ವಿಜಯಪುರ | ಜು.13ರಂದು ಸಾಹಿತಿ ಅನಿಲ ಹೊಸಮನಿಯವರಿಗೆ ಅಭಿನಂದನಾ ಸಮಾರಂಭ

Date:

ವಿಜಯಪುರ ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ ದಲಿತ ದಮನಿತರ ಧ್ವನಿ, ಸಾಹಿತಿ ಅನಿಲ ಹೊಸಮನಿ ಅವರಿಗೆ ನಗರದ ಅಂಬೇಡ್ಕ‌ರ್ ಭವನದಲ್ಲಿ ಜುಲೈ 13ರ ಭಾನುವಾರ ಬೆಳಿಗ್ಗೆ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಲಡಾಯಿ ಪ್ರಕಾಶನದ ಬಸವರಾಜ ಸುಳಿಬಾವಿ ಹೇಳಿದರು.

ವಿಜಯಪುರ ನಗರದ ಬುದ್ಧ ವಿಹಾರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದರು.

ವಿಜಯಪುರದ ಮೇ ಸಾಹಿತ್ಯ ಮೇಳ ಬಳಗದಿಂದ ನಡೆಯಲಿರುವ ಅನಿಲ ಎಂಬ ಬಿಸಿಲ ನೆಲದ ಸಂಘರ್ಷದ ಒಡನಾಡಿಯೊಂದಿಗೆ ಒಂದು ದಿನ ಎಂಬ ಕಾರ್ಯಕ್ರಮದಲ್ಲಿ ಬಿ. ಶ್ರೀನಿವಾಸ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉದ್ಘಾಟನೆಯನ್ನು ಮುಂಬಯಿಯ ವಿಜಯ ಸುರ್ವಾಡೆ ಮುಂಬಯಿ ನೇರವೇರಿಸುವರು. ಡಾ. ಮೂಡ್ನಾಕೂಡ ಚಿನ್ನಸ್ವಾಮಿಯವರು ‘ಡಾ. ಅಂಬೇಡ್ಕ‌ರ್ ಸಹವಾಸದಲ್ಲಿ’ ಪುಸ್ತಕದ 2ನೇ ಆವೃತ್ತಿ ಬಿಡುಗಡೆ ನೇರವೇರಿಸುವರು.

ಮುಖ್ಯ ಅತಿಥಿಗಳಾಗಿ ಡಾ. ಆರ್ ಸುನಂದಮ್ಮ, ರಾಜು ಅಲಗೂರ ಆಗಮಿಸುವರು. ಅಧ್ಯಕ್ಷತೆಯನ್ನು ರಾಜಶೇಖರ ಯಡಹಳ್ಳಿ ವಹಿಸುವರು. ಶೋಭಾ ಕಟ್ಟಿಮನಿ ಹೊಸಮನಿ ಉಪಸ್ಥಿತರಿರುವ. ಸುಜಾತ ಚಲವಾದಿ ಉಪನ್ಯಾಸ ನೀಡುವರು. ಮೋಹನ ಕಟ್ಟಿಮನಿ ಸಂಯೋಜಿಸುವರು. ಬಳಿಕಾ ಅಭಿಷೇಕ ಚಕ್ರವರ್ತಿಯವರಿಂದ ವಿಜಾಪುರ ಜಿಲ್ಲೆಯ ದಲಿತ ಚಳವಳಿ ಮತ್ತು ಅನಿಲ ಹೊಸಮನಿ ಎಂಬ ವಿಚಾರಗೋಷ್ಠಿ ನಡೆಸಿಕೊಡುವರು.

ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ಅಧಿಕಾರಿಗಳ ಕಣ್ತಪ್ಪಿಸಿ ಮುನಗನಹಳ್ಳಿ ಕೆರೆಯ ಮಣ್ಣು ಅಕ್ರಮ ‌ಸಾಗಣೆ: ಕ್ರಮಕ್ಕೆ ಒತ್ತಾಯ

ಅದಾದ ನಂತರ ಹಣಮಂತ ಚಿಂಚೋಳಿ ಇವರಿಂದ ಅನಿಲ ಹೊಸಮನಿ: ಜನಪರ ಚಳವಳಿಗಳ ಒಡನಾಟ, ಡಾ.ಓಂಕಾರ ಕಾಕಡೆ ಇವರಿಂದ ಅನಿಲ ಹೊಸಮನಿ: ಪತ್ರಿಕಾ ಬರಹ- ಬದುಕು ಎಂಬ ವಿಚಾರ ಗೋಷ್ಠಿ ನಡೆಯಲಿವೆ. ಸಾಯಂಕಾಲ ಅನಿಲ ಹೊಸಮನಿಯವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಬಳಿಕ ಗೌರವಾರ್ಪಣೆ ಮತ್ತು ಸಮಾರೋಪ ಹಾಗೂ ಒಡನಾಡಿಗಳ ಮಾತು ಕಾರ್ಯಕ್ರಮ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಅಭಿಷೇಕ್ ಚಕ್ರವರ್ತಿ, ರಾಜಶೇಖರ ಯಡಹಳ್ಳಿ, ಚೆನ್ನು ಕಟ್ಟಿಮನಿ, ನಾಗರಾಜ ಲಂಬು, ಅಡಿವೆಪ್ಪ ಸಾಲಗಲ್ಲು, ಶ್ರೀನಾಥ ಪೂಜಾರಿ,‌ ಪ್ರಭುಗೌಡ ಪಾಟೀಲ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...