ಕೃಷಿ ಜಮೀನಿನ ಮಾಲೀಕರು ಮರಣ ಹೊಂದಿದ ನಂತರ ವಾರಸುದಾರರ ಖಾತೆ ಬದಲಾವಣೆ ಮಾಡಲು ಪೌತಿ-ವಾರಸ ಖಾತೆ ಆಂದೋಲನವನ್ನು ವಿಜಯಪುರ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ ತಿಳಿಸಿದ್ದಾರೆ.
ಪ್ರಕಟಣೆ ನೀಡಿರುವ ಅವರು, ಮಾಲೀಕತ್ವವು ಮೃತರ ವಾರುಷದಾರರ ಹೆಸರಿಗೆ ಬದಲಾವಣೆಯಾಗದಿದ್ದಲ್ಲಿ, ಉಂಟಾಗುವ ಸಮಸ್ಯೆಯನ್ನು ಪರಿಹರಿಸಲು ಪೌತಿ-ವಾರಸಾ ಸ್ವರೂಪದ ಮ್ಯೂಟಿಷನ್ ಪ್ರಕ್ರಿಯೆಯನ್ನು ಸರಳಿಕೃತಗೊಳಿಸಿ ಪೌತಿ-ವಾರಸು ಖಾತೆ ಆಂದೋಲನ ನಡೆಸಲಾಗುತ್ತಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಮಕರವಾರಿಸುದಾರರ ಮನೆ ಬಾಗಿಲಿಗೆ ಆಗಮಿಸಿ, ಇ-ಪೌತಿ- ವಾರಸು ಖಾತೆಯನ್ನು ದಾಖಲಿಸಿಕೊಳ್ಳಲು ಕ್ರಮವಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಧಾರವಾಡ | ಮೃತ ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಗುರುವಾದಪ್ಪ ಬಂಕದ ಒತ್ತಾಯ
ವಾರಸದಾರರ ಅಗತ್ಯ ದಾಖಲೆಗಳಾದ ವಂಶವೃಕ್ಷ ಮತ್ತು ಮಹಾಜಾರ್ ಅಥವಾ ಪಂಚನಾಮ ಎಲ್ಲಾ ವಾರಸದಾರರ ಆಧಾರ್ ಕಾರ್ಡ್ಗೆ ನೊಂದಾಯಿಸಿಕೊಂಡಿರುವ ಮೊಬೈಲ್ ಗೆ ಬರುವ ಓಟಿಪಿ ನೀಡಬೇಕು. ಆ ಮೂಲಕ ಪೌತಿ-ವಾರಸಾ ಕಾರ್ಯಕ್ಕೆ ಜಿಲ್ಲಾಡಳಿತಕ್ಕೆ ಸಹಕರಿಸಬೇಕೆಂದು ತಿಳಿಸಿದ್ದಾರೆ.





