ವಿಜಯಪುರ | ಸಾವಯವ ಕೃಷಿಗೆ ಪ್ರಸ್ತುತ ವಿಶೇಷ ಸ್ಥಾನವಿದೆ: ಡಾ. ರವೀಂದ್ರ ಬೆಳ್ಳಿ

Date:

ಸಾವಯವ ಕೃಷಿಗೆ ಪ್ರಸ್ತುತದಲ್ಲಿ ವಿಶೇಶ ಸ್ಥಾನ ಕೊಡಲಾಗಿದೆ. ಏಕೆಂದರೆ ಭೂಮಿಯ ಉತ್ಪಾದಕತೆ ಸಾಮರ್ಥ್ಯವು ಕುಂಠಿತವಾಗುತ್ತಿರುವುದನ್ನು ತಡೆಗಟ್ಟಲು ಸಾವಯವ ಗೊಬ್ಬರಗಳನ್ನು ಸಮರ್ಪಕವಾಗಿ ಬಳಸುವುದು ಮತ್ತು ದೊಡ್ಡ ಪ್ರಮಾಣದಲ್ಲಿ ಅತೀ ಹೆಚ್ಚಿನ ಖರ್ಚಿನಲ್ಲಿ ಬಳಕೆಯಾಗುತ್ತಿರುವ ರಾಸಾಯನಿಕ ಗೊಬ್ಬರಗಳನ್ನು ನಿಯಂತ್ರಿಸಿ, ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಂಡು ಬರುವುದು ಅತೀ ಅವಶ್ಯಕವಾಗಿದೆ ಎಂದು ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಹೇಳಿದರು.

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ, ಇಂಡಿ, ಕೃಷಿ ಇಲಾಖೆ ಹಾಗೂ ಶ್ರೀ ಗುರುಚಂದ್ರ ಶೇಖರ ಸಂಸ್ಥಾನ ಹಿರೇಮಠ, ತದ್ದೇವಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ‘ಸಾವಯವ ಕೃಷಿ ಚಿಂತನಾ ಗೋಷ್ಠಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹೆಚ್ಚುತ್ತಿರುವ ರಾಸಯನಿಕ ಗೊಬ್ಬರಗಳ ಬೆಲೆಯು ಸಹ, ಕೃಷಿಕರಲ್ಲಿ ಮುಂದೆ ಏನು ಎಂಬ ಯೋಚನೆ ಬಂದಾಗ, ಸಾವಯವ ಕೃಷಿಯು ಒಂದು ಆಶಾದಾಯಕ ದಾರಿಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಗುರುಚಂದ್ರಶೇಖರ ಸಂಸ್ಥಾನ ಹಿರೇಮಠ, ತದ್ದೇದಾಡಿದ ಶ್ರೀ ಮಹಾಂತೇಶ ಹಿರೇಮಠ ಗುರುಗಳು ಮಾತನಾಡಿ, ಭಾರತದಲ್ಲಿ ಹಸಿರು ಕ್ರಾಂತಿಯ ಪರಿಣಾಮದಿಂದಾಗಿ ರಾಸಾಯನಿಕ ಗೊಬ್ಬರಗಳ ಹಾಗೂ ಪೀಡೆನಾಶಕಗಳ ವಿವೇಚನಾರಹಿತ ಬಳಕೆಯಿಂದಾಗಿ ನೈಸರ್ಗಿಕ ಸಂಪನ್ಮೂಲಗಳಾದ ಭೂಮಿ, ನೀರು, ಸಸ್ಯ ಮತ್ತು ಪ್ರಾಣಿ ಸಂಕುಲಗಳು ಮಲಿನಗೊಳ್ಳುತ್ತಿವೆ ಎಂದು ಬೇಸರಿಸಿದರು.

ವಿಜ್ಞಾನಿ ಡಾ. ಪ್ರಕಾಶ ಜಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೃಷಿ ಅಧಿಕಾರಿ ಶ್ರೀ ದಾನಪ್ಪ ಕರ್ತೃ, ಕೃಷಿ ಇಲಾಖೆಯ ಯೋಜನೆಗಳ ಬಗ್ಗೆ ರೈತರಿಗೆ ಮಾಹಿತಿ ಒದಗಿಸಿದರು. ನಂತರ ತಾಂತ್ರಿಕ ಗೋಷ್ಠಿಯಲ್ಲಿ ಡಾ.ಪ್ರಕಾಶ ಜಿ. ಸಾವ ಯವ ಕೃಷಿ ಯಲ್ಲಿ ಬೀಚಾಮೃತ, ಜೀವಾಮೃತ, ಕೃಷಿ ಬೆಳೆಗಳ ಹೊದಿಕೆಯ ಮಹತ್ವ, ಹಸಿರಲೆ ಗೊಬ್ಬರ, ಅಂತರ ಬೆಳೆ, ಮಿಶ್ರ ಬೆಳೆಗಳ ಕುರಿತು ಮಾಹಿತಿ ಒದಗಿಸಿದರು.

ಇದನ್ನು ಓದಿದ್ದೀರಾ? ಬಾಗಲಕೋಟೆ | ರಾಜ್ಯದಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೊಳಿಸಿ: ಕರವೇ ಶಿವರಾಮೇ ಗೌಡ ಬಣ ಆಗ್ರಹ

ಡಾ. ಪ್ರೇಮ್‌ ಚಂದ್ ಯು ಸಾವಯವ ಕೃಷಿಯಲ್ಲಿ ಕೀಟ ಮತ್ತು ರೋಗ ನಿರ್ವಹಣೆ, ಡಾ. ಬಾಲಾಜಿ ನಾಯಕ, ಸಾವಯವ ಕೃಷಿಯಲ್ಲಿ ಸಾವಯವ ಇಂಗಾಲ ಹಾಗೂ ಮಣ್ಣಿನ ಫಲವತ್ತತೆ, ಡಾ. ಪ್ರಸಾದ ಎಂ. ಜಿ. ಸಾವಯವ ಕೃಷಿಯಲ್ಲಿ ಜಾನುವಾರುಗಳ ಪಾಲನೆ, ಎರೆಗೊಬ್ಬರ ತಯಾರಿಕೆ ಕುರಿತು ಉಪನ್ಯಾಸ ನೀಡಿದರು. ಭತಗುಣಕಿ ಗ್ರಾಮದ ಪ್ರಗತಿಪರ ರೈತ ಶ್ರೀ ಮುದ್ದುಗೌಡ ಪಾಟೀಲ್ ಇವರು ಸಾವಯವ ಕೃಷಿಯ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...