಗೇ ಹೊರೆತು ಜನಸಾಮಾನ್ಯರಿಗಲ್ಲ. ಪಿಪಿಪಿ ಪಿಪಿ ಮಾಡುವುದರಿಂದ ಜನಪ್ರತಿನಿಧಿಗಳಿಗೆ ಲಾಭವಿದೆಯೇ ಹೊರೆತು ಜನಸಾಮಾನ್ಯರಿಗೆ ನಯಾಪೈಸ ಲಾಭವಿಲ್ಲ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಶಿರೋಡಾ ಕಡಲತೀರದಲ್ಲಿ ಭೀಕರ ದುರಂತ; ಏಳು ಮಂದಿ ನೀರುಪಾಲು, ಓರ್ವನ ಸ್ಥಿತಿ ಗಂಭೀರ

“ಒಂದು ವೇಳೆ ಸಚಿವರು ಹೇಳಿದಂತೆ ಪಿಪಿಪಿ ಮಾದರಿಯಿಂದ ಖಾಸಗಿಯವರಿಗೆ ಅನುಕೂಲವಿಲ್ಲ ಎಂದಾದರೆ, 500 ಕೋಟಿ ರೂಪಾಯಿ ಬಂಡವಾಳ ಹೂಡಲಾಗುವುದೆಂದು ಶಾಸಕ ಯತ್ನಾಳ್ ಅವರು ಏಕೆ ಹೇಳಿದ್ದಾರೆ? ಇದು ತಮ್ಮ ಲಾಭಕ್ಕಾಗಿ ಹೊರತಾಗಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವುದಕಲ್ಲ. ಇದನ್ನು ಖಂಡಿಸಿ ನಾವು ಹೋರಾಟ ನಡೆಸುತ್ತಿದ್ದರೆ ಹೋರಾಟಗಾರರಿಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ” ಎಂದು ಎಚ್ಚರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...