ವಿಜಯಪುರ | ಆಲಮಟ್ಟಿ ಜಲಾಶಯ ಭರ್ತಿಗೆ ಕೆಲವೇ ಗಂಟೆಗಳು ಬಾಕಿ

Date:

ಆಲಮಟ್ಟಿ ಜಲಾಶಯದ ಒಳಹರಿವು ಕಡಿಮೆಯಾಗಿದೆ. ಒಂದು ವಾರದಿಂದ ಜಲಾಶಯದ ಹೊರಹರಿವು ಕಡಿಮೆ ಮಾಡಿದ್ದರಿಂದ ಜಲಾಶಯ ಬಹುತೇಕ ಆಗಸ್ಟ್ 15ರ ವೇಳೆಗೆ ಭರ್ತಿಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆಗಸ್ಟ್ ನಲ್ಲಿಯೂ ಪ್ರವಾಹ ಸ್ಥಿತಿ ಇದ್ದು, ಒಳಹರಿವು ಏರುಮುಖವಾಗಿದ್ದರೆ ಜಲಾಶಯ ಭರ್ತಿ ಮಾಡುವುದಿಲ್ಲ. ಸದ್ಯಕ್ಕೆ ಒಳಹರಿವು ಕೂಡ ಕಡಿಮೆ ಇದ್ದು, ಪ್ರವಾಹದ ಸ್ಥಿತಿಯಿಲ್ಲ. ಹೀಗಾಗಿ ಆಗಸ್ಟ್ 15ಕ್ಕೆ ಜಲಾಶಯದ ಭರ್ತಿಯಾಗುವ ಸಾಧ್ಯತೆ ಇದೆ ಎಂದು ಕೆಬಿಜೆಎನ್ಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಹೊರಹರಿವು ಸ್ಥಗಿತಗೊಳಿಸಿದ್ದರೆ, ಜೂನ್ ಅಂತ್ಯಕ್ಕೆ ಜಲಾಶಯ ಭರ್ತಿಯಾಗುತ್ತಿತ್ತು. ಆದರೆ, ಕೇಂದ್ರ ಜಲ ಆಯೋಗದ ಮಾರ್ಗದರ್ಶನದನ್ವಯ ಜಲಾಶಯವನ್ನು ಕೆಲ ಮಾನದಂಡ ಅನುಸರಿಸಿ ಭರ್ತಿ ಮಾಡಲಾಗುತ್ತದೆ. ಈ ವರ್ಷ ಮುಂಗಾರು ಮಳೆ ಉತ್ತಮವಾಗಿದೆ ಎಂಬ ಹವಮಾನ ವರದಿ, ಇದೇ ಮೊದಲ ಬಾರಿ ಮೇ 19 ರಂದೇ ಅತಿ ಬೇಗನೆ ಜಲಾಶಯದ ಒಳಹರಿವು ಆರಂಭಗೊಂಡಿದ್ದರಿಂದ ಜಲಾಶಯ ಅರ್ಧ ಬರ್ತಿಯಾಗುವ ಮುನ್ನವೇ ಅಂದರೆ ಮೇ 30ರಂದೆ ಜಲಾಶಯದಿಂದ ನೀರು ಬಿಡಲು ಆರಂಭಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರಿಂದಾಗಿ ಜಲಾಶಯಕ್ಕೆ 1.20 ಲಕ್ಷ ಕ್ಯೂಸೆಕ್ಸ್ ಅಧಿಕ ಒಳಹರಿವು ಬಂದು, 1.40 ಲಕ್ಷ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ. ಇದರಿಂದಾಗಿ ಜಲಾಶಯದ ಮುಂಭಾಗದಲ್ಲಿ ಯಾವುದೇ ಪ್ರವಾಹ ಸ್ಥಿತಿ ಉಂಟಾಗಲಿಲ್ಲ. ಕೆ ಬಿ ಜೆ ಎನ್ ಎಲ್ ಅಧಿಕಾರಿಗಳು ಈ ಬಾರಿ ಮುಂಜಾಗ್ರತೆ ಕ್ರಮ ಅನುಸರಿಸುವುದರಿಂದ ಈ ಬಾರಿ ಜಲಾಶಯದ ಹಿಂಭಾಗ ಹಾಗೂ ಮುಂಭಾಗದಲ್ಲಿ ಜಮೀನುಗಳಿಗೆ ನೀರು ನುಗ್ಗುವುದು ಮತ್ತಿತರ ಯಾವುದೇ ಅನಾಹುತಗಳು ಸಂಭವಿಸಲಿಲ್ಲ.

ಇದನ್ನೂ ಓದಿ: ವಿಜಯಪುರ | ಶಿಥಿಲಗೊಂಡಿರುವ ಬಂಗಾರ ಗುಂಡಿಯ ಸರ್ಕಾರಿ ಶಾಲೆ: ಜೀವ ಭಯದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು!

519.60 ಮೀಟರ್ ಗರಿಷ್ಠ ಎತ್ತರದ ಜಲಾಶಯದಲ್ಲಿ, 519.52 ಮೀಟರ್ ವರೆಗೆ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 32 ಪಾಯಿಂಟ್ 395 ಕ್ಯೂಸೆಕ್ ಒಳಹರಿವು ಇದ್ದು, 30.370 ಕ್ಯೂಸೆಕ್ ನೀರನ್ನು ನದಿ ಪಾತ್ರದಿಂದ ಹರಿ ಬಿಡಲಾಗುತ್ತಿದೆ. 123. 081 ಟಿಎಂಸಿ ಅಡಿ ಗರಿಷ್ಠ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 121.606 ಟಿಎಂಸಿ ಅಡಿ ನೀರು ಮಾತ್ರ ಬಾಕಿ ಇದೆ. ಅಧಿಕಾರಿಗಳ ಮುಂಜಾಗ್ರತ ಕ್ರಮ ಹಾಗೂ ಜಲ ಆಯೋಗದ ಮಾರ್ಗದರ್ಶನದಿಂದ ಜಲಾಶಯದ ಹತ್ತಿರವಿರುವ ಜಮೀನುಗಳಿಗೆ ಅನುಕೂಲಕರ ಪರಿಸ್ಥಿತಿ ನಿರ್ಮಾಣವಾಗಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...