ವಿಜಯಪುರ | ಭ್ರಷ್ಟ, ದೇಶ ವಿರೋಧಿ ಸರ್ಕಾರದ ಜತೆಗೆ ನಮ್ಮ ಸ್ಪರ್ಧೆ: ರಾಜು ಆಲಗೂರ

Date:

ನಮ್ಮ ಹೋರಾಟ ಸರ್ವಾಧಿಕಾರಿ ಆಡಳಿತ ಹಾಗೂ ಭ್ರಷ್ಟ ಕೇಂದ್ರ ಸರ್ಕಾರದ ವಿರುದ್ಧ ಎಂದು ವಿಜಯಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರೊ ರಾಜು ಆಲಗೂರ ಹೇಳಿದರು.

ದೇವರಹಿಪ್ಪರಗಿ ಮತಕ್ಷೇತ್ರದ ಹುಣಶ್ಯಾಳದಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

“ರೈತರ ಹಿತ ಕಾಪಾಡದ ಪ್ರಧಾನಿ ಮೋದಿಯವರು ಮೊದಲ ಬಾರಿ ಆರಿಸಿ ಬಂದ ಬಳಿಕ ಹೇಳಿದ್ದ ಯಾವುದೇ ಮಾತನ್ನೂ ಉಳಿಸಿಕೊಂಡಿಲ್ಲ. ಅದರ ಬದಲು ಅವರು ಜನರ ಜೀವನ ಕಸಿದುಕೊಂಡಿದ್ದಾರೆ. ಇದು ಯಾರಿಗೂ ಅವರು ಕೊಟ್ಟ ‘ಅಚ್ಛೇ ದಿನ್‌’ ಅಲ್ಲ. ಬದಲಿಗೆ ಹಿಂದಿನ ನಮ್ಮ ಕೆಟ್ಟ ದಿನಗಳೇ ಒಳ್ಳೆಯದಾಗಿದ್ದವು. ಅವುಗಳನ್ನೇ ನಮಗೆ ಕೊಡಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಸರ್ಕಾರದಂತೆ ಕೇಂದ್ರದಲ್ಲೂ ಗ್ಯಾರಂಟಿಗಳ ಪರ್ವ ಆರಂಭವಾಗಲಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ ವರ್ಷಕ್ಕೆ ಒಂದೂವರೆ ಲಕ್ಷ ರೂಪಾಯಿ ಮೇಲ್ಪಟ್ಟು ಹಣ ಬರಲಿದೆ. ಈ ಬೆಲೆ ಏರಿಕೆ ದಿನಗಳ ಕಡು ಕಷ್ಟ ಮರೆಯಾಗಬೇಕಾದರೆ ಕಾಂಗ್ರೆಸ್‌ಗೆ ವೋಟು ಹಾಕಿ, ದೇಶವನ್ನು ಉಳಿಸಿ. ಅದಾಗದೇ ಈ ಬಾರಿಯೂ ಮೋದಿ ಗೆದ್ದರೆ ದೇಶದ ಪ್ರಜಾಪ್ರಭುತ್ವವೇ ನಾಶವಾಗಿ, ನ್ಯಾಯಯುತ ಚುನಾವಣೆಗಳೇ ನಡೆಯದಿರುವ ಸ್ಥಿತಿ ಬರಲಿದೆ” ಎಂದು ಹೇಳಿದರು.

ಮಾಜಿ ಶಾಸಕ ಶರಣಪ್ಪ ಸುಣಗಾರ ಮಾತನಾಡಿ, “ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿಯವರ ವೈಫಲ್ಯಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು. ಬಿಜೆಪಿಯವರಿಗೆ ಕೇಳುವ ನೈತಿಕ ಹಕ್ಕಿಲ್ಲ. ಕೊಟ್ಟಿರುವ ಯಾವ ಭರವಸೆಯನ್ನೂ ಅವರು ಈಡೇರಿಸಿಲ್ಲ. ಬರೀ ರಾಮ ಮಂದಿರ ಕಟ್ಟಿದರೆ ಮುಗಿಯಲಿಲ್ಲ. ಜನ ಸಾಮಾನ್ಯರ ಬದಕನ್ನು ಕಟ್ಟಬೇಕಿದೆ. ಬೆಲೆ ಏರಿಕೆಯಿಂದ ದೇಶದ ಜನ ತತ್ತರಿಸಿದ್ದಾರೆ. ಕಾಂಗ್ರೆಸ್ ಕಟ್ಟಿದ ದೇಶದ ಎಲ್ಲ ಸಂಸ್ಥೆಗಳನ್ನು ಮಾರುವುದೇ ಇವರ ಕೆಲಸವಾಗಿದೆ. ಅದಾನಿ, ಅಂಬಾನಿಗಳು ಇವರ ಖರೀದಿದಾರರಾಗಿದ್ದಾರೆ. ಕಾಂಗ್ರೆಸ್‌ಗೆ ಇತಿಹಾಸವಿದೆ. ಹಾಗಾಗಿ ಬದಲಾವಣೆ ಮತ್ತು ನಿಮ್ಮ ನೆಮ್ಮದಿಯ ಜೀವನಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಎಸ್‌ಯುಸಿಐ(ಕಮ್ಯುನಿಸ್ಟ್) ಪಕ್ಷದಿಂದ ಲಕ್ಷ್ಮಣ ಜಡಗನ್ನವರ ಸ್ಪರ್ಧೆ

ಮುಖಂಡರುಗಳಾದ ಬಿ ಎಸ್ ಪಾಟೀಲ ಯಾಳಗಿ, ಸುಭಾಷ್ ಛಾಯಾಗೋಳ, ಆನಂದಗೌಡ ದೊಡ್ಡಮನಿ, ಪ್ರಭುಗೌಡ ಪಾಟೀಲ, ಬ್ಲಾಕ್ ಅಧ್ಯಕ್ಷ ಬಶೀರ ಬೇಪಾರಿ, ಸಂಗನಗೌಡ ಹರನಾಳ, ಬಾಪುಗೌಡ ಪಾಟೀಲ, ಸಾಯಿಕುಮಾರ ಬಿಸನಾಳ, ತಾಪಂ ಮಾಜಿ ಅಧ್ಯಕ್ಷೆ ಲಲಿತಾ ದೊಡ್ಡಮನಿ, ರಾಜಶೇಖರ ಕುಚಬಾಳ, ದೇವರಹಿಪ್ಪರಗಿ ಬ್ಲಾಕ್ ಅಧ್ಯಕ್ಷೆ ಸರಿತಾ ನಾಯಕ, ಹೂವಿನ ಹಿಪ್ಪರಗಿ ಬ್ಲಾಕ್ ಅಧ್ಯಕ್ಷೆ ರಮೀಜಾ ನದಾಫ್, ಸಯ್ಯದ, ಲಿಂಗದಳ್ಳಿ, ಮಡಿವಾಳಪ್ಪ, ಜಗದೀಶ್ ಪಾಟೀಲ, ಹಯ್ಯಾಳಪ್ಪ ವಾಲೀಕಾರ, ರಮೇಶ ಕುಂಬಾರ, ಸಾಹೇಬಗೌಡ ಬಿರಾದಾರ ‌ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...