ವಿಜಯಪುರ | ಕೆಡುಕಿನ ನಿರ್ಮೂಲನೆಗೆ ಸಂಘಟಿತರಾಗಿ: ಡಾ. ಮೊಹಮ್ಮದ್ ಸಾದ್ ಬೆಳಗಾಮಿ

Date:

ಸಮಾಜದಲ್ಲಿರುವ ಕೆಡುಕುಗಳನ್ನು ನಿರ್ಮೂಲನೆಗೊಳಿಸಿ ಒಳಿತನ್ನು ಸಂಸ್ಥಾಪಿಸುವುದು ಮುಸ್ಲಿಂ ಸಮುದಾಯದ ಕರ್ತವ್ಯವಾಗಿದೆ. ಈ ಕೆಲಸವನ್ನು ಅವರು ಸಂಘಟಿತರಾಗಿ ಮಾಡಬೇಕು ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯಾಧ್ಯಕ್ಷ ಡಾ. ಮೊಹಮ್ಮದ್ ಸಾದ್ ಬೆಳಗಾಮಿ ಹೇಳಿದರು.

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಟಿಪ್ಪು ನಗರದಲ್ಲಿರುವ ಆಲಾ ಮಸೀದಿ ಸಭಾಂಗಣದಲ್ಲಿ ಜಮಾತೆ ಇಸ್ಲಾಮೀ ಹಿಂದ್ ನಗರ ಶಾಖೆಯಿಂದ ಹಮ್ಮಿಕೊಂಡಿದ್ದ ಮುಸ್ಲಿಂ ಸಮಾಜದ ಗಣ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಪ್ರಸ್ತುತದಲ್ಲಿ ನಮ್ಮ ಸಮಾಜದಲ್ಲಿ ಸಾಮಾಜಿಕ ಕೆಡುಕುಗಳಾದ ಕೋಮುವಾದ ಭ್ರಷ್ಟಾಚಾರ ನೈತಿಕ ಅಧಿಪತನ ಸ್ವಜನಪಕ್ಷಪಾತ ಧಾರ್ಮಿಕ ಅಸಹಿಷ್ಣುತೆ ಹಾಗೂ ದ್ವೇಷವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇವು ದೇಶದ ಪ್ರಗತಿ ಹಾಗೂ ಶಾಂತಿಗೆ ಮಾರಕವಾಗಿವೆ. ಇವುಗಳನ್ನು ನಿರ್ಮೂಲನೆಗೊಳಿಸದೇ ಹೋದಲ್ಲಿ ಸದೃಢ ಭಾರತದ ನಿರ್ಮಾಣ ಅಸಾಧ್ಯವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದ ಹಿತ ಚಿಂತನೆ ಎಲ್ಲರ ಕರ್ತವ್ಯವಾಗಿದೆ. ಭಾರತ ಜಗತ್ತಿನಲ್ಲಿಯೇ ಶ್ರೇಷ್ಟ ಧಾರ್ಮಿಕ ಪರಂಪರೆಯನ್ನು ಹೊಂದಿದ ದೇಶವಾಗಿದೆ. ಶತ ಶತಮಾನಗಳಿಂದ ಇಲ್ಲಿ ಎಲ್ಲ ಧರ್ಮಗಳ ಜನರೂ ಕೂಡ ಪ್ರೀತಿ ಮತ್ತು ವಿಶ್ವಾಸದಿಂದ ಬದುಕುತ್ತಿದ್ದಾರೆ. ಇದನ್ನು ಸಹಿಸದ ಕೆಲವರು ಕೇವಲ ತಮ್ಮ ಸ್ವಾರ್ಥ ಸಾಧನೆಗಾಗಿ ಜನರ ನಡುವೆ ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಇವರನ್ನು ನಿಯಂತ್ರಿಸುವ ಕೆಲಸವಾಗಬೇಕು. ನಾವೆಲ್ಲರೂ ಒಂದು ನಾವೆಲ್ಲರೂ ಭಾರತೀಯರು ಎಂಬ ಭಾವನೆ ಎಲ್ಲರಲ್ಲೂ ಬರಬೇಕಾಗಿದೆ” ಎಂದರು.

“ಮುಸ್ಲಿಂ ಸಮುದಾಯ ಇಂಥ ಸಂಕೀರ್ಣ ಸಮಯದಲ್ಲಿ ತನ್ನ ಜವಾಬ್ದಾರಿಯನ್ನು ನಿರ್ವಹಿಸಲು ಮುಂದೆ ಬರಬೇಕಾಗಿದೆ. ಜಮಾಅತೆ ಇಸ್ಲಾಮೀ ಹಿಂದ್ ಸಂಘಟನೆಯು ಮುಸ್ಲಿಂ ಸಮುದಾಯದಲ್ಲಿ ಇದರ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ವಿದ್ಯಾರ್ಥಿಗಳಿಗೆ, ಶಾಲೆ-ಕಾಲೇಜುಗಳ ಸಮಯಕ್ಕೆ ಸರಿಯಾಗಿ ಬಸ್ ಸೌಕರ್ಯ ಒದಗಿಸಿವಂತೆ ಎಐಡಿಎಸ್‌ಒ ಆಗ್ರಹ

ವೇದಿಕೆಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಕಾರ್ಯದರ್ಶಿ ಮಹಮ್ಮದ್ ತಲಹಾ ಬೆಂಗಳೂರು. ಬೆಳಗಾವಿ ವಿಭಾಗೀಯ ಸಂಚಾಲಕ ಎಂ ಐ ಬಡಗಣ, ಸಂಘಟನಾ ಕಾರ್ಯದರ್ಶಿ ಮಹಮ್ಮದ್ ಬಿಲಾಲ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...